AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಹೋಗಿದ್ದು ತರವಲ್ಲ, ಸಂಧಾನ ಸಮಿತಿ ಮುಂದೆ ಬನ್ನಿ, ನೇರವಾಗಿ ಚರ್ಚಿಸಿ: ಸುದೀಪ್​ಗೆ ಸಾರಾ ಗೋವಿಂದು ಮನವಿ

Sa Ra Govindu: ನಟ ಸುದೀಪ್ ಅವರು ವಾಣಿಜ್ಯ ಮಂಡಳಿಗೆ ಬಂದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮನವಿ ಮಾಡಿದ್ದಾರೆ.

ಕೋರ್ಟ್​ಗೆ ಹೋಗಿದ್ದು ತರವಲ್ಲ, ಸಂಧಾನ ಸಮಿತಿ ಮುಂದೆ ಬನ್ನಿ, ನೇರವಾಗಿ ಚರ್ಚಿಸಿ: ಸುದೀಪ್​ಗೆ ಸಾರಾ ಗೋವಿಂದು ಮನವಿ
ಸಾರಾ ಗೋವಿಂದು-ಸುದೀಪ್
ಮಂಜುನಾಥ ಸಿ.
|

Updated on: Jul 18, 2023 | 6:20 PM

Share

ಸುದೀಪ್ (Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ (MN Kumar) ನಡುವಿನ ವಿವಾದವನ್ನು ಬಗೆಹರಿಸಲು ಫಿಲಂ ಚೇಂಬರ್ ಯತ್ನಿಸುತ್ತಿದೆ. ಸ್ವತಃ ನಿರ್ಮಾಪಕ ಕುಮಾರ್, ಫಿಲಂ ಚೇಂಬರ್ ಎದುರು ಧರಣಿ ಕೂತಿದ್ದು, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದು (Sa Ra Govindu) ಮಾತನಾಡಿದ್ದು, ಸುದೀಪ್ ಅವರು ಫಿಲಂ ಚೇಂಬರ್​ನ ಸಂಧಾನ ಸಮಿತಿ ಮುಂದೆ ಹಾಜರಾಗಿ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

”ಸುದೀಪ್ ಅವರಿಂದ ಹಣ ಕೊಡಿಸಿ ಎಂದು ನಿರ್ಮಾಪಕ ಎಂಎನ್ ಕುಮಾರ್ ವಾಣಿಜ್ಯ ಮಂಡಳಿಯಲ್ಲಿ ಮನವಿ ಮಾಡಿದ್ದಾರೆ. ಅವರು ಕೇಳಿದ ಕೂಡಲೇ ಹಣ ಕೊಡಿಸಿಬಿಡಲು ಆಗುವುದಿಲ್ಲ. ಸುದೀಪ್ ಸಹ ಸಣ್ಣವರಲ್ಲ. ಚಿತ್ರರಂಗದಲ್ಲಿ ವರ್ಷಗಳಿಂದಲೂ ಇರುವ ವ್ಯಕ್ತಿ. ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದರೆ ಕೇವಲ 10-15 ನಿಮಿಷಗಳಲ್ಲಿ ಈ ಸಮಸ್ಯೆ ಬಗೆಹರಿದುಬಿಡುತ್ತಿತ್ತು. ಈ ಹಿಂದೆಯೂ ಈ ರೀತಿಯ ಹಲವಾರು ಸಮಸ್ಯೆಗಳು ವಾಣಿಜ್ಯ ಮಂಡಳಿಯಲ್ಲಿ ಬಗೆಹರಿದಿವೆ” ಎಂದಿದ್ದಾರೆ.

”ಕಾಲ ಇನ್ನೂ ಮಿಂಚಿಲ್ಲ. ಸುದೀಪ್, ನಮ್ಮವರು, ಕನ್ನಡದ ಕಲಾವಿದರು, ಸುದೀಪ್ ನಮ್ಮ ಹೆಮ್ಮೆ. ಅವರು ಬಂದು ವಾಣಿಜ್ಯ ಮಂಡಳಿಯಲ್ಲಿ ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅವರ ಮೇಲೆ ಯಾರೂ ದೂಷಣೆ ಮಾಡುತ್ತಿಲ್ಲ. ಸುದೀಪ್ ಅವರು ಮಂಡಳಿಗೆ ಬರಬೇಕು, ಕುಮಾರ್ ಹೇಳುತ್ತಿರುವುದು ಸತ್ಯವಾ ಅಥವಾ ಸುಳ್ಳಾ ಎಂಬುದನ್ನು ಸುದೀಪ್ ಅವರೇ ಸಾಬೀತು ಪಡಿಸಬಹುದಾಗಿತ್ತು. ಕುಮಾರ್ ಸುಳ್ಳು ಹೇಳುತ್ತಿದ್ದರೆ ನೀವೇ ಅದನ್ನು ಸಾಬೀತು ಮಾಡಿ, ನಿಮಗೆ ಅವಕಾಶ ಇದೆ. ಒಬ್ಬ ನಿರ್ಮಾಪಕನ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿರುವುದು ಸರಿಯಲ್ಲ. ಸಮಸ್ಯೆಯನ್ನು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳೋಣ” ಎಂದಿದ್ದಾರೆ ಸಾರಾ ಗೋವಿಂದು.

ಇದನ್ನೂ ಓದಿ: ಸುದೀಪ್ ನನ್ನ ಮಗನಂತೆ, ನನ್ನ ಮಗನನ್ನು ನಾನು ಬಿಟ್ಟುಕೊಡಲ್ಲ: ರವಿಚಂದ್ರನ್

”ಸುದೀಪ್ ಅವರಿಂದ ಸಾಕಷ್ಟು ಜನರಿಗೆ ಸಹಾಯ ಆಗಿದೆ. ಅವರೇನು ಮಹಾನ್ ತಪ್ಪು ಮಾಡಿಲ್ಲ, ಅವರು ಕನ್ನಡ ಚಿತ್ರರಂಗದವರು. ಕುಮಾರ್ ಹೇಳುತ್ತಿದ್ದಾರೆ, ಸುದೀಪ್ ಎದುರಿಗೆ ನಾನು ಸಾಬೀತು ಪಡಿಸುತ್ತೇನೆ ಎಂದು. ಸುದೀಪ್ ಸಹ ಹಾಗೆಯೇ ಬಂದು ಅವರ ವಾದ ಮಂಡಿಸಲಿ, ಯಾರದ್ದು ಸರಿಯೋ ತೀರ್ಮಾನ ಆಗಿಬಿಡಲಿ” ಎಂದಿದ್ದಾರೆ ಸಾರಾ ಗೋವಿಂದು.

ನಿರ್ಮಾಪಕ ಎಂಎನ್ ಕುಮಾರ್ ಅವರು ಸುದೀಪ್ ವಿರುದ್ಧ ಆರೋಪ ಮಾಡಿದ್ದು, ಸುದೀಪ್ ತಮ್ಮಿಂದ ಅಡ್ವಾನ್ಸ್ ಹಣ ಪಡೆದು ವರ್ಷಗಳಾದರು ಸಿನಿಮಾ ಮಾಡಿಕೊಟ್ಟಿಲ್ಲ, ಡೇಟ್ಸ್ ಸಹ ಕೊಡುತ್ತಿಲ್ಲ, ಹಣವನ್ನೂ ವಾಪಸ್ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಕುಮಾರ್ ಜೊತೆಗೆ ಸುರೇಶ್ ಆ ನಂತರ ರೆಹಮಾನ್ ಸಹ ಸುದೀಪ್ ವಿರುದ್ಧ ಇದೇ ಮಾದರಿಯ ಆರೋಪಗಳನ್ನು ಮಾಡಿದ್ದರು. ಇದೀಗ ಸುದೀಪ್, ತಮ್ಮ ವಿರುದ್ಧ ಆರೋಪ ಮಾಡಿರುವ ನಿರ್ಮಾಪಕರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಿರ್ಮಾಪಕರ ವಿರುದ್ಧ ಹತ್ತು ಕೋಟಿ ಮೌಲ್ಯದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ