Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತಾಗೆ ಸಿಹಿ ಸಿಗೋ ಮೊದಲೇ ಬದಲಾಯಿತು ‘ಸೀತಾ ರಾಮ’ ಪ್ರಸಾರ ಸಮಯ: ವೀಕ್ಷಕರ ಅಸಮಾಧಾನ

ಜೀ ಕನ್ನಡದ ಜನಪ್ರಿಯ ಧಾರಾವಾಹಿ “ಸೀತಾ ರಾಮ”ದ ಸಮಯ ಬದಲಾವಣೆಯಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. TRP ಇಳಿಕೆಯಿಂದಾಗಿ ರಾತ್ರಿ 9.30 ರಿಂದ ಸಂಜೆ 7.30ಕ್ಕೆ ಸಮಯ ಬದಲಿಸಲಾಗಿದೆ. ಈ ಬದಲಾವಣೆಯಿಂದ ವೀಕ್ಷಕರಿಗೆ ತೊಂದರೆಯಾಗಿದ್ದು, ಹಿಂದಿನ ಸಮಯಕ್ಕೆ ಮರಳುವಂತೆ ಆಗ್ರಹಿಸಲಾಗುತ್ತಿದೆ. ಧಾರಾವಾಹಿಯಲ್ಲಿನ ಟ್ವಿಸ್ಟ್‌ಗಳು ಕೂಡ ವೀಕ್ಷಕರನ್ನು ಆಕರ್ಷಿಸುತ್ತಿಲ್ಲ ಎಂಬ ಅಭಿಪ್ರಾಯವಿದೆ.

ಸೀತಾಗೆ ಸಿಹಿ ಸಿಗೋ ಮೊದಲೇ ಬದಲಾಯಿತು ‘ಸೀತಾ ರಾಮ’ ಪ್ರಸಾರ ಸಮಯ: ವೀಕ್ಷಕರ ಅಸಮಾಧಾನ
Seetha Raama
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Jan 22, 2025 | 4:45 PM

‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಇತ್ತೀಚೆಗೆ ಸ್ವಲ್ಪ ತಗ್ಗಿದೆ ಎನ್ನಬಹುದು. ಈ ರೀತಿ ಆದಾಗ ವಾಹಿನಿಯವರು ಧಾರಾವಾಹಿಗೆ ಬೇರೆ ಸ್ಲಾಟ್ ಕೊಟ್ಟ ಉದಾಹರಣೆ ಸಾಕಷ್ಟು ಇದೆ. ಈಗ ‘ಸೀತಾ ರಾಮ’ ಧಾರಾವಾಹಿಗೂ ಹಾಗೆಯೇ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ. ಮಗಳು ಸಿಹಿಯನ್ನು ಕಳೆದುಕೊಂಡ ನೋವಲ್ಲಿರುವ ಸೀತಾಗೆ ಮತ್ತೆ ಮಗಳು ಸಿಕ್ಕಳು ಎನ್ನುವಾಗಲೇ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗಿದೆ.

‘ಸೀತಾ ರಾಮ’ ಧಾರಾವಾಹಿ ಈ ಮೊದಲು ಜೀ ಕನ್ನಡದಲ್ಲಿ ರಾತ್ರಿ 9.30ಕ್ಕೆ ಪ್ರಸಾರ ಕಾಣುತ್ತಿತ್ತು. ಆದರೆ, ಇನ್ನುಮುಂದೆ ಧಾರಾವಾಹಿ ಈ ಸಮಯದಲ್ಲಿ ಪ್ರಸಾರ ಕಾಣುವುದಿಲ್ಲ. ಹೌದು, ಜನವರಿ 27ರಿಂದ ಈ ಧಾರಾವಾಹಿಯ ಸಮಯ ಬದಲಾಗಿದೆ. ಇನ್ನುಮುಂದೆ ಧಾರಾವಾಹಿ ಸಂಜೆ 7.30ಕ್ಕೆ ಪ್ರಸಾರ ಕಾಣಲಿದೆಯಂತೆ. ಇದು ವೀಕ್ಷಕರ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

‘ಸೀತಾ ರಾಮ’ ಧಾರಾವಾಹಿ ಅಭಿಮಾನಿ ಬಳಗ ದೊಡ್ಡದಿದೆ. ಸಂಜೆ 5.30ಕ್ಕೆ ಧಾರಾವಾಹಿ ಪ್ರಸಾರ ಮಾಡಿದರೆ ಯಾರೂ ಅದನ್ನು ನೋಡುವುದಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈಗಲೇ ಮೊದಲಿನ ಸಮಯಕ್ಕೆ ಧಾರಾವಾಹಿ ಪ್ರಸಾರ ಮಾಡಿ ಎಂಬ ಆಗ್ರಹ ವ್ಯಕ್ತವಾಗಿದೆ.

View this post on Instagram

A post shared by Zee Kannada (@zeekannada)

ಸಿಹಿಯನ್ನು (ರೀತು ಸಿಂಗ್) ಅಪಘಾತದಲ್ಲಿ ಭಾರ್ಗವಿ (ಪೂಜಾ ಲೋಕೇಶ್) ಸಾಯಿಸಿದ್ದಾಳೆ. ಇದು ಶಾಕಿಂಗ್ ಎನಿಸಿತ್ತು. ಆ ಬಳಿಕ ಸಿಹಿ ತಾಯಿ ಸೀತಾಗೆ (ವೈಷ್ಣವಿ ಗೌಡ) ಸಾಕಷ್ಟು ನೋವಾಗಿದೆ. ಆಕೆ ಹುಚ್ಚಿ ಆಗುವ ಹಂತಕ್ಕೆ ಬಂದಿದ್ದಾಳೆ. ಹೀಗಿರುವಾಗಲೇ ಬೇರೆ ಹುಡುಗಿಯನ್ನು ದತ್ತು ತೆಗೆದುಕೊಳ್ಳುವ ಪ್ರಕ್ರಿಯೆ ಮಾಡಲಾಗುತ್ತಿದೆ. ಸಿಹಿಯ ಟ್ವಿನ್ ಸುಬ್ಬಿಯ ಈ ಸಂದರ್ಭದಲ್ಲೇ ಧಾರಾವಾಹಿ ಸಮಯ ಬದಲಿಸಲಾಗಿದೆ. ಇನ್ನು, ಧಾರಾವಾಹಿಯಲ್ಲಿ ನೀಡಲಾಗುತ್ತಿರುವ ಟ್ವಿಸ್ಟ್ಗಳನ್ನು ಕೂಡ ವೀಕ್ಷಕರು ಹೆಚ್ಚು ಇಷ್ಟಪಡುತ್ತಿಲ್ಲ.

‘ಸೀತಾ ರಾಮ’ ಧಾರಾವಾಹಿ 2023ರ ಜುಲೈನಲ್ಲಿ ಪ್ರಸಾರ ಆರಂಭಿಸಿತು. ಈವರೆಗೆ ಧಾರಾವಾಹಿ 350 ಎಪಿಸೋಡ್ಗಳನ್ನು ಪೂರ್ಣಗೊಳಿಸಿದೆ. ಸಪ್ನಾ ಕೃಷ್ಣ ಅವರು ಈ ಧಾರಾವಾಹಿಯನ್ನು ನಿರ್ದೇಶನ ಮಾಡುತ್ತಾ ಇದ್ದಾರೆ. ಇದು ಮರಾಠಿ ಧಾರಾವಾಹಿಯ ರಿಮೇಕ್ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ