AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡು ದಿನ ‘Sci560 ಫಿಲ್ಮ್ ಫೆಸ್ಟಿವಲ್’; ಉಚಿತ ಎಂಟ್ರಿ

ಬೆಂಗಳೂರಿನ ಸೈನ್ಸ್ ಗ್ಯಾಲರಿ ಬೆಂಗಳೂರು (ಎಸ್ಜಿಬಿ) ಫೆಬ್ರವರಿ 1 ಮತ್ತು 2 ರಂದು Sci560 ಚಲನಚಿತ್ರೋತ್ಸವವನ್ನು ಆಯೋಜಿಸುತ್ತಿದೆ. 20 ಚಲನಚಿತ್ರಗಳು, ಡಾಕ್ಯುಮೆಂಟರಿಗಳು ಬೆಂಗಳೂರಿನ ವಿಜ್ಞಾನ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲಿವೆ. ನೀರಿನ ಕೊರತೆ, ಕೋಲಾರದ ಚಿನ್ನದ ಗಣಿ ಇತ್ಯಾದಿ ವಿಷಯಗಳನ್ನು ಒಳಗೊಂಡ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಬೆಂಗಳೂರಿನಲ್ಲಿ ಎರಡು ದಿನ ‘Sci560 ಫಿಲ್ಮ್ ಫೆಸ್ಟಿವಲ್’; ಉಚಿತ ಎಂಟ್ರಿ
Sci560 ಫಿಲ್ಮ್ ಫೆಸ್ಟಿವಲ್
ರಾಜೇಶ್ ದುಗ್ಗುಮನೆ
|

Updated on: Jan 31, 2025 | 2:23 PM

Share

ಸೈನ್ಸ್ ಗ್ಯಾಲರಿ ಬೆಂಗಳೂರು (ಎಸ್​ಜಿಬಿ) ‘Sci560 ಫಿಲ್ಮ್ ಫೆಸ್ಟಿವಲ್’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಫೆಬ್ರವರಿ 1 ಹಾಗೂ 2ರಂದು ದೊಮ್ಮಲೂರಿನ ‘ಬೆಂಗಳೂರು ಇಂಟರ್​ನ್ಯಾಷನಲ್ ಸೆಂಟರ್​’ನಲ್ಲಿ ಈ ಉತ್ಸವ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಿನಿಮಾ ವೀಕ್ಷಣೆಗೆ ಅವಕಾಶ ಇದೆ. ನಾಲ್ಕು ಭಾಷೆಯ 20 ಸಿನಿಮಾಗಳು ಪ್ರದರ್ಶನ ಕಾಣಲಿದೆ.

‘Sci560 ಫಿಲ್ಮ್ ಫೆಸ್ಟಿವಲ್’ಗೆ ಯಾರು ಬೇಕಾದರೂ ಸಿನಿಮಾ ಸಲ್ಲಿಕೆ ಮಾಡಬಹುದಿತ್ತು. ಈ ರೀತಿ ಸಲ್ಲಿಕೆ ಆದ ಚಿತ್ರಗಳನ್ನು ಬೆಂಗಳೂರು ಫಿಲ್ಮ್​ ಫೋರಂ ಸದಸ್ಯರು ಹಾಗೂ ಎಸ್​ಜಿಬಿ ತಂಡ ಆಯ್ಕೆ ಮಾಡಿದೆ. ಈ ರೀತಿ ಆಯ್ಕೆ ಆದ 20 ಸಿನಿಮಾಗಳು ಸಿನಿಮೋತ್ಸವದಲ್ಲಿ ಪ್ರಸಾರ ಕಾಣಲಿವೆ. ಈ ಚಿತ್ರಗಳು ಬೆಂಗಳೂರಿನ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸಲಿದೆ.

ನಿತ್ಯ ಮಿಶ್ರಾ ಅವರು ನಿರ್ದೇಶನ ಮಾಡಿದ ‘ಡೌನ್​ ದಿ ಡ್ರೇನ್’ ಚಿತ್ರದ ಮೂಲಕ ಸಿನಿಮೋತ್ಸವ ಆರಂಭ ಆಗಲಿದೆ. ಸದ್ಯ ಬೆಂಗಳೂರು ಎದುರಿಸುತ್ತಿರುವ ನೀರಿನ ಕೊರತೆಯ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಿದೆ. ಮೊದಲ ದಿನ ಈ ರೀತಿಯ ಹಲವು ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಇದನ್ನೂ ಓದಿ: ಬೆಳ್ಳಿ ತೆರೆಯಲ್ಲಿ 29ರ ಸಂಭ್ರಮ, ಸಾಧನೆಗೆ ಸಾಥ್ ಕೊಟ್ಟವರಿಗೆ ಕಿಚ್ಚನ ಥ್ಯಾಂಕ್ಸ್

ಎರಡನೇ ದಿನ ಮುಖ್ಯವಾಗಿ ಬಸವ ಬೀರಾದಾರ್ ಅವರು ಮಾಡಿದ ‘ಇನ್ ಸರ್ಚ್ ಆಫ್ ಗೋಲ್ಡ್’ ಡಾಕ್ಯುಮೆಂಟರಿ ಪ್ರದರ್ಶನ ಕಾಣಲಿದೆ. ಕೋಲಾರದ ಚಿನ್ನದ ಗಣಿಯ ಇತಿಹಾಸವನ್ನು ಇದು ತೆರೆದಿಡಲಿದೆ.  ಈ ರೀತಿಯ ಹಲವು ಸಿನಿಮಾಗಳು, ಡಾಕ್ಯುಮೆಂಟರಿಗಳು ಪ್ರಸಾರ ಕಾಣಲಿವೆ. ಸಿನಿಮಾ ನಿರ್ದೇಶಕರ ಜೊತೆ ಸಂವಾದ ಕೂಡ ಇರಲಿದ್ದು, ಇದರಲ್ಲಿ ಭಾಗವಹಿಸಿ ಜ್ಞಾನಾಭಿವೃದ್ಧಿ ಮಾಡಿಕೊಳ್ಳಬಹುದು. ಸಿನಿಮಾ ನೋಡಿದ ಬಳಿಕ ಮೂಡುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬಹುದು. ಉಚಿತವಾಗಿ ನೀವು ಈ ಸಿನಿಮೋತ್ಸವನ್ನು ವೀಕ್ಷಿಸಬಹುದಾಗಿದೆ.

Science Gallery Bengaluru ವೆಬ್​ಸೈಟ್​ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಆಗ ಸಿನಿಮೋತ್ಸವಕ್ಕೆ ಉಚಿತವಾಗಿ ಎಂಟ್ರಿ ಪಡೆಯಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?