AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯ ಸಂಚಾರಿ ವಿಜಯ್​ ಅಗಲಿಕೆ ನೋವಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ನೀನಾಸಂ ಸತೀಶ್​

ಸಂಚಾರಿ ವಿಜಯ್​ ಮೃತಪಟ್ಟ ನೋವನ್ನು ಸತೀಶ್​ಗೆ ಮರೆಯೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಜನ್ಮದಿನ ಆಚರಿಸಿಕೊಳ್ಳಲೇ ಬಾರದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಗೆಳೆಯ ಸಂಚಾರಿ ವಿಜಯ್​ ಅಗಲಿಕೆ ನೋವಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ನೀನಾಸಂ ಸತೀಶ್​
ರಾಜೇಶ್ ದುಗ್ಗುಮನೆ
|

Updated on: Jun 18, 2021 | 9:52 PM

Share

ನೀನಾಸಂ ಸತೀಶ್​ ಹಾಗೂ ಸಂಚಾರಿ ವಿಜಯ್​ ಆಪ್ತ ಗೆಳೆಯರಾಗಿದ್ದರು. ವಿಜಯ್​ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರನ್ನು ಕಳೆದುಕೊಂಡಿದ್ದಕ್ಕೆ ವಿಜಯ್​ಗೆ ಸಾಕಷ್ಟು ನೋವುಂಟಾಗಿದೆ. ಈ ನೋವಿನ ಹಿನ್ನೆಲೆಯಲ್ಲಿ ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಸತೀಶ್​ ಘೋಷಣೆ ಮಾಡಿದ್ದಾರೆ.

ಜೂನ್​ 20 ಸತೀಶ್​ ಜನ್ಮದಿನ. ಪ್ರತಿ ವರ್ಷ ಅವರು ಅಭಿಮಾನಿಗಳ ಜತೆ ಸೇರಿ ಕೇಕ್​ ಕತ್ತರಿಸುತ್ತಿದ್ದರು. ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದರು. ಆದರೆ, ಸಂಚಾರಿ ವಿಜಯ್​ ಮೃತಪಟ್ಟ ನೋವನ್ನು ಸತೀಶ್​ಗೆ ಮರೆಯೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಜನ್ಮದಿನ ಆಚರಿಸಿಕೊಳ್ಳಲೇ ಬಾರದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಗೆಳೆಯರೇ ಇದೇ 20 ನನ್ನ ಹುಟ್ಟು ಹಬ್ಬ. ವಿಜಿ ಇಲ್ಲದ ಈ ಸಂದರ್ಭದಲ್ಲಿ ತುಂಬ ನೋವಿನಲ್ಲಿ ನನ್ನ ಗೆಳೆಯರ ಬಳಗವಿದೆ. ಹಾಗಾಗಿ ಆ ದಿನ ಯಾವುದೇ ಸಂಭ್ರಮಗಳಿರುವುದಿಲ್ಲ. ಬಿಡುಗಡೆಯಾಗಬೇಕಿದ್ದ ಪೆಟ್ರೋಮ್ಯಾಕ್ಸ್ ಟೀಸರ್ ಕೂಡ ಮುಂದೂಡಿದ್ದೇವೆ ಥ್ಯಾಂಕ್ ಯೂ’ ಎಂದು ಬರೆದುಕೊಂಡಿದ್ದಾರೆ.

ವಿಜಯ್​ ಆಸ್ಪತ್ರೆಗೆ ದಾಖಲಾಗಿದ್ದ ದಿನ ಮಾಧ್ಯಮಗಳ ಜತೆ ಮಾತನಾಡಿದ್ದ ಸತೀಶ್​, ‘ವಿಜಯ್​ಗೆ ಯಾವುದೇ ತೊಂದರೆ ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಆಪರೇಷನ್​ ಮಾಡಿದ್ದರಿಂದ ಪ್ರಜ್ಞೆ ಬಂದಿಲ್ಲ ಅಷ್ಟೇ’ ಎಂದಿದ್ದರು. ಮರುದಿನ ಮಾತನಾಡಿದ್ದ ಸತೀಶ್​ ‘ನಾನು ಮಾಧ್ಯಮಗಳ ಎದುರು ಸುಳ್ಳು ಹೇಳಿದ್ದೆ. ವಿಜಯ್​ ಆರೋಗ್ಯ ತುಂಬಾ ಗಂಭೀರವಾಗಿತ್ತು. ಆದರೆ, ಅದನ್ನು ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿರಲಿಲ್ಲ. ಅವರು ಇರುವುದಿಲ್ಲ ಎನ್ನುವುದನ್ನು ಕಲ್ಪಿಸಿಕೊಳ್ಳೋಕೆ ಕಷ್ಟ’ ಎಂದು ಅತ್ತಿದ್ದರು.

ಇತ್ತೀಚೆಗೆ ಸಂಚಾರಿ ವಿಜಯ್​ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರ ಸತತ ಪ್ರಯತ್ನಗಳ ನಡುವೆಯೂ ವಿಧಿಯಾಟವೇ ಮೇಲುಗೈ ಸಾಧಿಸಿತು. ಸಂಚಾರಿ ವಿಜಯ್​ ಮೃತಪಟ್ಟ ಬಗ್ಗೆ ಜೂನ್​ 15ರಂದು ವೈದ್ಯರು ಘೋಷಣೆ ಮಾಡಿದರು. ನಂತರ ಅವರ ಕಳೇಬರವನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಗೆ ಕೊಂಡೊಯ್ಯಲಾಯಿತು. ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ಗೆಳೆಯನ ತೋಟದಲ್ಲಿ ವಿಜಯ್​ ಅಂತ್ಯಸಂಸ್ಕಾರ ನೆರವೇರಿತು.

ಇದನ್ನೂ ಓದಿ: Actor Satish Ninasam Help : ದಿನಕ್ಕೆ ಸಾವಿರ ಫುಡ್ ಕಿಟ್ ವಿತರಣೆ ಮಾಡ್ತಿರುವ ನಟ ಸತೀಶ್ ನೀನಾಸಂ!

Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ