AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​

ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ಕೊನೆಯ ಬಾರಿಗೆ ಅವರ ಮುಖ ನೋಡಲೂ ಆಗಿಲ್ಲ; ಆಪ್ತರನ್ನು ಕಳೆದುಕೊಂಡು ಭಾವುಕರಾದ ನೀನಾಸಂ ಸತೀಶ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 6:52 PM

Share

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಬಂದಿದೆ ಎಂದು ಇಂದು ಆಸ್ಪತ್ರೆ ಸೇರಿದವರು ನಾಳೆ ಎನ್ನುವ ವೇಳೆಗೆ ಮೃತಪಟ್ಟ ಸಾಕಷ್ಟು ಉದಾಹರಣೆ ಇದೆ. ಮೊದಲ ಅಲೆಗಿಂತ ಭೀಕರವಾಗಿ ಎರಡನೆ ಅಲೆ ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಮೂಡಿಸುವ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ವಿಡಿಯೋ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಟ ನೀನಾಸಂ ಸತೀಶ್​ ಕೂಡ ಈ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಅವರ ದೊಡ್ಡಮ್ಮ ಇತ್ತೀಚೆಗೆ ಮೃತಪಟ್ಟಿದ್ದರಂತೆ. ಅವರ ಮುಖ ನೋಡಲು ಸತೀಶ್​ ಅವರಿಗೆ ಸಾಧ್ಯವಾಗಿಲ್ಲ.

ಈ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿರುವ ನೀನಾಸಂ ಸತೀಶ್​, ಪ್ರತಿಯೊಬ್ಬರೂ ಎಚ್ಚರಿಕೆ ಕೊಡುತ್ತಾ ಇದಾರೆ. ಈ ಪರಿಸ್ಥಿತಿ ಬರೋಕೆ ನಾವೆ ಕಾರಣ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ವೈದ್ಯರು ಹೇಳುತ್ತಲೇ ಬಂದಿದ್ದರು. ಆದರೆ ನಾವು ಅದನ್ನು ಪಾಲನೆ ಮಾಡಿಲ್ಲ. ಈ ವೈರಸ್​ ರೂಪಾಂತರಗೊಂಡಿದೆ. ಅನೇಕರಿಗೆ ರೋಗದ ಲಕ್ಷಣವೇ ಕಾಣಿಸುತ್ತಿಲ್ಲ. ಹೊರಗೆ ಓಡಾಡುವರು ಮಾಸ್ಕ್​ ಧರಿಸಿ ಎಂದು ನೀನಾಸಂ ಸತೀಶ್​ ಮನವಿ ಮಾಡಿಕೊಂಡಿದ್ದಾರೆ.

ನನ್ನ ದೊಡ್ಡಮ್ಮ ಸತ್ತಿದ್ದರು. ಆದರೆ, ಕೊನೆಯ ಬಾರಿ ನನಗೆ ಅವರ ಮುಖ ನೋಡಲೂ ಆಗಲಿಲ್ಲ. ಇದಕ್ಕೆ ಯಾರನ್ನೂ ನಾವು ಬಯ್ಯೋಕೆ ಆಗಲ್ಲ. ನಿಮಗೆ ವೈರಸ್​ ಬಂದಿದ್ದರೆ ಅದು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಿ. ಅದೇ ನೀವು ಮಾಡುವ ದೊಡ್ಡ ಸಹಾಯ. ನೀವು ಸೇಫ್​ ಆಗಿರಿ, ಬೇರೆಯವರಿಗೂ ಸೇಫ್​ ಆಗಿರೋಕೆ ಸಹಾಯ ಮಾಡಿ ಎಂದು ಸತೀಶ್​ ಮನವಿ ಮಾಡಿದ್ದಾರೆ.

ನೀನಾಸಂ ಸತೀಶ್​ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿವೆ. ಪರಿಮಳ ಲಾಡ್ಜ್​, ಗೋದನ್ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: 100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!