Sign In

By signing in or creating an account, you agree with Associated Broadcasting Company's Terms & Conditions and Privacy Policy.

Satish Ninasam: ಮಗಳ ಹೆಸರು, ಫೋಟೋ ರಿವೀಲ್​ ಮಾಡಿದ ಸತೀಶ್​ ನೀನಾಸಂ

ಸತೀಶ್​ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ‘ಲೂಸಿಯಾ’ ಚಿತ್ರ ಅವರಿಗೆ ದೊಡ್ಡ ಮಟ್ಟದಲ್ಲಿ ಹಿಟ್​ ತಂದುಕೊಟ್ಟಿತ್ತು. ಆ ಸಿನಿಮಾ ಬಳಿಕ ಅವರ ಚಾರ್ಮ್​ ಚೇಂಜ್​ ಆಯಿತು. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬಂದವು.

Satish Ninasam: ಮಗಳ ಹೆಸರು, ಫೋಟೋ ರಿವೀಲ್​ ಮಾಡಿದ ಸತೀಶ್​ ನೀನಾಸಂ
ಮನಸ್ವಿತ-ಸತೀಶ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 14, 2022 | 7:42 PM

ಸತೀಶ್​ ನೀನಾಸಂ (Sathish Ninasam) ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಖಾಸಗಿತನಕ್ಕೆ ಗೌರವ ಕೊಡಬೇಕು ಎನ್ನುವ ಉದ್ದೇಶಕ್ಕೆ ಮಗಳ ಫೋಟೋವನ್ನು ಅವರು ಹಂಚಿಕೊಂಡಿರಲಿಲ್ಲ. ಈಗ ಮಗಳ ಫೋಟೋವನ್ನು ಸತೀಶ್​ ಹಂಚಿಕೊಂಡಿದ್ದಾರೆ. ಮಗಳ ಹೆಸರು ಮನಸ್ವಿತ. ಅವಳು ಒಂದು ವರ್ಷ ಇದ್ದಾಗಿನ ಫೋಟೋವನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ ಸತೀಶ್​.

‘ನಿಮಗೆಲ್ಲ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾಳೆ, ನನ್ನ ಮಗಳು ಮನಸ್ವಿತಾ. ಇದು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿರುವ ಅವಳ ಮೊದಲ ಚಿತ್ರ. ಅವಳ ಪ್ರೈವೆಸಿಯ ಕಾರಣದಿಂದ ಇದುವರೆಗೂ ನಮ್ಮ ಕುಟುಂಬ ಯಾವ ಚಿತ್ರಗಳನ್ನು ಹಂಚಿಕೊಂಡಿರಲಿಲ್ಲ. ಅಭಿಮಾನಿಗಳು ಮತ್ತು ಸ್ನೇಹಿತರು ನನ್ನ ಮಗಳ ಚಿತ್ರ ಹಂಚಿಕೊಳ್ಳುವಂತೆ ಕೇಳಿಕೊಂಡ ಕಾರಣ ಈ ಚಿತ್ರ ಹಾಕುತ್ತಿರುವೆ. ನಮ್ಮ ಕುಟುಂಬದ ಮೇಲೆ ನಿಮ್ಮ ಪ್ರೀತಿ ಹಾರೈಕೆ ಎಂದಿನಂತೆ ಸದಾ ಇರಲಿ’ ಎಂದು ಸತೀಶ್​ ಬರೆದುಕೊಂಡಿದ್ದಾರೆ.

ಮನಸ್ವಿತ ಒಂದು ವರ್ಷ ಇದ್ದಾಗ ತೆಗೆದ ಫೋಟೋವನ್ನು ಸತೀಶ್​ ಹಾಕಿದ್ದಾರೆ. ಈ ಬಗ್ಗೆಯೂ ಸತೀಶ್​ ಬರೆದುಕೊಂಡಿದ್ದಾರೆ. ‘ಇದು ಅವಳ ಮೊದಲ ವರ್ಷ ತೆಗೆದ ಚಿತ್ರ. ಈಗ ಅವಳು 5 ತುಂಬಿ 6ರ ಹೆಜ್ಜೆ ಇಡುತ್ತಿದ್ದಾಳೆ. ಧನ್ಯವಾದಗಳೊಂದಿಗೆ. ಸುಪ್ರೀತಾ, ಮನಸ್ವಿತ, ಸತೀಶ್’ ಎಂದು ಅವರು ಬರೆದುಕೊಂಡಿದ್ದಾರೆ. ಸತೀಶ್​ ಹಂಚಿಕೊಂಡಿರುವ ಫೋಟೋ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅವಳಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸುತ್ತಿದ್ದಾರೆ.

ಸತೀಶ್​ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ‘ಲೂಸಿಯಾ’ ಚಿತ್ರ ಅವರಿಗೆ ದೊಡ್ಡ ಮಟ್ಟದಲ್ಲಿ ಹಿಟ್​ ತಂದುಕೊಟ್ಟಿತ್ತು. ಆ ಸಿನಿಮಾ ಬಳಿಕ ಅವರ ಚಾರ್ಮ್​ ಚೇಂಜ್​ ಆಯಿತು. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬಂದವು. 2018ರಲ್ಲಿ ತೆರೆಗೆ ಬಂದ ‘ಅಯೋಗ್ಯ’ ಸಿನಿಮಾ ಸೂಪರ್​-ಡೂಪರ್​ ಹಿಟ್​ ಆಯಿತು. ಸದ್ಯ, ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ‘ಪೆಟ್ರೋಮ್ಯಾಕ್ಸ್​’ ಸೇರಿ ಅನೇಕ ಚಿತ್ರಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇದನ್ನೂ ಓದಿ: ‘ಎಲ್ಲವೂ ಕೂಡಿ ಬಂದ್ರೆ ಕನ್ನಡದಲ್ಲೇ ರಮ್ಯಾ ಜತೆ ಸಿನಿಮಾ ಮಾಡ್ತೀನಿ’: ಸತೀಶ್ ನೀನಾಸಂ

Ninasam Sathish: ನಟ ನೀನಾಸಂ ಸತೀಶ್​ ಅವರಿಗೆ ಮಾತೃ ವಿಯೋಗ

Published On - 7:07 pm, Fri, 14 January 22

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ