AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ […]

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ
ಸಾಧು ಶ್ರೀನಾಥ್​
|

Updated on:Feb 02, 2020 | 1:14 PM

Share

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ ಚಿತ್ರ ಬಿಡುಗಡೆಯಾಗಿ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಚಿತ್ರ ನಷ್ಟವುಂಟಾಗಿ ಕೇವಲ ಎರಡು ಕೋಟಿ ಲಾಭ ಬಂದಿತ್ತು. ಹೂಡಿಕೆ ಮಾಡಿದ ಹಣ ವಾಪಸ್ ಬಂದಿರಲಿಲ್ಲ. ಒಪ್ಪಂದದ ಪ್ರಕಾರ ನಿರ್ಮಾಪಕರಿಗೆ ದ್ವಾರಕೀಶ್ ಹಣ ನೀಡಬೇಕಿತ್ತು. ಆದ್ರೆ ಲಾಭಬಾರದ ಕಾರಣ ಹಣ ನೀಡಲಾಗಿಲ್ಲ.

ಹೀಗಾಗಿ ಹಣ ವಾಪಸ್ ಕೊಡುವಂತೆ ದ್ವಾರಕೀಶ್ ಮನೆ ಬಳಿ ನಿರ್ಮಾಪಕರು ತೆರಳಿದ್ದಾರೆ. ಈ ವೇಳೆ ಎರಡು ವರ್ಷ ಬಿಟ್ಟು ಹಣ ವಾಪಸ್ ಕೊಡುವುದಾಗಿ ದ್ವಾರಕೀಶ್ ಹೇಳಿದ್ದಾರೆ. ಹೀಗಾಗಿ ಗರಂ ಆಗಿದ್ದ ನಿರ್ಮಾಪಕರು ದ್ವಾರಕೀಶ್​ಗೆ ತರಾಟೆಗೆ ತೆಗೆದುಕೊಂಡಿದ್ರು. ಮಾತಿನ ಚಕಮಕಿಯಾಗಿದೆ. ನಿರ್ಮಾಪಕರು ಬಂದು ಧಮ್ಕಿ ಹಾಕಿದ್ದಾರೆ ಎಂದು ಹೆಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ದ್ವಾರಕೀಶ್ ಮಗ ಯೋಗೀಶ್ ದೂರು ನೀಡಿದ್ದಾರೆ. ನಿರ್ಮಾಪಕರಿಗೆ ಫೀಲಂ ಚೇಂಬರ್, ಕೋರ್ಟ್ ಇರುವಾಗ ಮನೆ ಬಳಿ ಬಂದಿದ್ದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

ಗಲಾಟೆಯಿಂದ ನಮ್ಮ ತಂದೆಗೆ ಬೇಸರವಾಗಿದೆ: ಹಣ ಕೇಳಲು ಜಯಣ್ಣಗೆ ಹಕ್ಕಿದೆ, ರಮೇಶ್​​ ಏಕೆ ಬಂದದ್ದು? ರಮೇಶ್​ ಬಂದು ಗಲಾಟೆ ಮಾಡಿದ್ದು ಯಾಕೆ? ಗಲಾಟೆಯಿಂದ ನಮ್ಮ ತಂದೆ ಬೇಸರಗೊಂಡಿದ್ದಾರೆ. ನಮ್ಮ ತಂದೆ ರಮೇಶ್ ವಿರುದ್ಧ ದೂರು ನೀಡಿದ್ದಾರೆ ಎಂದು ಟಿವಿ9ಗೆ ಹಿರಿಯ ನಟ ದ್ವಾರಕೀಶ್ ಪುತ್ರ ಯೋಗೀಶ್ ಪ್ರತಿಕ್ರಿಯಿಸಿದ್ದಾರೆ.

Published On - 9:50 am, Sun, 2 February 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು