AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​

ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 6:52 PM

Share

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಬಂದಿದೆ ಎಂದು ಇಂದು ಆಸ್ಪತ್ರೆ ಸೇರಿದವರು ನಾಳೆ ಎನ್ನುವ ವೇಳೆಗೆ ಮೃತಪಟ್ಟ ಸಾಕಷ್ಟು ಉದಾಹರಣೆ ಇದೆ. ಮೊದಲ ಅಲೆಗಿಂತ ಭೀಕರವಾಗಿ ಎರಡನೆ ಅಲೆ ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಮೂಡಿಸುವ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ವಿಡಿಯೋ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಟ ನೀನಾಸಂ ಸತೀಶ್​ ಕೂಡ ಈ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಅವರ ದೊಡ್ಡಮ್ಮ ಇತ್ತೀಚೆಗೆ ಮೃತಪಟ್ಟಿದ್ದರಂತೆ. ಅವರ ಮುಖ ನೋಡಲು ಸತೀಶ್​ ಅವರಿಗೆ ಸಾಧ್ಯವಾಗಿಲ್ಲ.

ಈ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿರುವ ನೀನಾಸಂ ಸತೀಶ್​, ಪ್ರತಿಯೊಬ್ಬರೂ ಎಚ್ಚರಿಕೆ ಕೊಡುತ್ತಾ ಇದಾರೆ. ಈ ಪರಿಸ್ಥಿತಿ ಬರೋಕೆ ನಾವೆ ಕಾರಣ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ವೈದ್ಯರು ಹೇಳುತ್ತಲೇ ಬಂದಿದ್ದರು. ಆದರೆ ನಾವು ಅದನ್ನು ಪಾಲನೆ ಮಾಡಿಲ್ಲ. ಈ ವೈರಸ್​ ರೂಪಾಂತರಗೊಂಡಿದೆ. ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ನನ್ನ ದೊಡ್ಡಮ್ಮ ಸತ್ತಿದ್ದರು. ಆದರೆ, ಕೊನೆಯ ಬಾರಿ ನನಗೆ ಅವರ ಮುಖ ನೋಡಲೂ ಆಗಲಿಲ್ಲ. ಇದಕ್ಕೆ ಯಾರನ್ನೂ ನಾವು ಬಯ್ಯೋಕೆ ಆಗಲ್ಲ. ನಿಮಗೆ ವೈರಸ್​ ಬಂದಿದ್ದರೆ ಅದು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಿ. ಅದೇ ನೀವು ಮಾಡುವ ದೊಡ್ಡ ಸಹಾಯ. ನೀವು ಸೇಫ್​ ಆಗಿರಿ, ಬೇರೆಯವರಿಗೂ ಸೇಫ್​ ಆಗಿರೋಕೆ ಸಹಾಯ ಮಾಡಿ ಎಂದು ಸತೀಶ್​ ಮನವಿ ಮಾಡಿದ್ದಾರೆ.

ನೀನಾಸಂ ಸತೀಶ್​ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿವೆ. ಪರಿಮಳ ಲಾಡ್ಜ್​, ಗೋದನ್ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: 100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ