AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Aravind: ರಮೇಶ್​ ಅರವಿಂದ್​ ಬರೆದ ಹೊಸ ಪುಸ್ತಕದ ಬಗ್ಗೆ ಮೆಚ್ಚುಗೆಯ ಮಾತಾಡಿದ ಅನಂತ್​ ನಾಗ್​

Ramesh Aravind New Book: ‘ಪ್ರೀತಿಯಿಂದ ರಮೇಶ್​.. ಯಶಸ್ಸಿನ ಸರಳ ಸೂತ್ರಗಳು’ ಕೃತಿ ಬಿಡುಗಡೆ ಆಗಿದೆ. ಪುಸ್ತಕ ಬಿಡುಗಡೆ ಬಳಿಕ ಹಿರಿಯ ನಟ ಅನಂತ್​ ನಾಗ್​ ಮಾತನಾಡಿದರು.

Ramesh Aravind: ರಮೇಶ್​ ಅರವಿಂದ್​ ಬರೆದ ಹೊಸ ಪುಸ್ತಕದ ಬಗ್ಗೆ ಮೆಚ್ಚುಗೆಯ ಮಾತಾಡಿದ ಅನಂತ್​ ನಾಗ್​
ರಮೇಶ್​ ಅರವಿಂದ್​ ಪುಸ್ತಕ ಬಿಡುಗಡೆ
TV9 Web
| Updated By: ಮದನ್​ ಕುಮಾರ್​|

Updated on:Sep 11, 2022 | 9:25 PM

Share

ನಟ ರಮೇಶ್​ ಅರವಿಂದ್​ (Ramesh Aravind) ಅವರ ಪ್ರತಿಭೆ ಬಹುಮುಖವಾದದ್ದು. ಸಿನಿಮಾ ಕಲಾವಿದನಾಗಿ, ನಿರ್ದೇಶಕನಾಗಿ, ನಿರೂಪಕನಾಗಿ, ಮೋಟಿವೇಷನಲ್​ ಸ್ಪೀಕರ್​ ಆಗಿ ಅವರು ಗುರುತಿಸಿಕೊಂಡಿದ್ದಾರೆ. ನೂರಾರು ಸಿನಿಮಾಗಳ ಮೂಲಕ ಜನಮನ ಗೆದ್ದಿದ್ದಾರೆ. ಹಲವು ಟಿವಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಹೆಗ್ಗಳಿಕೆ ಅವರಿಗೆ ಇದೆ. ಅಷ್ಟೇ ಅಲ್ಲದೇ ಅವರೊಬ್ಬ ಅತ್ಯುತ್ತಮ ಲೇಖಕ ಕೂಡ ಹೌದು. ಅವರು ಬರೆದಿರುವ ‘ಪ್ರೀತಿಯಿಂದ ರಮೇಶ್​.. ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಇಂದು (ಸೆ.11) ಬಿಡುಗಡೆ ಮಾಡಲಾಗಿದೆ. ಹಿರಿಯ ನಟ ಅನಂತ್​ ನಾಗ್​ (Ananth Nag) ಅವರು ಈ ಪುಸ್ತಕದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಸಾವಣ್ಣ ಪ್ರಕಾಶನದ ಮೂಲಕ ಈ ಪುಸ್ತಕ ಪ್ರಕಟ ಆಗಿದೆ. ಬೆಂಗಳೂರಿನ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಜರುಗಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿ ಆಗಿದ್ದರು.

‘ಬಾಲ್ಯದಲ್ಲಿ ನಮಗೆ 30-40 ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ಸ್ವಾಮಿ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅರವಿಂದ್​ ಬರೆದಿರುವ ಈ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿ ಇದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳುವಳಿಕೆ ನೀಡುವ ಈ ಪುಸ್ತಕವನ್ನು ಬರೆಯುವ ಮೂಲಕ ರಮೇಶ್ ಅವರು ಈ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ’ ಎಂಬುದು ಅನಂತ್​ ನಾಗ್​ ಮಾತುಗಳು.

‘ರಮೇಶ್​ ಅರವಿಂದ್​ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಅವರು ಹೊಂದಿದ್ದಾರೆ. ಅವರಲ್ಲಿನ ಈ ಗುಣಗಳು ಈ ಕೃತಿಯಲ್ಲಿ ಬಿಂಬಿತವಾಗಿದೆ’ ಎಂದಿದ್ದಾರೆ ಲೇಖಕ, ಪತ್ರಕರ್ತ ಜೋಗಿ. ಜೀ ಕನ್ನಡ ವಾಹಿನಿಯ ಬಿಸ್ನೆಸ್​ ಹೆಡ್ ರಾಘವೇಂದ್ರ ಹುಣಸೂರು,  ಜಮೀಲ್ ಸಾವಣ್ಣ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ
Image
‘ಶಿವಾಜಿ ಸುರತ್ಕಲ್ 2’ ತಂಡದೊಂದಿಗೆ ರಮೇಶ್ ಅರವಿಂದ್ ಬರ್ತ್​ಡೇ ಆಚರಣೆ
Image
Ramesh Aravind Birthday: ನಟ ರಮೇಶ್​ ಅರವಿಂದ್​ಗೆ ಬರ್ತ್​ಡೇ ಸಂಭ್ರಮ; ‘ಶಿವಾಜಿ ಸುರತ್ಕಲ್ 2’ ಟೀಸರ್ ಗಿಫ್ಟ್
Image
ಜನ್ಮದಿನಕ್ಕೆ ವಿಶ್​ ಮಾಡಲು ಫೋನ್​ ನಂಬರ್​ ಕೊಟ್ಟ ರಮೇಶ್​ ಅರವಿಂದ್​; ಇಲ್ಲಿದೆ ಸೂಪರ್​ ಅವಕಾಶ
Image
Ramesh Aravind: ಸೋಷಿಯಲ್ ಮೀಡಿಯಾ ವರವೋ, ಶಾಪವೋ?; ರಮೇಶ್ ಅರವಿಂದ್ ಹೇಳಿದ್ದೇನು?

ತಮ್ಮ ಬರವಣಿಗೆ ಬಗ್ಗೆ ರಮೇಶ್​ ಅರವಿಂದ್​ ಮಾತನಾಡಿದ್ದಾರೆ. ‘ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ’ ಎಂದು ರಮೇಶ್​ ಅರವಿಂದ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:25 pm, Sun, 11 September 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!