AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​

ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 6:52 PM

Share

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಬಂದಿದೆ ಎಂದು ಇಂದು ಆಸ್ಪತ್ರೆ ಸೇರಿದವರು ನಾಳೆ ಎನ್ನುವ ವೇಳೆಗೆ ಮೃತಪಟ್ಟ ಸಾಕಷ್ಟು ಉದಾಹರಣೆ ಇದೆ. ಮೊದಲ ಅಲೆಗಿಂತ ಭೀಕರವಾಗಿ ಎರಡನೆ ಅಲೆ ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಮೂಡಿಸುವ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ವಿಡಿಯೋ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಟ ನೀನಾಸಂ ಸತೀಶ್​ ಕೂಡ ಈ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಅವರ ದೊಡ್ಡಮ್ಮ ಇತ್ತೀಚೆಗೆ ಮೃತಪಟ್ಟಿದ್ದರಂತೆ. ಅವರ ಮುಖ ನೋಡಲು ಸತೀಶ್​ ಅವರಿಗೆ ಸಾಧ್ಯವಾಗಿಲ್ಲ.

ಈ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿರುವ ನೀನಾಸಂ ಸತೀಶ್​, ಪ್ರತಿಯೊಬ್ಬರೂ ಎಚ್ಚರಿಕೆ ಕೊಡುತ್ತಾ ಇದಾರೆ. ಈ ಪರಿಸ್ಥಿತಿ ಬರೋಕೆ ನಾವೆ ಕಾರಣ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ವೈದ್ಯರು ಹೇಳುತ್ತಲೇ ಬಂದಿದ್ದರು. ಆದರೆ ನಾವು ಅದನ್ನು ಪಾಲನೆ ಮಾಡಿಲ್ಲ. ಈ ವೈರಸ್​ ರೂಪಾಂತರಗೊಂಡಿದೆ. ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ನನ್ನ ದೊಡ್ಡಮ್ಮ ಸತ್ತಿದ್ದರು. ಆದರೆ, ಕೊನೆಯ ಬಾರಿ ನನಗೆ ಅವರ ಮುಖ ನೋಡಲೂ ಆಗಲಿಲ್ಲ. ಇದಕ್ಕೆ ಯಾರನ್ನೂ ನಾವು ಬಯ್ಯೋಕೆ ಆಗಲ್ಲ. ನಿಮಗೆ ವೈರಸ್​ ಬಂದಿದ್ದರೆ ಅದು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಿ. ಅದೇ ನೀವು ಮಾಡುವ ದೊಡ್ಡ ಸಹಾಯ. ನೀವು ಸೇಫ್​ ಆಗಿರಿ, ಬೇರೆಯವರಿಗೂ ಸೇಫ್​ ಆಗಿರೋಕೆ ಸಹಾಯ ಮಾಡಿ ಎಂದು ಸತೀಶ್​ ಮನವಿ ಮಾಡಿದ್ದಾರೆ.

ನೀನಾಸಂ ಸತೀಶ್​ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿವೆ. ಪರಿಮಳ ಲಾಡ್ಜ್​, ಗೋದನ್ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: 100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ