AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್​’ ಸೆಲೆಬ್ರೇಷನ್​ಗೆ ಬ್ರೇಕ್​?; ಅಪ್ಪು ಅಭಿಮಾನಿಗಳ ನಿರಾಸೆಗೆ ಕಾರಣವಾಯ್ತು ಸೆಕ್ಷನ್​ 144

ಶಾಲಾ- ಕಾಲೇಜಿನಲ್ಲಿ ಸಮವಸ್ತ್ರ ಪಾಲಿಸಬೇಕು, ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಕೋರ್ಟ್ ತೀರ್ಪು ಮುಸ್ಲಿಂ ಸಮುದಾಯದವರಿಗೆ ಬೇಸರ ಮೂಡಿಸಿದೆ.

‘ಜೇಮ್ಸ್​’ ಸೆಲೆಬ್ರೇಷನ್​ಗೆ ಬ್ರೇಕ್​?; ಅಪ್ಪು ಅಭಿಮಾನಿಗಳ ನಿರಾಸೆಗೆ  ಕಾರಣವಾಯ್ತು ಸೆಕ್ಷನ್​ 144
ಜೇಮ್ಸ್​
TV9 Web
| Edited By: |

Updated on:Mar 16, 2022 | 5:05 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅಭಿಮಾನಿಗಳಿಗೆ ಮಾರ್ಚ್ 17 ವಿಶೇಷ ದಿನ. ಅಪ್ಪು ಇಲ್ಲದೆ ಮೊದಲ ವರ್ಷದ ಬರ್ತ್​ಡೇ ಆಚರಿಸಿಕೊಳ್ಳಲಾಗುತ್ತಿದೆ. ಇದರ ಜತೆಗೆ ಅವರು ಹೀರೋ ಆಗಿ ನಟಿಸಿರೋ ಕೊನೆಯ ಸಿನಿಮಾ ‘ಜೇಮ್ಸ್​’ (James Movie )ತೆರೆಗೆ ಬರುತ್ತಿದೆ. ಈ ಸೆಲೆಬ್ರೇಷನ್​ಗೆ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಿತ್ರಮಂದಿರಗಳ ಎದುರು ಪುನೀತ್​ ಕಟೌಟ್​ ನಿಲ್ಲಿಸಲಾಗಿದೆ. ನಾಳೆ (ಮಾರ್ಚ್​ 17) ಈ ಕಟೌಟ್​ಗಳಿಗೆ ಹಾಲಿನ ಅಭಿಷೇಕ ಕೂಡ ನಡೆಯಲಿದೆ. ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಲಿದ್ದಾರೆ. ಆದರೆ, ಈಗ ಸೆಕ್ಷನ್​ 144 (Section 144) ಜಾರಿ ಆಗಿರುವುದು ಅಪ್ಪು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ‘ಜೇಮ್ಸ್​’ ಸೆಲೆಬ್ರೇಷನ್​ಗೆ ಸರ್ಕಾರದ ಈ ನಿಯಮ ಕಂಟಕವಾಗುವ ಸೂಚನೆ ಸಿಕ್ಕಿದೆ.

ಶಾಲಾ- ಕಾಲೇಜಿನಲ್ಲಿ ಸಮವಸ್ತ್ರ ಪಾಲಿಸಬೇಕು, ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ತೀರ್ಪು ಬರುತ್ತಿದ್ದಂತೆ ಸುರಕ್ಷತಾ ದೃಷ್ಟಿಯಿಂದ ಒಂದು ವಾರಗಳ ಕಾಲ ಬೆಂಗಳೂರಿನಲ್ಲಿ ಸೆಕ್ಷನ್​ 144 ನಿಯಮ ಜಾರಿಯಲ್ಲಿರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ ಪಂತ್​ ಹೇಳಿದ್ದರು. ಈ ಮಧ್ಯೆ, ಕೋರ್ಟ್ ತೀರ್ಪು ಮುಸ್ಲಿಂ ಸಮುದಾಯದವರಿಗೆ ಬೇಸರ ಮೂಡಿಸಿದೆ. ಹೀಗಾಗಿ, ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಕರೆ ನೀಡಿದ್ದಾರೆ. ಮಾರ್ಚ್​ 17 ಇಡೀ ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಕರೆ ನೀಡಿದ್ದಾರೆ.  ಇದು ‘ಜೇಮ್ಸ್​’ ಚಿತ್ರಕ್ಕೆ ಕಂಟಕವಾಗಬಹುದು.

ಸೆಕ್ಷನ್​ 144 ಜಾರಿ ಆದರೆ, ಗುಂಪು ಸೇರುವಂತಿಲ್ಲ. ದೊಡ್ಡ ರೀತಿಯ ಸೆಲೆಬ್ರೇಷನ್​ಗೆ ಅವಕಾಶ ಇರುವುದಿಲ್ಲ. ಇದು ಪುನೀತ್​ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ‘ಸರ್ಕಾರ ನಾಲ್ಕು ದಿನ ಸಂಭ್ರಮಕ್ಕೆ ಅನುಮತಿ ಕೊಡಬೇಕು. ಇಲ್ಲದಿದ್ದರೆ ತುಂಬಾ ನಿರಾಸೆ ಆಗುತ್ತದೆ. ಸಂಭ್ರಮಕ್ಕೆ ಅನುಮತಿ ಕೊಡಲಿ’ ಎಂದು ಅಭಿಮಾನಿಗಳು ಬೆಂಗಳೂರಿನಲ್ಲಿ ಘೋಷಣೆ ಕೂಗುತ್ತಿದ್ದಾರೆ.

‘ಒಂದೂವರೆ ತಿಂಗಳ ಹಿಂದೆಯೇ ‘ಜೇಮ್ಸ್’ ಸಿನಿಮಾ ಸೆಲೆಬ್ರೇಷನ್​ಗೆ ಅನುಮತಿ ಪಡೆದಿದ್ದೆವು. ಹಿಜಾಬ್ ವಿಚಾರವಾಗಿ 144 ಸೆಕ್ಷನ್ ಜಾರಿಯಾಗಿದೆ. ಒಂದೂವರೆ ತಿಂಗಳಿಂದ ನಾವು ಈ ಬಗ್ಗೆ ಕನಸು ಕಂಡಿದ್ದೆವು. ದಯವಿಟ್ಟು ಮುಖ್ಯಮಂತ್ರಿಗಳು ಹಾಗೂ ಕಮಿಷನರ್ ಅವರು ನಮ್ಮ ಮನವಿಯನ್ನು ಪರಿಗಣಿಸಿ ನಿಯಮ ಸಡಿಲ ಮಾಡಲು ಅನುಮತಿ ಕೊಡಬೇಕು’ ಎಂದು ಅಪ್ಪು ಅಭಿಮಾನಿಗಳು ಕೋರಿದ್ದಾರೆ.

ನಾಳೆ ಪುನೀತ್​ ಬರ್ತ್​ಡೇ ಹಾಗೂ ಜೇಮ್ಸ್​ ಸೆಲೆಬ್ರೇಷನ್​ಗೆ ಸರ್ಕಾರ ಅನುಮತಿ ನೀಡಲಿದೆಯೇ? ಸರ್ಕಾರ ಈ ಬಗ್ಗೆ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುವ ಗೊಂದಲ ಅಭಿಮಾನಿಗಳನ್ನು ಇನ್ನೂ ಕಾಡುತ್ತಿದೆ.

ಇದನ್ನೂ ಓದಿ: ಪುನೀತ್​​ ಬಯೋಗ್ರಫಿ ‘ನೀನೆ ರಾಜಕುಮಾರ’ ರಿಲೀಸ್ ಮಾಡಿದ ಕಿಚ್ಚ ಸುದೀಪ್​ ಹೇಳಿದ್ದೇನು?

ಹೆಲ್ಮೆಟ್​ ಜಾಗೃತಿ: ಪುನೀತ್​ ರಾಜ್​ಕುಮಾರ್​ ವಿಡಿಯೋ ನೋಡಿ ಪೊಲೀಸರ ಎದುರು ಅಶ್ವಿನಿ ಭಾವುಕ

Published On - 2:30 pm, Wed, 16 March 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ