AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​

ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 6:52 PM

Share

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಬಂದಿದೆ ಎಂದು ಇಂದು ಆಸ್ಪತ್ರೆ ಸೇರಿದವರು ನಾಳೆ ಎನ್ನುವ ವೇಳೆಗೆ ಮೃತಪಟ್ಟ ಸಾಕಷ್ಟು ಉದಾಹರಣೆ ಇದೆ. ಮೊದಲ ಅಲೆಗಿಂತ ಭೀಕರವಾಗಿ ಎರಡನೆ ಅಲೆ ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಮೂಡಿಸುವ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ವಿಡಿಯೋ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಟ ನೀನಾಸಂ ಸತೀಶ್​ ಕೂಡ ಈ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಅವರ ದೊಡ್ಡಮ್ಮ ಇತ್ತೀಚೆಗೆ ಮೃತಪಟ್ಟಿದ್ದರಂತೆ. ಅವರ ಮುಖ ನೋಡಲು ಸತೀಶ್​ ಅವರಿಗೆ ಸಾಧ್ಯವಾಗಿಲ್ಲ.

ಈ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿರುವ ನೀನಾಸಂ ಸತೀಶ್​, ಪ್ರತಿಯೊಬ್ಬರೂ ಎಚ್ಚರಿಕೆ ಕೊಡುತ್ತಾ ಇದಾರೆ. ಈ ಪರಿಸ್ಥಿತಿ ಬರೋಕೆ ನಾವೆ ಕಾರಣ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ವೈದ್ಯರು ಹೇಳುತ್ತಲೇ ಬಂದಿದ್ದರು. ಆದರೆ ನಾವು ಅದನ್ನು ಪಾಲನೆ ಮಾಡಿಲ್ಲ. ಈ ವೈರಸ್​ ರೂಪಾಂತರಗೊಂಡಿದೆ. ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ನನ್ನ ದೊಡ್ಡಮ್ಮ ಸತ್ತಿದ್ದರು. ಆದರೆ, ಕೊನೆಯ ಬಾರಿ ನನಗೆ ಅವರ ಮುಖ ನೋಡಲೂ ಆಗಲಿಲ್ಲ. ಇದಕ್ಕೆ ಯಾರನ್ನೂ ನಾವು ಬಯ್ಯೋಕೆ ಆಗಲ್ಲ. ನಿಮಗೆ ವೈರಸ್​ ಬಂದಿದ್ದರೆ ಅದು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಿ. ಅದೇ ನೀವು ಮಾಡುವ ದೊಡ್ಡ ಸಹಾಯ. ನೀವು ಸೇಫ್​ ಆಗಿರಿ, ಬೇರೆಯವರಿಗೂ ಸೇಫ್​ ಆಗಿರೋಕೆ ಸಹಾಯ ಮಾಡಿ ಎಂದು ಸತೀಶ್​ ಮನವಿ ಮಾಡಿದ್ದಾರೆ.

ನೀನಾಸಂ ಸತೀಶ್​ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿವೆ. ಪರಿಮಳ ಲಾಡ್ಜ್​, ಗೋದನ್ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: 100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ