AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶೇಷ ಎಂದರೆ ‘ಸೀತಾ ರಾಮ’ ಧಾರಾವಾಹಿ ಮಲಯಾಳಂಗೆ ಡಬ್​ ಆಗಿದೆ.

ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್
ಸೀತಾ ರಾಮ
Follow us
ರಾಜೇಶ್ ದುಗ್ಗುಮನೆ
|

Updated on: May 07, 2024 | 8:29 AM

ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ (Seetha Raama) ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಅಶೋಕ್ ಸೇರಿ ಅನೇಕರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಸೀತಾ ರಾಮ ತಂಡ ಮಲಯಾಳಂನತ್ತ ಮುಖ ಮಾಡಿದೆ! ಹೌದು, ಹೀಗೊಂದು ಅಪ್​ಡೇಟ್ ಮಲಯಾಳಂ ಕಿರುತೆರೆಯಿಂದ ಸಿಕ್ಕಿದೆ. ಅಷ್ಟಕ್ಕೂ ಏನಿದು ಸಮಾಚಾರ? ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶೇಷ ಎಂದರೆ ‘ಸೀತಾ ರಾಮ’ ಧಾರಾವಾಹಿ ಮಲಯಾಳಂಗೆ ಡಬ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಜೀ ಕೇರಳಂನಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ.

ಸೀತಾ ರಾಮಂ ಧಾರಾವಾಹಿ ಪ್ರೋಮೋ

View this post on Instagram

A post shared by Zee Keralam (@zeekeralam)

ಅಂದಹಾಗೆ, ‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೇಶಿಮಘಡ’ ಧಾರಾವಾಹಿಯ ರಿಮೇಕ್ ಆಗಿದೆ. ಈ ಧಾರಾವಾಹಿ 2021ರಲ್ಲಿ ಪ್ರಸಾರ ಕಂಡು ಮೆಚ್ಚುಗೆ ಪಡೆದಿತ್ತು. ಇದರ ಕಥೆಯನ್ನು ಕನ್ನಡಕ್ಕೆ ಬೇಕಾದಂತೆ ಬದಲಿಸಿ ರಿಮೇಕ್ ಮಾಡಲಾಗಿತ್ತು. ಈಗ ಕನ್ನಡದ ಧಾರಾವಾಹಿ ಮಲಯಾಳಂಗೆ ಡಬ್ ಆಗಿದೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ ಪ್ರಸಾರ ಕಂಡು ಸೂಪರ್ ಹಿಟ್ ಆದ ‘ಗಟ್ಟಿಮೇಳ’ ಧಾರಾವಾಹಿ ಮಲಯಾಳಂಗೆ ‘ಪರಿಣಯಮ್’ ಎಂದು ಡಬ್ ಆಗಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: ಹಿಂದಿಗೆ ರಿಮೇಕ್ ಆಗ್ತಿದೆ ಕನ್ನಡದ ‘ಸೀತಾ ರಾಮ’ ಧಾರಾವಾಹಿ; ಪ್ರೋಮೋ ವೈರಲ್

ಇತ್ತೀಚೆಗೆ ರಿಮೇಕ್ ಜೊತೆ ಧಾರಾವಾಹಿಗಳನ್ನು ಬೇರೆ ಭಾಷೆಗೆ ಡಬ್ ಮಾಡುವ ಟ್ರೆಂಡ್ ಕೂಡ ಜೋರಾಗಿದೆ. ಪರಭಾಷೆಯ ಅನೇಕ ಧಾರಾವಾಹಿಗಳು ಕನ್ನಡಕ್ಕೆ ಡಬ್ ಆಗಿ ಪ್ರಸಾರ ಕಾಣುತ್ತವೆ. ಈ ವೇಳೆ ಸಂಸ್ಕೃತಿ ವ್ಯತ್ಯಾಸ ಉಂಟಾದ ಬಗ್ಗೆ ಅನೇಕರು ಟೀಕೆ ಮಾಡಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು