Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡು ದಿನ ‘Sci560 ಫಿಲ್ಮ್ ಫೆಸ್ಟಿವಲ್’; ಉಚಿತ ಎಂಟ್ರಿ

ಬೆಂಗಳೂರಿನ ಸೈನ್ಸ್ ಗ್ಯಾಲರಿ ಬೆಂಗಳೂರು (ಎಸ್ಜಿಬಿ) ಫೆಬ್ರವರಿ 1 ಮತ್ತು 2 ರಂದು Sci560 ಚಲನಚಿತ್ರೋತ್ಸವವನ್ನು ಆಯೋಜಿಸುತ್ತಿದೆ. 20 ಚಲನಚಿತ್ರಗಳು, ಡಾಕ್ಯುಮೆಂಟರಿಗಳು ಬೆಂಗಳೂರಿನ ವಿಜ್ಞಾನ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲಿವೆ. ನೀರಿನ ಕೊರತೆ, ಕೋಲಾರದ ಚಿನ್ನದ ಗಣಿ ಇತ್ಯಾದಿ ವಿಷಯಗಳನ್ನು ಒಳಗೊಂಡ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಬೆಂಗಳೂರಿನಲ್ಲಿ ಎರಡು ದಿನ ‘Sci560 ಫಿಲ್ಮ್ ಫೆಸ್ಟಿವಲ್’; ಉಚಿತ ಎಂಟ್ರಿ
Sci560 ಫಿಲ್ಮ್ ಫೆಸ್ಟಿವಲ್
Follow us
ರಾಜೇಶ್ ದುಗ್ಗುಮನೆ
|

Updated on: Jan 31, 2025 | 2:23 PM

ಸೈನ್ಸ್ ಗ್ಯಾಲರಿ ಬೆಂಗಳೂರು (ಎಸ್​ಜಿಬಿ) ‘Sci560 ಫಿಲ್ಮ್ ಫೆಸ್ಟಿವಲ್’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಫೆಬ್ರವರಿ 1 ಹಾಗೂ 2ರಂದು ದೊಮ್ಮಲೂರಿನ ‘ಬೆಂಗಳೂರು ಇಂಟರ್​ನ್ಯಾಷನಲ್ ಸೆಂಟರ್​’ನಲ್ಲಿ ಈ ಉತ್ಸವ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಿನಿಮಾ ವೀಕ್ಷಣೆಗೆ ಅವಕಾಶ ಇದೆ. ನಾಲ್ಕು ಭಾಷೆಯ 20 ಸಿನಿಮಾಗಳು ಪ್ರದರ್ಶನ ಕಾಣಲಿದೆ.

‘Sci560 ಫಿಲ್ಮ್ ಫೆಸ್ಟಿವಲ್’ಗೆ ಯಾರು ಬೇಕಾದರೂ ಸಿನಿಮಾ ಸಲ್ಲಿಕೆ ಮಾಡಬಹುದಿತ್ತು. ಈ ರೀತಿ ಸಲ್ಲಿಕೆ ಆದ ಚಿತ್ರಗಳನ್ನು ಬೆಂಗಳೂರು ಫಿಲ್ಮ್​ ಫೋರಂ ಸದಸ್ಯರು ಹಾಗೂ ಎಸ್​ಜಿಬಿ ತಂಡ ಆಯ್ಕೆ ಮಾಡಿದೆ. ಈ ರೀತಿ ಆಯ್ಕೆ ಆದ 20 ಸಿನಿಮಾಗಳು ಸಿನಿಮೋತ್ಸವದಲ್ಲಿ ಪ್ರಸಾರ ಕಾಣಲಿವೆ. ಈ ಚಿತ್ರಗಳು ಬೆಂಗಳೂರಿನ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸಲಿದೆ.

ನಿತ್ಯ ಮಿಶ್ರಾ ಅವರು ನಿರ್ದೇಶನ ಮಾಡಿದ ‘ಡೌನ್​ ದಿ ಡ್ರೇನ್’ ಚಿತ್ರದ ಮೂಲಕ ಸಿನಿಮೋತ್ಸವ ಆರಂಭ ಆಗಲಿದೆ. ಸದ್ಯ ಬೆಂಗಳೂರು ಎದುರಿಸುತ್ತಿರುವ ನೀರಿನ ಕೊರತೆಯ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಿದೆ. ಮೊದಲ ದಿನ ಈ ರೀತಿಯ ಹಲವು ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಇದನ್ನೂ ಓದಿ: ಬೆಳ್ಳಿ ತೆರೆಯಲ್ಲಿ 29ರ ಸಂಭ್ರಮ, ಸಾಧನೆಗೆ ಸಾಥ್ ಕೊಟ್ಟವರಿಗೆ ಕಿಚ್ಚನ ಥ್ಯಾಂಕ್ಸ್

ಎರಡನೇ ದಿನ ಮುಖ್ಯವಾಗಿ ಬಸವ ಬೀರಾದಾರ್ ಅವರು ಮಾಡಿದ ‘ಇನ್ ಸರ್ಚ್ ಆಫ್ ಗೋಲ್ಡ್’ ಡಾಕ್ಯುಮೆಂಟರಿ ಪ್ರದರ್ಶನ ಕಾಣಲಿದೆ. ಕೋಲಾರದ ಚಿನ್ನದ ಗಣಿಯ ಇತಿಹಾಸವನ್ನು ಇದು ತೆರೆದಿಡಲಿದೆ.  ಈ ರೀತಿಯ ಹಲವು ಸಿನಿಮಾಗಳು, ಡಾಕ್ಯುಮೆಂಟರಿಗಳು ಪ್ರಸಾರ ಕಾಣಲಿವೆ. ಸಿನಿಮಾ ನಿರ್ದೇಶಕರ ಜೊತೆ ಸಂವಾದ ಕೂಡ ಇರಲಿದ್ದು, ಇದರಲ್ಲಿ ಭಾಗವಹಿಸಿ ಜ್ಞಾನಾಭಿವೃದ್ಧಿ ಮಾಡಿಕೊಳ್ಳಬಹುದು. ಸಿನಿಮಾ ನೋಡಿದ ಬಳಿಕ ಮೂಡುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬಹುದು. ಉಚಿತವಾಗಿ ನೀವು ಈ ಸಿನಿಮೋತ್ಸವನ್ನು ವೀಕ್ಷಿಸಬಹುದಾಗಿದೆ.

Science Gallery Bengaluru ವೆಬ್​ಸೈಟ್​ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಆಗ ಸಿನಿಮೋತ್ಸವಕ್ಕೆ ಉಚಿತವಾಗಿ ಎಂಟ್ರಿ ಪಡೆಯಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ