AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶೇಷ ಎಂದರೆ ‘ಸೀತಾ ರಾಮ’ ಧಾರಾವಾಹಿ ಮಲಯಾಳಂಗೆ ಡಬ್​ ಆಗಿದೆ.

ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್
ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: May 07, 2024 | 8:29 AM

Share

ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ (Seetha Raama) ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಅಶೋಕ್ ಸೇರಿ ಅನೇಕರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಸೀತಾ ರಾಮ ತಂಡ ಮಲಯಾಳಂನತ್ತ ಮುಖ ಮಾಡಿದೆ! ಹೌದು, ಹೀಗೊಂದು ಅಪ್​ಡೇಟ್ ಮಲಯಾಳಂ ಕಿರುತೆರೆಯಿಂದ ಸಿಕ್ಕಿದೆ. ಅಷ್ಟಕ್ಕೂ ಏನಿದು ಸಮಾಚಾರ? ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶೇಷ ಎಂದರೆ ‘ಸೀತಾ ರಾಮ’ ಧಾರಾವಾಹಿ ಮಲಯಾಳಂಗೆ ಡಬ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಜೀ ಕೇರಳಂನಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ.

ಸೀತಾ ರಾಮಂ ಧಾರಾವಾಹಿ ಪ್ರೋಮೋ

View this post on Instagram

A post shared by Zee Keralam (@zeekeralam)

ಅಂದಹಾಗೆ, ‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೇಶಿಮಘಡ’ ಧಾರಾವಾಹಿಯ ರಿಮೇಕ್ ಆಗಿದೆ. ಈ ಧಾರಾವಾಹಿ 2021ರಲ್ಲಿ ಪ್ರಸಾರ ಕಂಡು ಮೆಚ್ಚುಗೆ ಪಡೆದಿತ್ತು. ಇದರ ಕಥೆಯನ್ನು ಕನ್ನಡಕ್ಕೆ ಬೇಕಾದಂತೆ ಬದಲಿಸಿ ರಿಮೇಕ್ ಮಾಡಲಾಗಿತ್ತು. ಈಗ ಕನ್ನಡದ ಧಾರಾವಾಹಿ ಮಲಯಾಳಂಗೆ ಡಬ್ ಆಗಿದೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ ಪ್ರಸಾರ ಕಂಡು ಸೂಪರ್ ಹಿಟ್ ಆದ ‘ಗಟ್ಟಿಮೇಳ’ ಧಾರಾವಾಹಿ ಮಲಯಾಳಂಗೆ ‘ಪರಿಣಯಮ್’ ಎಂದು ಡಬ್ ಆಗಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: ಹಿಂದಿಗೆ ರಿಮೇಕ್ ಆಗ್ತಿದೆ ಕನ್ನಡದ ‘ಸೀತಾ ರಾಮ’ ಧಾರಾವಾಹಿ; ಪ್ರೋಮೋ ವೈರಲ್

ಇತ್ತೀಚೆಗೆ ರಿಮೇಕ್ ಜೊತೆ ಧಾರಾವಾಹಿಗಳನ್ನು ಬೇರೆ ಭಾಷೆಗೆ ಡಬ್ ಮಾಡುವ ಟ್ರೆಂಡ್ ಕೂಡ ಜೋರಾಗಿದೆ. ಪರಭಾಷೆಯ ಅನೇಕ ಧಾರಾವಾಹಿಗಳು ಕನ್ನಡಕ್ಕೆ ಡಬ್ ಆಗಿ ಪ್ರಸಾರ ಕಾಣುತ್ತವೆ. ಈ ವೇಳೆ ಸಂಸ್ಕೃತಿ ವ್ಯತ್ಯಾಸ ಉಂಟಾದ ಬಗ್ಗೆ ಅನೇಕರು ಟೀಕೆ ಮಾಡಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?