AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​

ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​
Follow us
ರಾಜೇಶ್ ದುಗ್ಗುಮನೆ
|

Updated on: Apr 29, 2021 | 6:52 PM

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಬಂದಿದೆ ಎಂದು ಇಂದು ಆಸ್ಪತ್ರೆ ಸೇರಿದವರು ನಾಳೆ ಎನ್ನುವ ವೇಳೆಗೆ ಮೃತಪಟ್ಟ ಸಾಕಷ್ಟು ಉದಾಹರಣೆ ಇದೆ. ಮೊದಲ ಅಲೆಗಿಂತ ಭೀಕರವಾಗಿ ಎರಡನೆ ಅಲೆ ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಮೂಡಿಸುವ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ವಿಡಿಯೋ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಟ ನೀನಾಸಂ ಸತೀಶ್​ ಕೂಡ ಈ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಅವರ ದೊಡ್ಡಮ್ಮ ಇತ್ತೀಚೆಗೆ ಮೃತಪಟ್ಟಿದ್ದರಂತೆ. ಅವರ ಮುಖ ನೋಡಲು ಸತೀಶ್​ ಅವರಿಗೆ ಸಾಧ್ಯವಾಗಿಲ್ಲ.

ಈ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿರುವ ನೀನಾಸಂ ಸತೀಶ್​, ಪ್ರತಿಯೊಬ್ಬರೂ ಎಚ್ಚರಿಕೆ ಕೊಡುತ್ತಾ ಇದಾರೆ. ಈ ಪರಿಸ್ಥಿತಿ ಬರೋಕೆ ನಾವೆ ಕಾರಣ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ವೈದ್ಯರು ಹೇಳುತ್ತಲೇ ಬಂದಿದ್ದರು. ಆದರೆ ನಾವು ಅದನ್ನು ಪಾಲನೆ ಮಾಡಿಲ್ಲ. ಈ ವೈರಸ್​ ರೂಪಾಂತರಗೊಂಡಿದೆ. ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ನನ್ನ ದೊಡ್ಡಮ್ಮ ಸತ್ತಿದ್ದರು. ಆದರೆ, ಕೊನೆಯ ಬಾರಿ ನನಗೆ ಅವರ ಮುಖ ನೋಡಲೂ ಆಗಲಿಲ್ಲ. ಇದಕ್ಕೆ ಯಾರನ್ನೂ ನಾವು ಬಯ್ಯೋಕೆ ಆಗಲ್ಲ. ನಿಮಗೆ ವೈರಸ್​ ಬಂದಿದ್ದರೆ ಅದು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಿ. ಅದೇ ನೀವು ಮಾಡುವ ದೊಡ್ಡ ಸಹಾಯ. ನೀವು ಸೇಫ್​ ಆಗಿರಿ, ಬೇರೆಯವರಿಗೂ ಸೇಫ್​ ಆಗಿರೋಕೆ ಸಹಾಯ ಮಾಡಿ ಎಂದು ಸತೀಶ್​ ಮನವಿ ಮಾಡಿದ್ದಾರೆ.

ನೀನಾಸಂ ಸತೀಶ್​ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿವೆ. ಪರಿಮಳ ಲಾಡ್ಜ್​, ಗೋದನ್ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: 100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​