AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜು.24ಕ್ಕೆ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ತೆರೆಗೆ; ಕನ್ನಡದಲ್ಲೊಂದು ಹೊಸ ಪ್ರಯತ್ನ

‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನೀರು ಮತ್ತು ಆಹಾರದ ಮಹತ್ವ ಹಾಗೂ ಸರ್ಕಾರದ ಪಡಿತರ ವ್ಯವಸ್ಥೆಯನ್ನು ಸಾರುವ ಈ ಚಿತ್ರ, ರೇಷನ್ ಅಂಗಡಿಗಳ ಪ್ರಾಮುಖ್ಯತೆಯ ಕುರಿತು ಮೂಡಿಬಂದ ದೇಶದ ಮೊದಲ ಚಲನಚಿತ್ರವಾಗಿದೆ. ಕುಮಾರ್ ಬಂಗಾರಪ್ಪ ಮತ್ತು ರಾಗಿಣಿ ದ್ವಿವೇದಿ ಮುಖ್ಯ ಭೂಮಿಕೆಯಲ್ಲಿದ್ದು, ಸಚಿವರಾದ ಕೆ.ಎಚ್. ಮುನಿಯಪ್ಪ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.

ಜು.24ಕ್ಕೆ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ತೆರೆಗೆ; ಕನ್ನಡದಲ್ಲೊಂದು ಹೊಸ ಪ್ರಯತ್ನ
ಸರ್ಕಾರಿ ನ್ಯಾಯ ಬೆಲೆ ಅಂಗಡಿ
ರಾಜೇಶ್ ದುಗ್ಗುಮನೆ
|

Updated on:Jul 04, 2026 | 11:55 AM

Share

ಮುಖ್ಯಾಂಶಗಳು

  • ಪಡಿತರ ವ್ಯವಸ್ಥೆ ಮತ್ತು ಆಹಾರದ ಮಹತ್ವ ಸಾರುವ 'ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ
  • ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ: ಚಿತ್ರದ ಪ್ರಮುಖ ಪಾತ್ರಧಾರಿಗಳು
  • ತಾಂತ್ರಿಕ ವರ್ಗ ಮತ್ತು ನಿರ್ಮಾಣ: 'ಸರ್ಕಾರಿ ನ್ಯಾಯ ಬೆಲೆ ಅಂಗಡಿ'ಯ ಹಿಂಬದಿ ಶಕ್ತಿ

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಸಿನಿಮಾ ಆರಂಭದಲ್ಲಿ ಟೈಟಲ್ ಮೂಲಕ ಗಮನ ಸೆಳೆದಿತ್ತು. ಈಗ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಹೆಸರಿನ ವಿಭಿನ್ನ ಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಮನುಷ್ಯನ ಮೂಲಭೂತ ಅಗತ್ಯಗಳಾದ ನೀರು ಮತ್ತು ಆಹಾರದ ಮಹತ್ವವನ್ನು ಸಾರುವ ಹಾಗೂ ಸರ್ಕಾರದ ಪಡಿತರ ವ್ಯವಸ್ಥೆಯ ಹಿನ್ನೆಲೆಯನ್ನು ಇದು ಒಳಗೊಂಡಿದೆ ಎಂಬುದು ವಿಶೇಷ. ರೇಷನ್ ಅಂಗಡಿಗಳ ಪ್ರಾಮುಖ್ಯತೆ ಮತ್ತು ಅವುಗಳ ಸುತ್ತ ನಡೆಯುವ ಕಥಾಹಂದರ ಹೊಂದಿರುವ ದೇಶದ ಮೊದಲ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

ಇತ್ತೀಚೆಗೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಚಿತ್ರದ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಿದರು. ಇದೇ ವೇಳೆ ಚಿತ್ರತಂಡಕ್ಕೆ ಶುಭ ಹಾರೈಸಿದ ಸಚಿವರು. ಚಿತ್ರದ ತಾಂತ್ರಿಕ ವರ್ಗದ ಪ್ರಯತ್ನವನ್ನು ಶ್ಲಾಘಿಸಿದರು.

ಕುಮಾರ್ ಬಂಗಾರಪ್ಪ – ರಾಗಿಣಿ ದ್ವಿವೇದಿ ಮುಖ್ಯ ಭೂಮಿಕೆ

ಜಯಶಂಕರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ತೇಜು ಚೆಲುವಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ಮಾಜಿ ಸಚಿವ ಹಾಗೂ ನಟ ಕುಮಾರ್ ಬಂಗಾರಪ್ಪ, ಗ್ಲಾಮರಸ್ ನಟಿ ರಾಗಿಣಿ ದ್ವಿವೇದಿ ಮತ್ತು ಹಿರಿಯ ನಟ ದೊಡ್ಡಣ್ಣ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘದ ಹಾಲಿ ಕಾರ್ಯದರ್ಶಿ ಭಾ.ಮಾ. ಗಿರೀಶ್ ಅವರು ತಂಡಕ್ಕೆ ಬೆಂಬಲ ನೀಡಿದ್ದಾರೆ.

ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು, ಸಾತ್ವಿಕ್ ಪವನ್ ಅವರು ನಿರ್ದೇಶನ ಹಾಗೂ ಛಾಯಾಗ್ರಹಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅನಂತ್ ಆರ್ಯನ್ ಮತ್ತು ಪ್ರವೀಣ್ ಅವರ ಜಂಟಿ ಸಂಗೀತ ನಿರ್ದೇಶನವಿದ್ದು, ನವೀನ್ ಸಜ್ಜು, ಅನುರಾಧ ಭಟ್ ಮತ್ತು ಶಮಿತಾ ಮಲ್ನಾಡ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡುಗಳು ಈಗಾಗಲೇ ಸದ್ದು ಮಾಡುತ್ತಿವೆ.

ಇದನ್ನೂ ಓದಿ: ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ

ಇತ್ತೀಚೆಗೆ ಚಿತ್ರದ ‘ಟೈಟಲ್ ಟ್ರ್ಯಾಕ್’ ಬಿಡುಗಡೆಯಾಗಿ ಗಮನ ಸೆಳೆದಿದೆ. ಸಿನಿಮಾಗೆ ಸಂಬಂಧಿಸಿದ ಅಪ್ಡೇಟ್‌ಗಳನ್ನು ‘Aiplex Music’ ಯುಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ. ‘ಶ್ರೀಧರ್ ಕೃಪ ಕಂಬೈನ್ಸ್’ ಸಂಸ್ಥೆಯ ಶ್ರೀಧರ್ ಅವರು ಈ ಚಿತ್ರವನ್ನು ಇಡೀ ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Sat, 4 July 26

Follow Us
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ