AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವಿ ಮಾದಪ್ಪ ಬಾಯಫ್ರೆಂಡ್​ ವಿವೇಕ್​ ವಿರುದ್ಧ ತಂದೆಯಿಂದ ಶಾಕಿಂಗ್​ ಹೇಳಿಕೆ

ತಮ್ಮ ಮಗಳು ಒಬ್ಬಳೇ ಇದ್ದಳು ಎಂದು ಸವಿ ಪೋಷಕರು ಹೇಳುತ್ತಿದ್ದಾರೆ. ಈಗ ಸವಿ ಅಂತ್ಯಸಂಸ್ಕಾರ ನೆರವೇರಿದೆ. ಇದರ ನಂತರದಲ್ಲಿ ವಿವೇಕ್​ ವಿರುದ್ಧ ಸವಿ ತಂದೆ ಪ್ರಭು ಆಕ್ರೋಶ ಹೊರ ಹಾಕಿದ್ದಾರೆ.

ಸವಿ ಮಾದಪ್ಪ ಬಾಯಫ್ರೆಂಡ್​ ವಿವೇಕ್​ ವಿರುದ್ಧ ತಂದೆಯಿಂದ ಶಾಕಿಂಗ್​ ಹೇಳಿಕೆ
ಸವಿ ಮಾದಪ್ಪ
TV9 Web
| Edited By: |

Updated on: Oct 01, 2021 | 7:24 PM

Share

ಸ್ಯಾಂಡಲ್​ವುಡ್​ನಲ್ಲಿ ನಟಿಸಿದ್ದ ಸವಿ ಮಾದಪ್ಪ ಅವರು ಗುರುವಾರ (ಸೆ.30) ಸಾವನ್ನಪಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನ ಅಪಾರ್ಟ್​​ಮೆಂಟ್​ನಲ್ಲಿ ಬಾಯ್​ಫ್ರೆಂಡ್​ ವಿವೇಕ್​ ಜೊತೆ ಅವರು ವಾಸವಾಗಿದ್ದರು ಎನ್ನಲಾಗುತ್ತಿದೆ. ಆದರೆ ತಮ್ಮ ಮಗಳು ಒಬ್ಬಳೇ ಇದ್ದಳು ಎಂದು ಸವಿ ಪೋಷಕರು ಹೇಳುತ್ತಿದ್ದಾರೆ. ಈಗ ಸವಿ ಅಂತ್ಯಸಂಸ್ಕಾರ ನೆರವೇರಿದೆ. ಇದರ ನಂತರದಲ್ಲಿ ವಿವೇಕ್​ ವಿರುದ್ಧ ಸವಿ ತಂದೆ ಪ್ರಭು ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ ಪುತ್ರಿ ವಿವಾಹವಾಗುವುದಾಗಿ ವಿವೇಕ್​ ಒತ್ತಡ ಹಾಕುತ್ತಿದ್ದ. ನನ್ನ ಮಗಳ ಸ್ನೇಹ ಬೆಳಸುವುದಕ್ಕೆ ವಿವೇಕ್​ ಯಾರು? ನನ್ನ ಮಗಳನ್ನ ವಿವಾಹವಾಗಲು ಬ್ಯಾಕ್​​ಗ್ರೌಂಡ್ ಏನು? ವಿವೇಕ್​​ ನನ್ನ ಮಗಳ‌ ಬ್ರೈನ್ ವಾಶ್ ಮಾಡಿದ್ದಾನೆ. ದೊಡ್ಡ ಮಗಳ‌ ಮದುವೆಯಾಗಿ ಒಂದು‌ ತಿಂಗಳಾಗಿದೆ. ಹೀಗಿರುವಾಗ ಮತ್ತೊಂದು ಮದುವೆ ಹೇಗೆ ಸಾಧ್ಯ? ಮಗಳ ಬಳಿ ಇದ್ದ ಹಣ ಎಲ್ಲೋ ಹೂಡಿಕೆ ಮಾಡಿದ್ದಾರೆ. 5 ಲಕ್ಷ ಹಣವನ್ನು ಅವರು ಎಲ್ಲಿಯೋ ಹೂಡಿಕೆ ಮಾಡಿದ್ದಾರೆ. ನನ್ನ ಮಗಳ ಸಾವಿನ ಬಗ್ಗೆ ತನಿಖೆ ಆಗಲಿ’ ಎಂದು ಪ್ರಭು ಆಗ್ರಹಿಸಿದ್ದಾರೆ.

ಹುಟ್ಟೂರಲ್ಲಿ ಅಂತ್ಯಸಂಸ್ಕಾರ

ಸ್ವಗ್ರಾಮ ಅಂದಗೋವೆಯಲ್ಲಿ ಸವಿ ಅಂತಿಮ ವಿಧಿವಿಧಾನ ನಡೆದಿದೆ. ಸವಿಗೆ ಇನ್ನೂ ಮದುವೆ ಆಗಿರಲಿಲ್ಲ. ಹೀಗಾಗಿ ಸಂಪ್ರದಾಯದ ಪ್ರಕಾರ ಸವಿಗೆ ಮದುವೆ ಶಾಸ್ತ್ರ ಮಾಡಲಾಗಿದೆ. ಬಾಳೆಯ ದಿಂಡನ್ನು ಮಧುಮಗನಂತೆ ಅಲಂಕರಿಸಲಾಗಿತ್ತು. ಸವಿ ಪಾರ್ಥಿವ ಶರೀರಕ್ಕೂ ವಧುವಿನಂತೆ ಶೃಂಗಾರ ಮಾಡಲಾಗಿತ್ತು. ನಂತರ ಮಗಳ ಪಾರ್ಥಿವ ಶರೀರಕ್ಕೆ ತಾಯಿ ತಾಳಿ ಕಟ್ಟಿದ್ದಾರೆ. ಸವಿ ಮಾದಪ್ಪ ಆತ್ಮಕ್ಕೆ ಮೋಕ್ಷ ಸಿಗಲು ವಿವಾಹ ಶಾಸ್ತ್ರ ನೆರವೇರಿಸಲಾಗಿದೆ. ವಿವಾಹ ಶಾಸ್ತ್ರದ ಸಂದರ್ಭದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?

ಅಂತಿಮ‌ಸಂಸ್ಕಾರದ ವೇಳೆ ಸವಿ ಮಾದಪ್ಪಗೆ ಮದುವೆ ಶಾಸ್ತ್ರ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ