ಅಂತಿಮ‌ಸಂಸ್ಕಾರದ ವೇಳೆ ಸವಿ ಮಾದಪ್ಪಗೆ ಮದುವೆ ಶಾಸ್ತ್ರ

ಸ್ವಗ್ರಾಮ ಅಂದಗೋವೆಯಲ್ಲಿ ಅಂತಿಮ ವಿಧಿವಿಧಾನ ನಡೆದಿದೆ. ಸವಿಗೆ ಇನ್ನೂ ಮದುವೆ ಆಗಿರಲಿಲ್ಲ. ಹೀಗಾಗಿ ಸಂಪ್ರದಾಯದ ಪ್ರಕಾರ ಸವಿಗೆ ಮದುವೆ ಶಾಸ್ತ್ರ ಮಾಡಲಾಗಿದೆ.

ಅಂತಿಮ‌ಸಂಸ್ಕಾರದ ವೇಳೆ ಸವಿ ಮಾದಪ್ಪಗೆ ಮದುವೆ ಶಾಸ್ತ್ರ
ಸವಿ ಮಾದಪ್ಪ
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 01, 2021 | 6:53 PM

ಚೌಕಟ್ಟು, ಫನ್​ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಸವಿ ಮಾದಪ್ಪ ಅವರು ಗುರುವಾರ (ಸೆ.30) ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರಿನ ಅಪಾರ್ಟ್​​ಮೆಂಟ್​ನಲ್ಲಿ ಬಾಯ್​ಫ್ರೆಂಡ್​ ಜೊತೆ ಅವರು ವಾಸವಾಗಿದ್ದರು ಎಂಬ ಮಾಹಿತಿ ಇದೆ. ಆದರೆ ತಮ್ಮ ಮಗಳು ಒಬ್ಬಳೇ ಇದ್ದಳು ಎಂದು ಸವಿ ಪೋಷಕರು ಹೇಳುತ್ತಿದ್ದಾರೆ. ಈಗ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಇಂದು (ಅಕ್ಟೋಬರ್​ 1) ಕೊಡವ ಪದ್ಧತಿಯಂತೆ ಅವರ ಅಂತ್ಯ ಸಂಸ್ಕಾರ ನಡೆದಿದೆ.

ಸ್ವಗ್ರಾಮ ಅಂದಗೋವೆಯಲ್ಲಿ ಅಂತಿಮ ವಿಧಿವಿಧಾನ ನಡೆದಿದೆ. ಸವಿಗೆ ಇನ್ನೂ ಮದುವೆ ಆಗಿರಲಿಲ್ಲ. ಹೀಗಾಗಿ ಸಂಪ್ರದಾಯದ ಪ್ರಕಾರ ಸವಿಗೆ ಮದುವೆ ಶಾಸ್ತ್ರ ಮಾಡಲಾಗಿದೆ. ಬಾಳೆಯ ದಿಂಡನ್ನು ಮಧುಮಗನಂತೆ ಅಲಂಕರಿಸಲಾಗಿತ್ತು. ಸವಿ ಪಾರ್ಥಿವ ಶರೀರಕ್ಕೂ ವಧುವಿನಂತೆ ಶೃಂಗಾರ ಮಾಡಲಾಗಿತ್ತು. ನಂತರ ಮಗಳ ಪಾರ್ಥಿವ ಶರೀರಕ್ಕೆ ತಾಯಿ ತಾಳಿ ಕಟ್ಟಿದ್ದಾರೆ. ಸವಿ ಮಾದಪ್ಪ ಆತ್ಮಕ್ಕೆ ಮೋಕ್ಷ ಸಿಗಲು ವಿವಾಹ ಶಾಸ್ತ್ರ ನೆರವೇರಿಸಲಾಗಿದೆ. ವಿವಾಹ ಶಾಸ್ತ್ರದ ಸಂದರ್ಭದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಸಾವಿನ ಸುದ್ದಿ ಅವರ ಕುಟುಂಬಕ್ಕೆ ಸಿಡಿಲಿನಂತೆ ಬಂದೆರಗಿದೆ. ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಆದರೆ ಮಗಳ ಸಾವಿನ ಬಗ್ಗೆ ಪೋಷಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಸವಿ ಮಾದಪ್ಪ ಬಾಯ್‌ಫ್ರೆಂಡ್‌ ವಿವೇಕ್ ಜತೆ ವಾಸವಿದ್ದರು ಎನ್ನಲಾಗಿದೆ. ಊಟ ತರುವಂತೆ ವಿವೇಕ್​ಗೆ ಹೇಳಿದ್ದರು. ವಿವೇಕ್ ಊಟ ತರೋಕೆ ಹೊರಗೆ ಹೋಗಿದ್ದರು. ಈ ವೇಳೆ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸವಿ ಸಾವಿನ ಬಗ್ಗೆ ಅವರ ತಂದೆ ಪ್ರಭು ಮಾದಪ್ಪ ಮಾತನಾಡಿದ್ದರು. ‘ನಮ್ಮ ಮಗಳ ಆತ್ಮಹತ್ಯೆ ಬಗ್ಗೆ ನಮಗೆ ಅನುಮಾನ ಇದೆ. ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತವಳಲ್ಲ. ನಮ್ಮ ಮಗಳು ಫ್ಲ್ಯಾಟ್‌ನಲ್ಲಿ ಒಬ್ಬಳೇ ವಾಸವಿದ್ದಳು. ಮೂರು ದಿನದ ಹಿಂದೆ ಕರೆ ಮಾಡಿ 1 ಲಕ್ಷ ರೂಪಾಯಿ ಕೇಳಿದ್ದಳು. ಏಕೆ ಎಂದು ಪ್ರಶ್ನಿಸಿದ್ದಕ್ಕೆ ಕಮಿಟ್​ಮೆಂಟ್​ ಇದೆ ಎಂದಿದ್ದಳು. ಇಂದು ಬೆಳಗ್ಗೆಯೂ ಸವಿ ಜತೆ ನನ್ನ ಪತ್ನಿ ರೇಣುಕಾ ಮಾತಾಡಿದ್ದರು. ಇವತ್ತೇ ಊರಿಗೆ ಬರುತ್ತಿದ್ದೇನೆ ಎಂದಿದ್ದಳು. ಮಗಳ ಸಾವಿನ ಕುರಿತು ದೂರು ಕೊಡುತ್ತೇವೆ. ಶವ ಇಳಿಸುವಾಗಲೂ ಸಹ ನಮಗೆ ಮಾಹಿತಿ ನೀಡಿಲ್ಲ’ ಎಂದು ಪೊಲೀಸರ ಕ್ರಮದ ಬಗ್ಗೆ ಆಕ್ರೋಶ ಹೊರ ಹಾಕಿದ್ದರು.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?

Published On - 6:42 pm, Fri, 1 October 21

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ