AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ […]

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 02, 2020 | 1:14 PM

Share

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ದ್ವಾರಕೀಶ್​​ ನಿವಾಸಕ್ಕೆ ನಿರ್ಮಾಪಕರಾದ ಜಯಣ್ಣ, ರಮೇಶ್ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನ ದ್ವಾರಕೀಶ್​​ ನಿವಾಸದಲ್ಲಿ ನಡೆದಿದೆ. ದ್ವಾರಕೀಶ್​ಗೆ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ನಿರ್ಮಾಪಕರ ವಿರುದ್ಧ ಎಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕೆ ನಿರ್ಮಾಪಕ ಜಯಣ್ಣ, ಭೋಗೇಂದ್ರ, ರಮೇಶ್ ಮೂರು ನಿರ್ಮಾಪಕರಿಂದ 12 ಕೋಟಿಗೂ ಹೆಚ್ಚು ಹಣ ಪಡೆದಿದ್ದರು. ಆದರೆ ಚಿತ್ರ ಬಿಡುಗಡೆಯಾಗಿ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಚಿತ್ರ ನಷ್ಟವುಂಟಾಗಿ ಕೇವಲ ಎರಡು ಕೋಟಿ ಲಾಭ ಬಂದಿತ್ತು. ಹೂಡಿಕೆ ಮಾಡಿದ ಹಣ ವಾಪಸ್ ಬಂದಿರಲಿಲ್ಲ. ಒಪ್ಪಂದದ ಪ್ರಕಾರ ನಿರ್ಮಾಪಕರಿಗೆ ದ್ವಾರಕೀಶ್ ಹಣ ನೀಡಬೇಕಿತ್ತು. ಆದ್ರೆ ಲಾಭಬಾರದ ಕಾರಣ ಹಣ ನೀಡಲಾಗಿಲ್ಲ.

ಹೀಗಾಗಿ ಹಣ ವಾಪಸ್ ಕೊಡುವಂತೆ ದ್ವಾರಕೀಶ್ ಮನೆ ಬಳಿ ನಿರ್ಮಾಪಕರು ತೆರಳಿದ್ದಾರೆ. ಈ ವೇಳೆ ಎರಡು ವರ್ಷ ಬಿಟ್ಟು ಹಣ ವಾಪಸ್ ಕೊಡುವುದಾಗಿ ದ್ವಾರಕೀಶ್ ಹೇಳಿದ್ದಾರೆ. ಹೀಗಾಗಿ ಗರಂ ಆಗಿದ್ದ ನಿರ್ಮಾಪಕರು ದ್ವಾರಕೀಶ್​ಗೆ ತರಾಟೆಗೆ ತೆಗೆದುಕೊಂಡಿದ್ರು. ಮಾತಿನ ಚಕಮಕಿಯಾಗಿದೆ. ನಿರ್ಮಾಪಕರು ಬಂದು ಧಮ್ಕಿ ಹಾಕಿದ್ದಾರೆ ಎಂದು ಹೆಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ದ್ವಾರಕೀಶ್ ಮಗ ಯೋಗೀಶ್ ದೂರು ನೀಡಿದ್ದಾರೆ. ನಿರ್ಮಾಪಕರಿಗೆ ಫೀಲಂ ಚೇಂಬರ್, ಕೋರ್ಟ್ ಇರುವಾಗ ಮನೆ ಬಳಿ ಬಂದಿದ್ದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

ಗಲಾಟೆಯಿಂದ ನಮ್ಮ ತಂದೆಗೆ ಬೇಸರವಾಗಿದೆ: ಹಣ ಕೇಳಲು ಜಯಣ್ಣಗೆ ಹಕ್ಕಿದೆ, ರಮೇಶ್​​ ಏಕೆ ಬಂದದ್ದು? ರಮೇಶ್​ ಬಂದು ಗಲಾಟೆ ಮಾಡಿದ್ದು ಯಾಕೆ? ಗಲಾಟೆಯಿಂದ ನಮ್ಮ ತಂದೆ ಬೇಸರಗೊಂಡಿದ್ದಾರೆ. ನಮ್ಮ ತಂದೆ ರಮೇಶ್ ವಿರುದ್ಧ ದೂರು ನೀಡಿದ್ದಾರೆ ಎಂದು ಟಿವಿ9ಗೆ ಹಿರಿಯ ನಟ ದ್ವಾರಕೀಶ್ ಪುತ್ರ ಯೋಗೀಶ್ ಪ್ರತಿಕ್ರಿಯಿಸಿದ್ದಾರೆ.

Published On - 9:50 am, Sun, 2 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ