AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ […]

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 02, 2020 | 1:14 PM

Share

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ ಚಿತ್ರ ಬಿಡುಗಡೆಯಾಗಿ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಚಿತ್ರ ನಷ್ಟವುಂಟಾಗಿ ಕೇವಲ ಎರಡು ಕೋಟಿ ಲಾಭ ಬಂದಿತ್ತು. ಹೂಡಿಕೆ ಮಾಡಿದ ಹಣ ವಾಪಸ್ ಬಂದಿರಲಿಲ್ಲ. ಒಪ್ಪಂದದ ಪ್ರಕಾರ ನಿರ್ಮಾಪಕರಿಗೆ ದ್ವಾರಕೀಶ್ ಹಣ ನೀಡಬೇಕಿತ್ತು. ಆದ್ರೆ ಲಾಭಬಾರದ ಕಾರಣ ಹಣ ನೀಡಲಾಗಿಲ್ಲ.

ಹೀಗಾಗಿ ಹಣ ವಾಪಸ್ ಕೊಡುವಂತೆ ದ್ವಾರಕೀಶ್ ಮನೆ ಬಳಿ ನಿರ್ಮಾಪಕರು ತೆರಳಿದ್ದಾರೆ. ಈ ವೇಳೆ ಎರಡು ವರ್ಷ ಬಿಟ್ಟು ಹಣ ವಾಪಸ್ ಕೊಡುವುದಾಗಿ ದ್ವಾರಕೀಶ್ ಹೇಳಿದ್ದಾರೆ. ಹೀಗಾಗಿ ಗರಂ ಆಗಿದ್ದ ನಿರ್ಮಾಪಕರು ದ್ವಾರಕೀಶ್​ಗೆ ತರಾಟೆಗೆ ತೆಗೆದುಕೊಂಡಿದ್ರು. ಮಾತಿನ ಚಕಮಕಿಯಾಗಿದೆ. ನಿರ್ಮಾಪಕರು ಬಂದು ಧಮ್ಕಿ ಹಾಕಿದ್ದಾರೆ ಎಂದು ಹೆಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ದ್ವಾರಕೀಶ್ ಮಗ ಯೋಗೀಶ್ ದೂರು ನೀಡಿದ್ದಾರೆ. ನಿರ್ಮಾಪಕರಿಗೆ ಫೀಲಂ ಚೇಂಬರ್, ಕೋರ್ಟ್ ಇರುವಾಗ ಮನೆ ಬಳಿ ಬಂದಿದ್ದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

ಗಲಾಟೆಯಿಂದ ನಮ್ಮ ತಂದೆಗೆ ಬೇಸರವಾಗಿದೆ: ಹಣ ಕೇಳಲು ಜಯಣ್ಣಗೆ ಹಕ್ಕಿದೆ, ರಮೇಶ್​​ ಏಕೆ ಬಂದದ್ದು? ರಮೇಶ್​ ಬಂದು ಗಲಾಟೆ ಮಾಡಿದ್ದು ಯಾಕೆ? ಗಲಾಟೆಯಿಂದ ನಮ್ಮ ತಂದೆ ಬೇಸರಗೊಂಡಿದ್ದಾರೆ. ನಮ್ಮ ತಂದೆ ರಮೇಶ್ ವಿರುದ್ಧ ದೂರು ನೀಡಿದ್ದಾರೆ ಎಂದು ಟಿವಿ9ಗೆ ಹಿರಿಯ ನಟ ದ್ವಾರಕೀಶ್ ಪುತ್ರ ಯೋಗೀಶ್ ಪ್ರತಿಕ್ರಿಯಿಸಿದ್ದಾರೆ.

Published On - 9:50 am, Sun, 2 February 20

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK