AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡು ದಿನ ‘Sci560 ಫಿಲ್ಮ್ ಫೆಸ್ಟಿವಲ್’; ಉಚಿತ ಎಂಟ್ರಿ

ಬೆಂಗಳೂರಿನ ಸೈನ್ಸ್ ಗ್ಯಾಲರಿ ಬೆಂಗಳೂರು (ಎಸ್ಜಿಬಿ) ಫೆಬ್ರವರಿ 1 ಮತ್ತು 2 ರಂದು Sci560 ಚಲನಚಿತ್ರೋತ್ಸವವನ್ನು ಆಯೋಜಿಸುತ್ತಿದೆ. 20 ಚಲನಚಿತ್ರಗಳು, ಡಾಕ್ಯುಮೆಂಟರಿಗಳು ಬೆಂಗಳೂರಿನ ವಿಜ್ಞಾನ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲಿವೆ. ನೀರಿನ ಕೊರತೆ, ಕೋಲಾರದ ಚಿನ್ನದ ಗಣಿ ಇತ್ಯಾದಿ ವಿಷಯಗಳನ್ನು ಒಳಗೊಂಡ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಬೆಂಗಳೂರಿನಲ್ಲಿ ಎರಡು ದಿನ ‘Sci560 ಫಿಲ್ಮ್ ಫೆಸ್ಟಿವಲ್’; ಉಚಿತ ಎಂಟ್ರಿ
Sci560 ಫಿಲ್ಮ್ ಫೆಸ್ಟಿವಲ್
ರಾಜೇಶ್ ದುಗ್ಗುಮನೆ
|

Updated on: Jan 31, 2025 | 2:23 PM

Share

ಸೈನ್ಸ್ ಗ್ಯಾಲರಿ ಬೆಂಗಳೂರು (ಎಸ್​ಜಿಬಿ) ‘Sci560 ಫಿಲ್ಮ್ ಫೆಸ್ಟಿವಲ್’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಫೆಬ್ರವರಿ 1 ಹಾಗೂ 2ರಂದು ದೊಮ್ಮಲೂರಿನ ‘ಬೆಂಗಳೂರು ಇಂಟರ್​ನ್ಯಾಷನಲ್ ಸೆಂಟರ್​’ನಲ್ಲಿ ಈ ಉತ್ಸವ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಿನಿಮಾ ವೀಕ್ಷಣೆಗೆ ಅವಕಾಶ ಇದೆ. ನಾಲ್ಕು ಭಾಷೆಯ 20 ಸಿನಿಮಾಗಳು ಪ್ರದರ್ಶನ ಕಾಣಲಿದೆ.

‘Sci560 ಫಿಲ್ಮ್ ಫೆಸ್ಟಿವಲ್’ಗೆ ಯಾರು ಬೇಕಾದರೂ ಸಿನಿಮಾ ಸಲ್ಲಿಕೆ ಮಾಡಬಹುದಿತ್ತು. ಈ ರೀತಿ ಸಲ್ಲಿಕೆ ಆದ ಚಿತ್ರಗಳನ್ನು ಬೆಂಗಳೂರು ಫಿಲ್ಮ್​ ಫೋರಂ ಸದಸ್ಯರು ಹಾಗೂ ಎಸ್​ಜಿಬಿ ತಂಡ ಆಯ್ಕೆ ಮಾಡಿದೆ. ಈ ರೀತಿ ಆಯ್ಕೆ ಆದ 20 ಸಿನಿಮಾಗಳು ಸಿನಿಮೋತ್ಸವದಲ್ಲಿ ಪ್ರಸಾರ ಕಾಣಲಿವೆ. ಈ ಚಿತ್ರಗಳು ಬೆಂಗಳೂರಿನ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸಲಿದೆ.

ನಿತ್ಯ ಮಿಶ್ರಾ ಅವರು ನಿರ್ದೇಶನ ಮಾಡಿದ ‘ಡೌನ್​ ದಿ ಡ್ರೇನ್’ ಚಿತ್ರದ ಮೂಲಕ ಸಿನಿಮೋತ್ಸವ ಆರಂಭ ಆಗಲಿದೆ. ಸದ್ಯ ಬೆಂಗಳೂರು ಎದುರಿಸುತ್ತಿರುವ ನೀರಿನ ಕೊರತೆಯ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಿದೆ. ಮೊದಲ ದಿನ ಈ ರೀತಿಯ ಹಲವು ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಇದನ್ನೂ ಓದಿ: ಬೆಳ್ಳಿ ತೆರೆಯಲ್ಲಿ 29ರ ಸಂಭ್ರಮ, ಸಾಧನೆಗೆ ಸಾಥ್ ಕೊಟ್ಟವರಿಗೆ ಕಿಚ್ಚನ ಥ್ಯಾಂಕ್ಸ್

ಎರಡನೇ ದಿನ ಮುಖ್ಯವಾಗಿ ಬಸವ ಬೀರಾದಾರ್ ಅವರು ಮಾಡಿದ ‘ಇನ್ ಸರ್ಚ್ ಆಫ್ ಗೋಲ್ಡ್’ ಡಾಕ್ಯುಮೆಂಟರಿ ಪ್ರದರ್ಶನ ಕಾಣಲಿದೆ. ಕೋಲಾರದ ಚಿನ್ನದ ಗಣಿಯ ಇತಿಹಾಸವನ್ನು ಇದು ತೆರೆದಿಡಲಿದೆ.  ಈ ರೀತಿಯ ಹಲವು ಸಿನಿಮಾಗಳು, ಡಾಕ್ಯುಮೆಂಟರಿಗಳು ಪ್ರಸಾರ ಕಾಣಲಿವೆ. ಸಿನಿಮಾ ನಿರ್ದೇಶಕರ ಜೊತೆ ಸಂವಾದ ಕೂಡ ಇರಲಿದ್ದು, ಇದರಲ್ಲಿ ಭಾಗವಹಿಸಿ ಜ್ಞಾನಾಭಿವೃದ್ಧಿ ಮಾಡಿಕೊಳ್ಳಬಹುದು. ಸಿನಿಮಾ ನೋಡಿದ ಬಳಿಕ ಮೂಡುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬಹುದು. ಉಚಿತವಾಗಿ ನೀವು ಈ ಸಿನಿಮೋತ್ಸವನ್ನು ವೀಕ್ಷಿಸಬಹುದಾಗಿದೆ.

Science Gallery Bengaluru ವೆಬ್​ಸೈಟ್​ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಆಗ ಸಿನಿಮೋತ್ಸವಕ್ಕೆ ಉಚಿತವಾಗಿ ಎಂಟ್ರಿ ಪಡೆಯಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?