Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ರೈಸ್ ಆಫ್ ಅಶೋಕ’ ಸಿನಿಮಾದಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ

‘ದಿ ರೈಸ್ ಆಫ್ ಅಶೋಕ’ ಚಿತ್ರದ ಮೋಷನ್ ಪೋಸ್ಟರ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಸತೀಶ್ ನೀನಾಸಂ ಹೀರೋ ಆಗಿ ನಟಿಸುತ್ತಿದ್ದಾರೆ. ಬಿ. ಸುರೇಶ, ಅಚ್ಯುತ್ ಕುಮಾರ್, ಸಂಪತ್ ಮೈತ್ರೀಯಾ, ಗೋಪಾಲಕೃಷ್ಣ ದೇಶಪಾಂಡೆ, ಯಶ್ ಶೆಟ್ಟಿ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಶೂಟಿಂಗ್ ಬಗ್ಗೆ ಇಲ್ಲಿದೆ ಮಾಹಿತಿ.

‘ದಿ ರೈಸ್ ಆಫ್ ಅಶೋಕ’ ಸಿನಿಮಾದಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
Sathish Ninasam
Follow us
ಮದನ್​ ಕುಮಾರ್​
|

Updated on: Jan 09, 2025 | 8:27 PM

ಸ್ಯಾಂಡಲ್​ವುಡ್​ನ ಖ್ಯಾತ ನಟ ನೀನಾಸಂ ಸತೀಶ್ ಅವರು ಈ ಮೊದಲು ‘ಅಶೋಕ ಬ್ಲೇಡ್’ ಸಿನಿಮಾ ಘೋಷಿಸಿದ್ದರು. ಆದರೆ ಆ ಸಿನಿಮಾದ ಶೀರ್ಷಿಕೆ ಬದಲಾವಣೆ ಆಗಿದೆ. ಟೈಟಲ್​ ಬದಲಾಯಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ ಚಿತ್ರತಂಡ. ಆ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹಂಚಿಕೊಳ್ಳಲಾಗಿದೆ. ಅಶೋಕ್ ಬ್ಲೇಡ್ ಎಂಬ ಟೈಟಲ್​ ಬದಲು, ‘ದಿ ರೈಸ್ ಆಫ್ ಅಶೋಕ’ ಎಂದು ಈಗ ಶೀರ್ಷಿಕೆ ಇಡಲಾಗಿದೆ!

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ‘ಅಶೋಕ ಬ್ಲೇಡ್’ ಸಿನಿಮಾ ನಿಂತೇ ಹೋಯಿತು ಎಂದು ಸುದ್ದಿ ಹರಡಿತ್ತು. ಆದರೆ ನಟ ಸತೀಶ್ ನೀನಾಸಂ ಅವರು ‘ದಿ ರೈಸ್ ಆಫ್ ಅಶೋಕ’ ಹೆಸರಿನಲ್ಲಿ ಆ ಪ್ರಾಜೆಕ್ಟ್​ ಅನ್ನು ಮತ್ತೆ ಕೈಗೆತ್ತಿಕೊಂಡಿದ್ದಾರೆ. ವಿನೋದ್ ದೊಂಡಾಲೆ ಅವರು ಶೇಕಡ 80ರಷ್ಟು ಚಿತ್ರೀಕರಣ ಮುಗಿಸಿದ್ದರು. ಮಾತಿನ ಭಾಗದ ಒಂದಷ್ಟು ದೃಶ್ಯಗಳು ಹಾಗೂ ಹಾಡುಗಳ ಶೂಟಿಂಗ್​ ಬಾಕಿ ಉಳಿದುಕೊಂಡಿತ್ತು.

‘ಚಮಕ್’, ‘ಕ್ಷೇತ್ರಪತಿ’, ‘ಅವತಾರ ಪುರುಷ’ ಮಂತಾದ ಸಿನಿಮಾಗಳಲ್ಲಿ ಸಂಕಲನಕಾರರಾಗಿ ಕೆಲಸ ಮಾಡಿದ ಮನು ಶೇಡ್ಗಾರ್ ಅವರು ಈಗ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಉಳಿದ ದೃಶ್ಯಗಳಿಗೆ ನಿರ್ದೇಶನ ಮಾಡುತ್ತಿದ್ದಾರೆ.

ಈ ಸುದ್ದಿಯೊಂದಿಗೆ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಚ್ಚು ಹಿಡಿದು ತುಂಬ ರಗಡ್ ಆದಂತಹ ಲುಕ್​ನಲ್ಲಿ ನೀನಾಸಂ ಸತೀಶ್ ಅವರು ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ರೆಟ್ರೋ ಕಾಲದ ಕಹಾನಿ ಇರಲಿದೆ ಎಂಬುದು ಪೋಸ್ಟರ್ ಮೂಲಕ ಗೊತ್ತಾಗಿದೆ. ಬಂಡಾಯದ ಕಥೆಯನ್ನು ಹೇಳಲು ‘ದಿ ರೈಸ್ ಆಫ್ ಅಶೋಕ’ ಟೀಮ್ ಸಜ್ಜಾಗುತ್ತಿದೆ.

ಲವಿತ್ ಅವರು ‘ದಿ ರೈಸ್ ಆಫ್ ಅಶೋಕ’ ಸಿನಿಮಾಗೆ ಛಾಯಾಗ್ರಹಣ ಮಾಡುತ್ತಿದ್ದಾರೆ. ವರದರಾಜ್ ಕಾಮತ್ ಅವರು ಕಲಾ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ. ರವಿವರ್ಮಾ ಹಾಗೂ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್ ಶೇಖರ್ ಅವರ ನೃತ್ಯ ನಿರ್ದೇಶನ, ಮನು ಶೆಡ್ಗಾರ್ ಅವರ ಸಂಕಲನ ಈ ಸಿನಿಮಾಗೆ ಇರಲಿದೆ.

ಇದನ್ನೂ ಓದಿ: ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ

ಫೆ15ರಂದು ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಶೂಟಿಂಗ್​ ಪುನಃ ಆರಂಭ ಆಗಲಿದೆ. ಸತೀಶ್ ವೃತ್ತಿಜೀವನದ ಅತ್ಯುತ್ತಮ ಸಿನಿಮಾವಾಗಿ ಇದು ಮೂಡಿಬರಲಿದ್ದು, ಕನ್ನಡ, ತಮಿಳು ಮತ್ತು ತೆಲುಗಿನಲ್ಲಿ ತಯಾರಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ. ‘ವೃದ್ಧಿ ಕ್ರಿಯೇಷನ್’ ಮತ್ತು ‘ಸತೀಶ್ ಪಿಕ್ಚರ್ಸ್ ಹೌಸ್’ ಬ್ಯಾನರ್ ಮೂಲಕ ವರ್ಧನ್ ನರಹರಿ, ಜೈಷ್ಣವಿ, ನೀನಾಸಂ ಸತೀಶ್ ಅವರು ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ