AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶೇಷ ಎಂದರೆ ‘ಸೀತಾ ರಾಮ’ ಧಾರಾವಾಹಿ ಮಲಯಾಳಂಗೆ ಡಬ್​ ಆಗಿದೆ.

ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್
ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: May 07, 2024 | 8:29 AM

Share

ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ (Seetha Raama) ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಅಶೋಕ್ ಸೇರಿ ಅನೇಕರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಸೀತಾ ರಾಮ ತಂಡ ಮಲಯಾಳಂನತ್ತ ಮುಖ ಮಾಡಿದೆ! ಹೌದು, ಹೀಗೊಂದು ಅಪ್​ಡೇಟ್ ಮಲಯಾಳಂ ಕಿರುತೆರೆಯಿಂದ ಸಿಕ್ಕಿದೆ. ಅಷ್ಟಕ್ಕೂ ಏನಿದು ಸಮಾಚಾರ? ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶೇಷ ಎಂದರೆ ‘ಸೀತಾ ರಾಮ’ ಧಾರಾವಾಹಿ ಮಲಯಾಳಂಗೆ ಡಬ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಜೀ ಕೇರಳಂನಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ.

ಸೀತಾ ರಾಮಂ ಧಾರಾವಾಹಿ ಪ್ರೋಮೋ

View this post on Instagram

A post shared by Zee Keralam (@zeekeralam)

ಅಂದಹಾಗೆ, ‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೇಶಿಮಘಡ’ ಧಾರಾವಾಹಿಯ ರಿಮೇಕ್ ಆಗಿದೆ. ಈ ಧಾರಾವಾಹಿ 2021ರಲ್ಲಿ ಪ್ರಸಾರ ಕಂಡು ಮೆಚ್ಚುಗೆ ಪಡೆದಿತ್ತು. ಇದರ ಕಥೆಯನ್ನು ಕನ್ನಡಕ್ಕೆ ಬೇಕಾದಂತೆ ಬದಲಿಸಿ ರಿಮೇಕ್ ಮಾಡಲಾಗಿತ್ತು. ಈಗ ಕನ್ನಡದ ಧಾರಾವಾಹಿ ಮಲಯಾಳಂಗೆ ಡಬ್ ಆಗಿದೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ ಪ್ರಸಾರ ಕಂಡು ಸೂಪರ್ ಹಿಟ್ ಆದ ‘ಗಟ್ಟಿಮೇಳ’ ಧಾರಾವಾಹಿ ಮಲಯಾಳಂಗೆ ‘ಪರಿಣಯಮ್’ ಎಂದು ಡಬ್ ಆಗಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: ಹಿಂದಿಗೆ ರಿಮೇಕ್ ಆಗ್ತಿದೆ ಕನ್ನಡದ ‘ಸೀತಾ ರಾಮ’ ಧಾರಾವಾಹಿ; ಪ್ರೋಮೋ ವೈರಲ್

ಇತ್ತೀಚೆಗೆ ರಿಮೇಕ್ ಜೊತೆ ಧಾರಾವಾಹಿಗಳನ್ನು ಬೇರೆ ಭಾಷೆಗೆ ಡಬ್ ಮಾಡುವ ಟ್ರೆಂಡ್ ಕೂಡ ಜೋರಾಗಿದೆ. ಪರಭಾಷೆಯ ಅನೇಕ ಧಾರಾವಾಹಿಗಳು ಕನ್ನಡಕ್ಕೆ ಡಬ್ ಆಗಿ ಪ್ರಸಾರ ಕಾಣುತ್ತವೆ. ಈ ವೇಳೆ ಸಂಸ್ಕೃತಿ ವ್ಯತ್ಯಾಸ ಉಂಟಾದ ಬಗ್ಗೆ ಅನೇಕರು ಟೀಕೆ ಮಾಡಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ