AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಸಿನಿಮಾದಲ್ಲಿ ಸತೀಶ್​ ನೀನಾಸಂ ಜೊತೆ ರಿಯಲ್​ ಸ್ನೇಹಿತರ ದಂಡು

ಸತೀಶ್​ ನೀನಾಸಂ ಅಭಿನಯದ ‘ಮ್ಯಾಟ್ನಿ’ ಸಿನಿಮಾ ಏಪ್ರಿಲ್ 5ರಂದು ಬಿಡುಗಡೆ ಆಗಲಿದೆ. ಅವರ ರಿಯಲ್​ ಲೈಫ್​ ಗೆಳೆಯರಾದ ಶಿವರಾಜ್​ ಕೆ.ಆರ್. ಪೇಟೆ, ನಾಗಭೂಷಣ, ಪೂರ್ಣಚಂದ್ರ ಮೈಸೂರು, ದಿಗಂತ್ ದಿವಾಕರ್ ಅವರು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.​ ಸ್ನೇಹಿತರ ಕಾಂಬಿನೇಷನ್​ ಹೇಗಿರಲಿದೆ ಅಂತ ತಿಳಿಯುವ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ.

‘ಮ್ಯಾಟ್ನಿ’ ಸಿನಿಮಾದಲ್ಲಿ ಸತೀಶ್​ ನೀನಾಸಂ ಜೊತೆ ರಿಯಲ್​ ಸ್ನೇಹಿತರ ದಂಡು
‘ಮ್ಯಾಟ್ನಿ’ ಸಿನಿಮಾ ಪಾತ್ರವರ್ಗ
ಮದನ್​ ಕುಮಾರ್​
|

Updated on: Apr 01, 2024 | 7:29 PM

Share

ಕನ್ನಡ ಚಿತ್ರರಂಗದ ಖ್ಯಾತ ನಟ ಸತೀಶ್ ನೀನಾಸಂ (Sathish Ninasam), ‘ಡಿಂಪಲ್ ಕ್ವೀನ್’ ರಚಿತಾ ರಾಮ್, ಅದಿತಿ ಪ್ರಭುದೇವ ನಟಿಸಿರುವ ‘ಮ್ಯಾಟ್ನಿ’ ಸಿನಿಮಾ ಈಗಾಗಲೇ ಟ್ರೇಲರ್ ಹಾಗೂ ಸಾಂಗ್ಸ್​ ಮೂಲಕ ನಿರೀಕ್ಷೆ ಹುಟ್ಟುಹಾಕಿದೆ. ಕೆಲವೇ ದಿನಗಳ ಹಿಂದೆ ನಟ ದರ್ಶನ್ ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ಹೊಸ ಮೆರುಗು ತಂದು ಕೊಟ್ಟರು. ಪಾತ್ರವರ್ಗದ ಕಾರಣದಿಂದಲೂ ‘ಮ್ಯಾಟ್ನಿ’ ಸಿನಿಮಾ (Matinee Movie) ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಸತೀಶ್ ನೀನಾಸಂ, ಅದಿತಿ ಪ್ರಭುದೇವ ಹಾಗೂ ರಚಿತಾ ರಾಮ್ (Rachita Ram) ಮಾತ್ರವಲ್ಲದೆ ಇನ್ನೂ ಅನೇಕ ಕಲಾವಿದರು ನಟಿಸಿದ್ದಾರೆ. ಇದು ಹಾರರ್ ಕಾಮಿಡಿ ಸಿನಿಮಾ. ಇದರಲ್ಲಿ ಸ್ನೇಹಿತರ ಸಂಗಮ ಆಗಿದೆ. ಸತೀಶ್ ನೀನಾಸಂ ಅವರ ಗೆಳಯರಾಗಿ ನಾಗಭೂಷಣ, ಶಿವರಾಜ್​ ಕೆ.ಆರ್. ಪೇಟೆ, ಪೂರ್ಣಚಂದ್ರ ಮೈಸೂರು, ದಿಗಂತ್ ದಿವಾಕರ್ ಅವರು ನಟಿಸಿದ್ದಾರೆ. ನಿಜಜೀವನದಲ್ಲಿಯೂ ಇವರೆಲ್ಲ ಸ್ನೇಹಿತರು ಅನ್ನೋದು ವಿಶೇಷ.

‘ಮ್ಯಾಟ್ನಿ’ ಸಿನಿಮಾದಲ್ಲಿ ನಾಗಭೂಷಣ್ ಅವರು ನೆಕ್ಸನ್ ಎಂಬ ಪಾತ್ರ ಮಾಡಿದ್ದಾರೆ. ನಾಗಭೂಷಣ್ ಮತ್ತು ಸತೀಶ್​ ನೀನಾಸಂ ಅವರು ತೆರೆ ಹಂಚಿಕೊಂಡಿರುವುದು ಇದೇ ಮೊದಲು. ಹಾಸ್ಯದ ಪಾತ್ರಗಳ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾ ಬಂದಿರುವ ಶಿವರಾಜ್ ಕೆ.ಆರ್. ಪೇಟೆ ಅವರು ‘ಮ್ಯಾಟ್ನಿ’ ಚಿತ್ರದಲ್ಲಿ ನವೀನ್ ಎಂಬ ರಿಯಲ್ ಎಸ್ಟೇಟ್​ ಉದ್ಯಮಿಯಾಗಿ ನಟಿಸಿದ್ದಾರೆ. ಶಿವರಾಜ್ ಕೆ.ಆರ್. ಪೇಟೆ ಮತ್ತು ಸತೀಶ್​ ಅವರ ಕಾಂಬಿನೇಷನ್​ನಲ್ಲಿ ಬರುತ್ತಿರುವ 4ನೇ ಸಿನಿಮಾ ಇದು.

ಇದನ್ನೂ ಓದಿ: ದರ್ಶನ್​ ಬರೋತನಕ ‘ಮ್ಯಾಟ್ನಿ’ ಸಮಾರಂಭ; ಬಂದ್ಮೇಲೆ ‘ಡಿ ಬಾಸ್​’ ಪ್ರೋಗ್ರಾಂ: ಸತೀಶ್​ ನೀನಾಸಂ

ಶಿವರಾಜ್ ಕೆ.ಆರ್. ಪೇಟೆ ಅವರಿಗೆ ಕಾಮಿಡಿ ಹೊಸದೇನೂ ಅಲ್ಲ. ಆದರೆ ‘ಮ್ಯಾಟ್ನಿ’ ಸಿನಿಮಾದಲ್ಲಿ ಕಾಮಿಡಿ ಜತೆಗೆ ಹಾರರ್ ಸಹ ಇರುವುದರಿಂದ ಅಭಿಮಾನಿಗಳಿಗೆ ಡಬಲ್ ಮನರಂಜನೆ ಇರಲಿದೆ. ‘ಟಿಕೆಟ್ ತೆಗೆದುಕೊಂಡು ಚಿತ್ರಮಂದಿರದ ಒಳಗೆ ಹೋದರೆ, ಪ್ರೇಕ್ಷಕರಿಗೆ ಈ ಬೇಸಿಗೆಯಲ್ಲೂ ತಂಪಾಗಿ ಸಿನಿಮಾ ನೋಡಿ, ಹೊರಬಂದ ಅನುಭವ ಆಗುತ್ತೆ’ ಎಂದು ಶಿವರಾಜ್ ಕೆ.ಆರ್. ಪೇಟೆ ಹೇಳಿದ್ದಾರೆ. ನಟ ಪೂರ್ಣಚಂದ್ರ ಅವರು ಆನಂದ ಎನ್ನುವ ಗುರೂಜಿ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡಿದ್ದಾರೆ. ‘ನಾವೆಲ್ಲರು ಈ ಚಿತ್ರದಲ್ಲಿ ಮಾತ್ರವಲ್ಲದೇ ರಿಯಲ್ ಲೈಫ್​ನಲ್ಲಿಯೂ ಸ್ನೇಹಿತರಾದ್ದರಿಂದ ನಟಿಸಲು ಇನ್ನಷ್ಟು ಸುಲಭ ಆಯಿತು’ ಎಂದಿದ್ದಾರೆ ಪೂರ್ಣಚಂದ್ರ.

ಇದನ್ನೂ ಓದಿ: ಹಾರರ್ ಸಿನಿಮಾನಲ್ಲಿ ರಚಿತಾ, ಸತೀಶ್ ನೀನಾಸಂ, ‘ಮ್ಯಾಟ್ನಿ’ಗೆ ದರ್ಶನ್ ಬೆಂಬಲ

ಸಿನಿಮಾದಲ್ಲಿ ಬರುವ ಇನ್ನೋರ್ವ ಸ್ನೇಹಿತನ‌ ಪಾತ್ರಕ್ಕೆ ದಿಗಂತ್ ದಿವಾಕರ್ ಅವರು ಬಣ್ಣ ಹಚ್ಚಿದ್ದಾರೆ. ಈವರೆಗೂ ಹಲವು ಸಿನಿಮಾಗಳಲ್ಲಿ ಸಣ್ಣ-ಪುಟ್ಟ ಪಾತ್ರ ಮಾಡಿದ್ದ ಅವರು ಇದೇ ಮೊದಲ ಬಾರಿಗೆ ‘ಮ್ಯಾಟ್ನಿ’ ಸಿನಿಮಾದಲ್ಲಿ ಒಂದು ಪೂರ್ಣಾವಧಿಯ ಪಾತ್ರ ಮಾಡಿದ್ದಾರೆ. ಜಯದೇವ್ ಅಲಿಯಾಸ್ ಜೆಡಿ ಎಂಬ ಪಾತ್ರದಲ್ಲಿ ಅವರು ನಟಿಸಿದ್ದಾರೆ. ‘ಮ್ಯಾಟ್ನಿ’ ಸಿನಿಮಾ ಏಪ್ರಿಲ್ 5ರಂದು ಬಿಡುಗಡೆ ಆಗಲಿದೆ. ಸ್ನೇಹಿತರ ಕಾಂಬಿನೇಷನ್​ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು