AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತ್ರಿಕಾರಂ’ ಚಿತ್ರತಂಡದಿಂದ ಮತ್ತೊಂದು ಲವ್ ಹಾಡು ರಿಲೀಸ್

‘ತ್ರಿಕಾರಂ’ ಟೈಟಲ್ ಗಮನ ಸೆಳೆದಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಇದು ಸ್ಮಶಾನ ಅಲ್ಲ’ ಎಂಬ ಟ್ಯಾಗ್ ಲೈನ್ ಇದೆ. ಹರ್ಷವರ್ಧನ್ ಮತ್ತು ನಿಶ್ಚಿತಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಎರಡು ಶೇಡ್ ಇರುವ ಪಾತ್ರ ಮಾಡಿದ್ದಾರೆ. ಇತ್ತೀಚಿಗೆ ಈ ಸಿನಿಮಾದ ಲವ್ ಸಾಂಗ್ ಬಿಡುಗಡೆ ಮಾಡಲಾಯಿತು.

‘ತ್ರಿಕಾರಂ’ ಚಿತ್ರತಂಡದಿಂದ ಮತ್ತೊಂದು ಲವ್ ಹಾಡು ರಿಲೀಸ್
Trikaaram Movie Team
ಮದನ್​ ಕುಮಾರ್​
|

Updated on: Feb 17, 2026 | 6:58 PM

Share

ಈ ಮೊದಲು ಬಿಡುಗಡೆ ಆಗಿದ್ದ ಹಾಡಿಗೆ ಜನರಿಂದ ಸಿಕ್ಕ ಪ್ರತಿಕ್ರಿಯೆಗೆ ‘ತ್ರಿಕಾರಂ’ (Trikaaram) ಚಿತ್ರತಂಡ ಖುಷಿಯಾಗಿದೆ. ಅದರ ಬೆನ್ನಲ್ಲೇ ಇನ್ನೊಂದು ಹಾಡು (Kannada Song) ರಿಲೀಸ್ ಮಾಡಲಾಗಿದೆ. ಫೆಬ್ರವರಿ ಎಂದರೆ ಪ್ರೇಮಿಗಳ ತಿಂಗಳು. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಇತ್ತೀಚೆಗೆ ಈ ಸಿನಿಮಾದ ಹೊಸ ಹಾಡನ್ನು ಅನಾವರಣ ಮಾಡಲಾಯಿತು. ಉತ್ಸವ್ ಲೆಗೆಸಿಯಲ್ಲಿ ಹಾಡಿನ ರಿಲೀಸ್ ಕಾರ್ಯಕ್ರಮ ನಡೆಯಿತು. ರವೀಂದ್ರ, ಶಿವರಾಜ್ ಕೆ.ಆರ್. ಪೇಟೆ, ಖದರ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು.

‘ತ್ರಿಕಾರಂ’ ಸಿನಿಮಾದ ಹೊಸ ಹಾಡು ಪಿನ್2ಪಿನ್ ಮ್ಯೂಸಿಕ್ ಸಂಸ್ಥೆಯಿಂದ ರಿಲೀಸ್ ಆಗಿದೆ. ‘ಸೀದಾ ನಿಂತರೂ ಲೋಕ ಯಾಕೆ ಉಲ್ಟ ಕಾಣ್ತದೆ’ ಎಂಬ ಸಾಲಿನೊಂದಿಗೆ ಈ ಹಾಡು ಶುರು ಆಗುತ್ತದೆ. ಕೇಶು-ಚೇತನ್ ಅವರು ಈ ಹಾಡನ್ನು ಬರೆದಿದ್ದಾರೆ. ರಾಜೇಶ್ ಕೃಷ್ಣನ್ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾಗೆ ವಿವೇಕ್ ಚಕ್ರವರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ.

‘ಸದ್ಗುರು ಸಿನಿ ಪ್ರೊಡಕ್ಷನ್’ ಮೂಲಕ ನಾಟಕಪ್ರೇಮಿ ಆಗಿರುವ ಜಿ. ಗಣೇಶ್ ಮೂರ್ತಿ ಅವರು ‘ತ್ರಿಕಾರಂ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕನಾಗಿದ್ದು ಮಾತ್ರವಲ್ಲದೇ ವಿಲನ್ ಪಾತ್ರವನ್ನೂ ಅವರೇ ಮಾಡಿದ್ದಾರೆ. ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿ ಅನುಭವ ಹೊಂದಿರುವ ಅಜ್ಜಂಪುರದ ದಿಲೀಪ್ ಕುಮಾರ್ ಜೆ.ಆರ್. ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

‘ತ್ರಿಕಾರಂ’ ಸಿನಿಮಾದ ಹೊಸ ಹಾಡು:

ಈ ಸಿನಿಮಾಗೆ ಹೊನ್ನಾಳಿ ಯಾಸಿನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಸತೀಶ್ ಚಂದ್ರಯ್ಯ ಅವರು ಸಂಕಲನ ಮಾಡಿದ್ದಾರೆ. ಚಂದ್ರುಬಂಡೆ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಹೈಟ್‌ ಮಂಜು, ಕಂಬಿರಾಜ್ ಅವರ ನ್ಯೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನಾಗೇಂದ್ರ ಪ್ರಸಾದ್, ಚೇತನ್‌ಕುಮಾರ್, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಹೊಸದುರ್ಗ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ.

ಇದನ್ನೂ ಓದಿ: ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್

ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕರು ಮಾಹಿತಿ ಹಂಚಿಕೊಂಡರು. ‘ದೈವ ಮತ್ತು ದುಷ್ಟರ ನಡುವಿನ ಹೋರಾಟ ಕಥೆಯು ಸೆಸ್ಪೆನ್ಸ್ ಥ್ರಿಲ್ಲರ್ ಮಾದರಿಯಲ್ಲಿ ಸಾಗುತ್ತದೆ. ಅದು ಯಾವ ರೀತಿಯ ಹೋರಾಟ ಎಂಬುದನ್ನು ಸಿನಿಮಾದಲ್ಲಿ ನೋಡಬೇಕು’ ಎಂದು ಅವರು ಹೇಳಿದರು. ಈ ಚಿತ್ರದಲ್ಲಿ ಹರ್ಷವರ್ಧನ್, ನಿಶ್ಚಿತಾ ಶೆಟ್ಟಿ, ನಾಗೇಂದ್ರ ಅರಸ್, ಬಲರಾಜವಾಡಿ, ಮಂಜು ಪಾವಗಡ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು