‘ಲೂಸಿಯಾ’ ಸಿನಿಮಾಗೆ 10 ವರ್ಷ; ಸೆ.6ಕ್ಕೆ ಚಿತ್ರಮಂದಿರದಲ್ಲಿ ಮರು ಬಿಡುಗಡೆ

ನಿರ್ದೇಶಕ ಪವನ್​ ಕುಮಾರ್​ ಅವರು ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ‘ಲೂಸಿಯಾ’ ಸಿನಿಮಾದಲ್ಲಿ ಅವರು ಹೇಳಿದ ಕಥೆ ಸಖತ್​ ಭಿನ್ನವಾಗಿತ್ತು. ನಟ ಸತೀಶ್​ ನೀನಾಸಂ ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಹೆಚ್ಚಿತ್ತು. 10 ವರ್ಷಗಳನ್ನು ಪೂರೈಸಿರುವ ಕಾರಣಕ್ಕೆ ಸೆ.6ರಂದು ಈ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಲೂಸಿಯಾ’ ಸಿನಿಮಾಗೆ 10 ವರ್ಷ; ಸೆ.6ಕ್ಕೆ ಚಿತ್ರಮಂದಿರದಲ್ಲಿ ಮರು ಬಿಡುಗಡೆ
‘ಲೂಸಿಯಾ’ ಸಿನಿಮಾ ಪೋಸ್ಟರ್​
Follow us
|

Updated on: Aug 31, 2023 | 1:02 PM

ನಟ ಸತೀಶ್​ ನೀನಾಸಂ (Sathish Ninasam) ಅವರು ಕಥೆ ಮತ್ತು ಪಾತ್ರಗಳ ಆಯ್ಕೆಯಲ್ಲಿ ಕಾಳಜಿ ವಹಿಸುತ್ತಾರೆ. ಡಿಫರೆಂಟ್​ ಆದ ಕಥೆಯನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ ‘ಲೂಸಿಯಾ’ ಸಿನಿಮಾ. 2013ರ ಸೆ.6ರಂದು ಬಿಡುಗಡೆ ಆದ ಆ ಚಿತ್ರದ ಬಗ್ಗೆ ಸಿನಿಪ್ರಿಯರು ಈಗಲೂ ಮಾತನಾಡುತ್ತಾರೆ. ಈಗ ‘ಲೂಸಿಯಾ’ ಸಿನಿಮಾ (Lucia Movie) 10 ವರ್ಷಗಳನ್ನು ಪೂರೈಸಿದೆ. ಆ ಪ್ರಯುಕ್ತ ಸೆಪ್ಟೆಂಬರ್​ 6ರಂದು ಈ ಚಿತ್ರ ಮತ್ತೆ ರಿಲೀಸ್​ ಆಗುತ್ತಿದೆ. ಅಂದು ದೊಡ್ಡ ಪರದೆಯಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಈಗ ನೋಡಿ ಎಂಜಾಯ್​ ಮಾಡಬಹುದು. ನಿರ್ದೇಶಕ ಪವನ್​ ಕುಮಾರ್​ (Pawan Kumar) ಅವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟ ಸಿನಿಮಾ ಇದು.

ನಿರ್ದೇಶಕ ಪವನ್​ ಕುಮಾರ್​ ಅವರು ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ‘ಲೂಸಿಯಾ’ ಸಿನಿಮಾದಲ್ಲಿ ಅವರು ಹೇಳಿಕೆ ಕಥೆ ಸಖತ್​ ಭಿನ್ನವಾಗಿತ್ತು. ಕನಸು ಮತ್ತು ವಾಸ್ತವದ ಜಗತ್ತನ್ನು ಒಟ್ಟಾಗಿ ತೋರಿಸುವ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದರು. ಈ ಭಿನ್ನವಾದ ಕಥೆಯನ್ನು ಹೇಳಲು ಅವರು ಬ್ಲಾಕ್​ ಆ್ಯಂಡ್​​ ವೈಟ್​ ಮತ್ತು ಕಲರ್​ ತಂತ್ರ ಬಳಸಿದ್ದರು. ಈ ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಈಗ ಸಿಗುತ್ತಿದೆ. ಅದು ಸಿನಿಪ್ರಿಯರಿಗೆ ಖುಷಿ ನೀಡಿದೆ.

ಇದನ್ನೂ ಓದಿ: Dhoomam Review: ಸಿಗರೇಟ್​ ಬಗ್ಗೆ ಸಂದೇಶ ನೀಡಲು ಎಷ್ಟೆಲ್ಲ ಸರ್ಕಸ್​; ಸರಳವಾಗಿಲ್ಲ ‘ಧೂಮಂ’

‘ಲೂಸಿಯಾ’ ಸಿನಿಮಾದಲ್ಲಿ ಸತೀಶ್​ ನೀನಾಸಂ ಮತ್ತು ಶ್ರುತಿ ಹರಿಹರನ್​ ಅವರು ಜೋಡಿಯಾಗಿ ನಟಿಸಿದ್ದರು. ಇಬ್ಬರ ಕಾಂಬಿನೇಷನ್​ ಬಹಳ ಚೆನ್ನಾಗಿ ಮೂಡಿಬಂದಿತ್ತು. ಅಚ್ಯುತ್​ ಕುಮಾರ್​, ಬಾಲಾಜಿ ಮನೋಹರ್​ ಮುಂತಾದ ಕಲಾವಿದರು ನಿಭಾಯಿಸಿದ ಪಾತ್ರಗಳು ಕೂಡ ಗಮನ ಸೆಳೆದಿದ್ದವು. ಮಂಡ್ಯ ಸೊಗಡಿನ ಭಾಷೆಯಲ್ಲಿ ಸತೀಶ್​ ನೀನಾಸಂ ಅವರು ಹೇಳಿದ ಡೈಲಾಗ್​ಗಳು ತುಂಬ ಕ್ಯಾಚಿ ಆಗಿದ್ದವು. ಒಟ್ಟಾರೆ ಈ ಸಿನಿಮಾದ ಮೇಕಿಂಗ್​ ಡಿಫರೆಂಟ್​ ಆಗಿತ್ತು. ಕ್ರೌಡ್​ ಫಂಡಿಂಗ್​ ಮೂಲಕ ಈ ಚಿತ್ರ ನಿರ್ಮಾಣ ಆಗಿತ್ತು.

ಇದನ್ನೂ ಓದಿ: ‘ಏನಮ್ಮಿ..’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ; ‘ಮ್ಯಾಟ್ನಿ’ ಗೀತೆಗೆ ಮೆಚ್ಚುಗೆ

‘ಲೂಸಿಯಾ’ ಚಿತ್ರದ ಯಶಸ್ಸಿನಲ್ಲಿ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರ ಕೊಡುಗೆ ಕೂಡ ಇದೆ. ಈ ಸಿನಿಮಾದ ಎಲ್ಲ ಹಾಡುಗಳು ಕೂಡ ಸೂಪರ್​ ಹಿಟ್​. ಇಂದಿಗೂ ಕೂಡ ಕೇಳುಗರ ಫೇವರಿಟ್​ ಪಟ್ಟಿಯಲ್ಲಿ ಈ ಹಾಡುಗಳಿಗೆ ಸ್ಥಾನ ಇದೆ. ‘ನೀ ತೊರೆದ ಘಳಿಗೆಯಲಿ..’, ‘ಯಾಕೋ ಬರ್ಲಿಲ್ಲಾ..’, ‘ಜಮ್ಮ ಜಮ್ಮ..’ ಮುಂತಾದ ಹಾಡುಗಳನ್ನು ಜನರು ಈಗಲೂ ಗುನುಗುತ್ತಿದ್ದಾರೆ. ಗಾಯಕ ನವೀನ್​ ಸಜ್ಜು ಅವರಿಗೆ ಈ ಸಿನಿಮಾದಿಂದ ಸಖತ್​ ಜನಪ್ರಿಯತೆ ಸಿಕ್ಕಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.