AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​

ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 6:52 PM

Share

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಬಂದಿದೆ ಎಂದು ಇಂದು ಆಸ್ಪತ್ರೆ ಸೇರಿದವರು ನಾಳೆ ಎನ್ನುವ ವೇಳೆಗೆ ಮೃತಪಟ್ಟ ಸಾಕಷ್ಟು ಉದಾಹರಣೆ ಇದೆ. ಮೊದಲ ಅಲೆಗಿಂತ ಭೀಕರವಾಗಿ ಎರಡನೆ ಅಲೆ ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಮೂಡಿಸುವ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ವಿಡಿಯೋ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಟ ನೀನಾಸಂ ಸತೀಶ್​ ಕೂಡ ಈ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಅವರ ದೊಡ್ಡಮ್ಮ ಇತ್ತೀಚೆಗೆ ಮೃತಪಟ್ಟಿದ್ದರಂತೆ. ಅವರ ಮುಖ ನೋಡಲು ಸತೀಶ್​ ಅವರಿಗೆ ಸಾಧ್ಯವಾಗಿಲ್ಲ.

ಈ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿರುವ ನೀನಾಸಂ ಸತೀಶ್​, ಪ್ರತಿಯೊಬ್ಬರೂ ಎಚ್ಚರಿಕೆ ಕೊಡುತ್ತಾ ಇದಾರೆ. ಈ ಪರಿಸ್ಥಿತಿ ಬರೋಕೆ ನಾವೆ ಕಾರಣ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ವೈದ್ಯರು ಹೇಳುತ್ತಲೇ ಬಂದಿದ್ದರು. ಆದರೆ ನಾವು ಅದನ್ನು ಪಾಲನೆ ಮಾಡಿಲ್ಲ. ಈ ವೈರಸ್​ ರೂಪಾಂತರಗೊಂಡಿದೆ. ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ನನ್ನ ದೊಡ್ಡಮ್ಮ ಸತ್ತಿದ್ದರು. ಆದರೆ, ಕೊನೆಯ ಬಾರಿ ನನಗೆ ಅವರ ಮುಖ ನೋಡಲೂ ಆಗಲಿಲ್ಲ. ಇದಕ್ಕೆ ಯಾರನ್ನೂ ನಾವು ಬಯ್ಯೋಕೆ ಆಗಲ್ಲ. ನಿಮಗೆ ವೈರಸ್​ ಬಂದಿದ್ದರೆ ಅದು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಿ. ಅದೇ ನೀವು ಮಾಡುವ ದೊಡ್ಡ ಸಹಾಯ. ನೀವು ಸೇಫ್​ ಆಗಿರಿ, ಬೇರೆಯವರಿಗೂ ಸೇಫ್​ ಆಗಿರೋಕೆ ಸಹಾಯ ಮಾಡಿ ಎಂದು ಸತೀಶ್​ ಮನವಿ ಮಾಡಿದ್ದಾರೆ.

ನೀನಾಸಂ ಸತೀಶ್​ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿವೆ. ಪರಿಮಳ ಲಾಡ್ಜ್​, ಗೋದನ್ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: 100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ