ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ […]

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ
Follow us
|

Updated on:Feb 02, 2020 | 1:14 PM

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ ಚಿತ್ರ ಬಿಡುಗಡೆಯಾಗಿ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಚಿತ್ರ ನಷ್ಟವುಂಟಾಗಿ ಕೇವಲ ಎರಡು ಕೋಟಿ ಲಾಭ ಬಂದಿತ್ತು. ಹೂಡಿಕೆ ಮಾಡಿದ ಹಣ ವಾಪಸ್ ಬಂದಿರಲಿಲ್ಲ. ಒಪ್ಪಂದದ ಪ್ರಕಾರ ನಿರ್ಮಾಪಕರಿಗೆ ದ್ವಾರಕೀಶ್ ಹಣ ನೀಡಬೇಕಿತ್ತು. ಆದ್ರೆ ಲಾಭಬಾರದ ಕಾರಣ ಹಣ ನೀಡಲಾಗಿಲ್ಲ.

ಹೀಗಾಗಿ ಹಣ ವಾಪಸ್ ಕೊಡುವಂತೆ ದ್ವಾರಕೀಶ್ ಮನೆ ಬಳಿ ನಿರ್ಮಾಪಕರು ತೆರಳಿದ್ದಾರೆ. ಈ ವೇಳೆ ಎರಡು ವರ್ಷ ಬಿಟ್ಟು ಹಣ ವಾಪಸ್ ಕೊಡುವುದಾಗಿ ದ್ವಾರಕೀಶ್ ಹೇಳಿದ್ದಾರೆ. ಹೀಗಾಗಿ ಗರಂ ಆಗಿದ್ದ ನಿರ್ಮಾಪಕರು ದ್ವಾರಕೀಶ್​ಗೆ ತರಾಟೆಗೆ ತೆಗೆದುಕೊಂಡಿದ್ರು. ಮಾತಿನ ಚಕಮಕಿಯಾಗಿದೆ. ನಿರ್ಮಾಪಕರು ಬಂದು ಧಮ್ಕಿ ಹಾಕಿದ್ದಾರೆ ಎಂದು ಹೆಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ದ್ವಾರಕೀಶ್ ಮಗ ಯೋಗೀಶ್ ದೂರು ನೀಡಿದ್ದಾರೆ. ನಿರ್ಮಾಪಕರಿಗೆ ಫೀಲಂ ಚೇಂಬರ್, ಕೋರ್ಟ್ ಇರುವಾಗ ಮನೆ ಬಳಿ ಬಂದಿದ್ದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

ಗಲಾಟೆಯಿಂದ ನಮ್ಮ ತಂದೆಗೆ ಬೇಸರವಾಗಿದೆ: ಹಣ ಕೇಳಲು ಜಯಣ್ಣಗೆ ಹಕ್ಕಿದೆ, ರಮೇಶ್​​ ಏಕೆ ಬಂದದ್ದು? ರಮೇಶ್​ ಬಂದು ಗಲಾಟೆ ಮಾಡಿದ್ದು ಯಾಕೆ? ಗಲಾಟೆಯಿಂದ ನಮ್ಮ ತಂದೆ ಬೇಸರಗೊಂಡಿದ್ದಾರೆ. ನಮ್ಮ ತಂದೆ ರಮೇಶ್ ವಿರುದ್ಧ ದೂರು ನೀಡಿದ್ದಾರೆ ಎಂದು ಟಿವಿ9ಗೆ ಹಿರಿಯ ನಟ ದ್ವಾರಕೀಶ್ ಪುತ್ರ ಯೋಗೀಶ್ ಪ್ರತಿಕ್ರಿಯಿಸಿದ್ದಾರೆ.

Published On - 9:50 am, Sun, 2 February 20

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್