AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಬಂತು ‘ಮ್ಯಾಟ್ನಿ’ ಸಿನಿಮಾದ ಪಾರ್ಟಿ ಹಾಡು

Party Song: ನೀನಾಸಂ ಸತೀಶ್ ನಟನೆಯ ಹೊಸ ಸಿನಿಮಾದ ಹೊಸ ಪಾರ್ಟಿ ಹಾಡೊಂದು ಬಿಡುಗಡೆ ಆಗಿದೆ.

ಹೊಸ ವರ್ಷಕ್ಕೆ ಬಂತು ‘ಮ್ಯಾಟ್ನಿ’ ಸಿನಿಮಾದ ಪಾರ್ಟಿ ಹಾಡು
ಮಂಜುನಾಥ ಸಿ.
|

Updated on: Dec 31, 2023 | 9:07 PM

Share

ಹೊಸ ವರ್ಷಕ್ಕೆ (New Year) ಎರಡು ಹೊಸ ಪಾರ್ಟಿ ಹಾಡುಗಳು ಕನ್ನಡದಲ್ಲಿ ಬಿಡುಗಡೆ ಆಗಿವೆ. ಯೋಗಿ, ದಿಗಂತ್, ಅಚ್ಯುತ್ ಕುಮಾರ್ ನಟನೆಯ ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದ ಪಾರ್ಟಿ ಹಾಡೊಂದು ಬಿಡುಗಡೆ ಆಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಅದರ ಬೆನ್ನಲ್ಲೆ ಇದೀಗ ನೀನಾಸಂ ಸತೀಶ್ ನಟನೆಯ ಹೊಸ ಸಿನಿಮಾದ ಹೊಸ ಪಾರ್ಟಿ ಹಾಡೊಂದು ಬಿಡುಗಡೆ ಆಗಿದೆ.

ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಸಿನಿಮಾದಲ್ಲಿ ಒಟ್ಟಿಗೆ ನಟಿಸಿ ಹಿಟ್ ನೀಡಿದ್ದರು. ಅದಾದ ಬಳಿಕ ಇದೀಗ ‘ಮ್ಯಾಟ್ನಿ’ ಸಿನಿಮಾದಲ್ಲಿ ಈ ಜೋಡಿ ಒಟ್ಟಿಗೆ ನಟಿಸಿದೆ. ಈ ಸಿನಿಮಾದ “ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡೊಂದು ಹೊಸ ವರ್ಷದ ಸಂದರ್ಭದಲ್ಲಿ ಬಿಡುಗಡೆ ಆಗಿದೆ. ನೀನಾಸಂ ಸತೀಶ್​ರ ಗೆಳೆಯ ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಾಹಿತ್ಯ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ.

ಯುವಪೀಳಿಗೆಯ ಕೇಳುಗರನ್ನು ಸೆಳೆಯುವ ಉದ್ದೇಶದಿಂದ ಕ್ಯಾಚಿ ಲೈನುಗಳನ್ನು ಬಳಸಿಕೊಂಡು ರಚಿಸಿರುವ ಪಾರ್ಟಿ ಹಾಡಿದು. ಹಾಡಿನಲ್ಲಿ ಕುಡಿತದ ಬಗ್ಗೆ ಪಾರ್ಟಿ ಬಗ್ಗೆ ಸಾಲುಗಳಿವೆ. ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ ಶಿವರಾಜ್ ಕೆ.ಆರ್ ಪೇಟೆ, ಮೈಸೂರು ಪೂರ್ಣ ಹೆಜ್ಜೆ ಹಾಕಿದ್ದಾರೆ. ಹೊಸವರ್ಷದ ಹರುಷವನ್ನು ಹೆಚ್ಚಿಸುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ:‘ಮ್ಯಾಟ್ನಿ’ ಸಿನಿಮಾ ಹಾಡಿನ ಶೂಟಿಂಗ್​ನಲ್ಲಿ ಭರ್ಜರಿ ಸ್ಟೆಪ್ ಹಾಕಿದ ನೀನಾಸಂ ಸತೀಶ್; ಹೇಗಿದೆ ನೋಡಿ ಸಾಂಗ್ ಶೂಟ್

ಹಾಡಿನ ಚಿತ್ರೀಕರಣವನ್ನು ಸಹ ಸ್ಟೈಲಿಷ್ ಆಗಿ ಮಾಡಲಾಗಿದೆ. ಪಬ್ ಒಂದರಲ್ಲಿ ಪಾರ್ಟಿ ಯುವಕರು ಪಾರ್ಟಿ ಮಾಡುತ್ತಿರುವ ರೀತಿಯಲ್ಲಿ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ‘ಬಾರೋ ಬಾರೋ ಬರುವಾಗ ಬಾಟ್ಲಿ ತಾರೋ’ ಎಂಬ ಸಾಲುಗಳ ಮೂಲಕ ಆರಂಭವಾಗುವ ಈ ಹಾಡು, ಗೆಳೆಯರನ್ನು ಎಣ್ಣೆ ಪಾರ್ಟಿಗೆ ಕರೆಯುವ ಮೂಡನ್ನು ಒಳಗೊಂಡಿದೆ.

F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ಈ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ಮನೋಹರ್ ಕಾಂಪಲ್ಲಿ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಮ್ಯಾಟ್ನಿ” ಸಿನಿಮಾಕ್ಕಿದೆ. ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು