AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜಾ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ; ಅರ್ಜುನ್ ಸರ್ಜಾಗೆ ಮಾತೃವಿಯೋಗ

ಲಕ್ಷ್ಮಿದೇವಮ್ಮ ನಿಧನದಿಂದ ಇಡೀ ಸರ್ಜಾ ಕುಟುಂಬ ದುಃಖದಲ್ಲಿ ಮುಳುಗಿದೆ.

ಸರ್ಜಾ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ; ಅರ್ಜುನ್ ಸರ್ಜಾಗೆ ಮಾತೃವಿಯೋಗ
ಅರ್ಜುನ್ ಸರ್ಜಾ-ತಾಯಿ
TV9 Web
| Edited By: |

Updated on:Jul 23, 2022 | 3:31 PM

Share

ಸರ್ಜಾ ಕುಟುಂಬದಲ್ಲಿ (Sarja Family) ಮತ್ತೆ ದುಃಖ ಆವರಿಸಿದೆ. ಅರ್ಜುನ್ ಸರ್ಜಾ (Arjun Sarja Mother) ತಾಯಿ ಲಕ್ಷ್ಮಿದೇವಿ ಅವರು ಇಂದು (ಜುಲೈ 23) ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಶೀಘ್ರವೇ ಕುಟುಂಬದವರಿಂದ ಅಧಿಕೃತ ಘೋಷಣೆ ಆಗಲಿದೆ. ಲಕ್ಷ್ಮಿದೇವಮ್ಮ ನಿಧನದಿಂದ ಇಡೀ ಸರ್ಜಾ ಕುಟುಂಬ ದುಃಖದಲ್ಲಿ ಮುಳುಗಿದೆ.

ಲಕ್ಷ್ಮಿ ದೇವಿ ಅವರು ಶಕ್ತಿಪ್ರಸಾದ್ ಅವರ ಪತ್ನಿ. ಧ್ರುವ ಸರ್ಜಾಗೆ ಅಜ್ಜಿ. ಲಕ್ಷ್ಮೀ ದೇವಿಗೆ ಕೆಲ ದಿನಗಳಿಂದ ಅನಾರೋಗ್ಯ ಕಾಡಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ. ಅವರ ನಿಧನ ವಾರ್ತೆಯಿಂದ ಸರ್ಜಾ ಕುಟುಂಬ ಮತ್ತೆ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

2020ರ ಜೂನ್ 7ರಂದು ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಬದುಕಿ ಬಾಳಬೇಕಿದ್ದ ಚಿರು ಅವರು ಹೃದಯಾಘಾತದಿಂದ ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರ ನಿಧನದಿಂದ ಇಡೀ ಕುಟುಂಬ ಶಾಕ್​ಗೆ ಒಳಗಾಗಿತ್ತು. ಮೇಘನಾ ರಾಜ್​ಗೆ ಮಗು ಜನಿಸಿದ ನಂತರದಲ್ಲಿ ಈ ನೋವಿನಿಂದ ಕುಟುಂಬ ನಿಧಾನವಾಗಿ ಹೊರ ಬರುತ್ತಿದೆ. ಹೀಗಿರುವಾಗಲೇ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಗಿದೆ.

ಇದನ್ನೂ ಓದಿ: ಚಿರು ನೆನಪಿಸಿಕೊಂಡು ಭಾವನಾತ್ಮಕ ಸಂದೇಶ ನೀಡಿದ ಅರ್ಜುನ್ ಸರ್ಜಾ

ಮೂಲಗಳ ಪ್ರಕಾರ ಲಕ್ಷ್ಮೀ ದೇವಿ ಅವರ ಅಂತ್ಯಕ್ರಿಯೆ ಇಂದು ರಾತ್ರಿಯೇ ನೆರವೇರಲಿದೆ. ಸರ್ಜಾ ಕುಟುಂಬದವರು ಹಾಗೂ ಆಪ್ತರಷ್ಟೇ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗೆ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅವರ ಹೊಸ ಸಿನಿಮಾ ಲಾಂಚ್ ಆಗಿದೆ. ಈ ಚಿತ್ರದಲ್ಲಿ ಅಪ್ಪ-ಮಗಳು ಇಬ್ಬರೂ ನಟಿಸುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ತಂಡಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

Published On - 3:09 pm, Sat, 23 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್