AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಜನಕ ಸ್ಥಿತಿಯಲ್ಲಿ ನಟ ಸತ್ಯಜಿತ್​; ಕಡುಕಷ್ಟದಲ್ಲೂ ಬರಲಿಲ್ಲ ಮಗಳು

ಹಿರಿಯ ನಟ ಸತ್ಯಜಿತ್​ ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು.

ಚಿಂತಾಜನಕ ಸ್ಥಿತಿಯಲ್ಲಿ ನಟ ಸತ್ಯಜಿತ್​; ಕಡುಕಷ್ಟದಲ್ಲೂ ಬರಲಿಲ್ಲ ಮಗಳು
ಸತ್ಯಜಿತ್​
TV9 Web
| Updated By: ಮದನ್​ ಕುಮಾರ್​|

Updated on:Oct 09, 2021 | 3:30 PM

Share

ಕನ್ನಡದ ಹಿರಿಯ ನಟ ಸತ್ಯಜಿತ್​ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಪರಿಸ್ಥಿತಿ ಚಿಂತಾಜನಕ ಆಗಿದೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಇಂದು ಅಸಹಾಯಕ ಸ್ಥಿತಿಯಲ್ಲಿ ಇದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಆರೋಗ್ಯ ಕೈಕೊಟ್ಟಿತು. ಚಿಕಿತ್ಸೆಗೆ ಹಣ ಇಲ್ಲದೇ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಇದರ ಜೊತೆಗೆ ಕುಟುಂಬದ ಸದಸ್ಯರ ಜೊತೆಗೂ ಮನಸ್ತಾಪ ಆಗಿದೆ. ಈಗ ಸತ್ಯಜಿತ್​ ಆರೋಗ್ಯ ತೀರಾ ಹದಗೆಟ್ಟಿದೆ ಇಂಥ ಸಂದರ್ಭದಲ್ಲಿಯೂ ಅವರ ಪುತ್ರಿ ಆಗಮಿಸಿಲ್ಲ.

ಈ ಬಗ್ಗೆ ಸತ್ಯಜಿತ್​ ಅವರ ಪುತ್ರ ಆಕಾಶ್​ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ಸ್ಟ್ರೋಕ್ ಆಗಿರೋ ಕಾರಣ ಐಸಿಯುನಲ್ಲಿ ಅಡ್ಮಿಟ್ ಮಾಡಿದ್ದೇವೆ. ಆರೋಗ್ಯದ ಸ್ಥಿತಿ ತುಂಬಾ ಗಂಭೀರವಾಗಿದೆ. ಹಾರ್ಟ್ ಸ್ಟ್ರೋಕ್ ಆಗಿದೆ. ಹಾರ್ಟ್ ರೇಟ್ ತುಂಬಾ ಕಡಿಮೆ ಆಗಿದೆ. ಬಿಪಿ ಫುಲ್ ಲೋ ಆಗಿದೆ. ಮಾನಸಿಕವಾಗಿ ತುಂಬಾ ನೊಂದಿದ್ದಾರೆ’ ಎಂದು ಆಕಾಶ್​ ಹೇಳಿದ್ದಾರೆ.

‘ಮಗಳ ವಿಷಯದಲ್ಲಿ ತುಂಬಾ ನೋವು ಪಟ್ಟಿದ್ದರು. ಇಂತಹ ಟೈಂನಲ್ಲೂ ಮಗಳು ಬಂದಿಲ್ಲ. ಸದ್ಯ ಅಪ್ಪ ಏನೂ ಮಾತಾಡ್ತಿಲ್ಲ. ಡಯಾಲಿಸಿಸ್ ಮಾಡಲೂ ಆಗುತ್ತಿಲ್ಲ. ಯಾವುದೇ ಚಿಕಿತ್ಸೆ ಪ್ರಯೋಜನ ಆಗ್ತಿಲ್ಲ ಅಂತ ಡಾಕ್ಟರ್ ಸಹ ಹೇಳಿದ್ದಾರೆ. ಆರೋಗ್ಯ ಕ್ಷಣ ಕ್ಷಣಕ್ಕೂ ಚಿಂತಾಜನಕವಾಗುತ್ತಿದೆ’ ಎಂದು ಸತ್ಯಜಿತ್​ ಪುತ್ರ ಆಕಾಶ್​ ಮಾಹಿತಿ ನೀಡಿದ್ದಾರೆ.

ಸತ್ಯಜಿತ್​ ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿದೆ. ಹಲವು ದಿನಗಳಿಂದ ಸತ್ಯಜಿತ್​ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ.​ ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ:

ನಟನಾಗಿರುವುದಕ್ಕೆ ತಂದೆ ಉತ್ತಮವಾಗಿ ಅಳುತ್ತಿದ್ದಾರೆ: ಸತ್ಯಜಿತ್ ಕಣ್ಣೀರನ್ನು ಟೀಕಿಸಿದ ಮಗಳು ಸ್ವಲೇಹಾ

ಮಗಳಿಗಾಗಿ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ; ಮಾಧ್ಯಮದ ಮುಂದೆ ಕಣ್ಣೀರಿಟ್ಟ ನಟ ಸತ್ಯಜಿತ್

Published On - 1:34 pm, Sat, 9 October 21

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು