AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಭೂತಗಳಲ್ಲಿ ಹಿರಿಯ ನಟ ಶಿವರಾಂ ಲೀನ; ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

ಅಕ್ಟೋಬರ್​ ತಿಂಗಳಲ್ಲಿ ಪುನೀತ್​ ರಾಜ್​ಕುಮಾರ್​ ಅಕಾಲಿಕ ಮರಣ ಹೊಂದಿದ್ದರು. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಶಾಕ್​ಗೆ ಒಳಗಾಗಿತ್ತು. ಇದಾದ ಬೆನ್ನಲ್ಲೇ ಶಿವರಾಂ ಕೂಡ ನಿಧನ ಹೊಂದಿರುವ ವಿಚಾರ ಸ್ಯಾಂಡಲ್​ವುಡ್​ಗೆ ಆಘಾತ ತಂದಿದೆ.

ಪಂಚಭೂತಗಳಲ್ಲಿ ಹಿರಿಯ ನಟ ಶಿವರಾಂ ಲೀನ; ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
ಶಿವರಾಂ
TV9 Web
| Edited By: |

Updated on: Dec 05, 2021 | 1:45 PM

Share

ಸ್ಯಾಂಡಲ್​ವುಡ್​ನ ಹಿರಿಯ ನಟ ಹಾಗೂ ನಿರ್ಮಾಪಕ ಶಿವರಾಂ ಅವರ ಅಂತ್ಯಕ್ರಿಯೆ ಇಂದು (ಡಿಸೆಂಬರ್​ 5) ಮಧ್ಯಾಹ್ನ ನೆರವೇರಿದೆ. ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್‌ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಸ್ಯಾಂಡಲ್​ವುಡ್​ಗೆ ಮಾರ್ಗದರ್ಶಕರಾಗಿದ್ದ ಶಿವರಾಂ ಅವರು, ಪಂಚಭೂತಗಳಲ್ಲಿ ಲೀನರಾದರು. ಅವರನ್ನು ಕಳೆದುಕೊಂಡ ಚಿತ್ರರಂಗ ಬಡವಾಗಿದೆ.

ಅಂತ್ಯ ಸಂಸ್ಕಾರಕ್ಕೂ ಮೊದಲು ಪಾರ್ಥಿವ ಶರೀರಕ್ಕೆ ಅಷ್ಟಾಭಿಷೇಕದ ಪೂಜೆ ಮಾಡಲಾಯಿತು. ತುಪ್ಪ, ಹೂವು, ಗಂಧ, ವಿಭೂತಿ, ಖರ್ಜೂರ, ಕೆಂಪು, ಕಲ್ಲು ಸಕ್ಕರೆ, ಹಾಲು, ಮೊಸರು , ಅವಲಕ್ಕಿಯಿಂದ ಪೂಜೆ ನಡೆಸಲಾಯಿತು.  ಅಕ್ಟೋಬರ್​ ತಿಂಗಳಲ್ಲಿ ಪುನೀತ್​ ರಾಜ್​ಕುಮಾರ್​ ಅಕಾಲಿಕ ಮರಣ ಹೊಂದಿದ್ದರು. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಶಾಕ್​ಗೆ ಒಳಗಾಗಿತ್ತು. ಇದಾದ ಬೆನ್ನಲ್ಲೇ ಶಿವರಾಂ ಕೂಡ ನಿಧನ ಹೊಂದಿರುವ ವಿಚಾರ ಸ್ಯಾಂಡಲ್​ವುಡ್​ಗೆ ಆಘಾತ ತಂದಿದೆ. ಸಾಕಷ್ಟು ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.

ಶನಿವಾರ (ಡಿಸೆಂಬರ್ 4) ಮನೆಯಲ್ಲೇ ಶಿವರಾಂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸ್ಯಾಂಡಲ್​ವುಡ್​ನ ಸಾಕಷ್ಟು ಸೆಲೆಬ್ರಿಟಿಗಳು ಬಂದು ಅವರ ಅಂತಿಮ ದರ್ಶನ ಪಡೆದಿದ್ದರು. ಭಾರತ ಕ್ರಿಕೆಟ್​ ತಂಡದ ಮಾಜಿ ಬೌಲರ್​ ಅನಿಲ್​ ಕುಂಬ್ಳೆ ಕೂಡ ಶಿವರಾಂ ಅವರ ಅಂತಿಮ ದರ್ಶನವನ್ನು ಪಡೆದು ತೆರಳಿದ್ದರು. ಇಂದು ಮುಂಜಾನೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಶಿವರಾಂ ಅವರು ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾಗಿದ್ದರು. ವರ್ಷಕ್ಕೆ ಮೂರು-ನಾಲ್ಕು ಬಾರಿ ಅವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು. ಮನೆಯ ಟೆರೇಸ್​ನಲ್ಲಿ ಪೂಜೆ ಮಾಡಲು ಪ್ರತ್ಯೇಕವಾಗಿ ಜಾಗ ಮಾಡಿಕೊಂಡಿದ್ದರು. ಪ್ರತಿ ಬಾರಿ ಪೂಜೆ ಮಾಡುವಾಗಲೂ ಅವರು ಏಕಾಂತ ಬಯಸುತ್ತಿದ್ದರು. ಹಾಗಾಗಿ ಪೂಜಾ ಕೊಠಡಿಯ ಬಾಗಿಲು ಹಾಕಿಕೊಂಡು ಅಯ್ಯಪ್ಪನ ಸ್ಮರಣೆಯಲ್ಲಿ ಮಗ್ನರಾಗುತ್ತಿದ್ದರು. ಕೆಲವೇ ದಿನಗಳ ಹಿಂದೆ ಕುಸಿದು ಬಿದ್ದಾಗಲೂ ಅವರು ಬಾಗಿಲು ಲಾಕ್​ ಮಾಡಿಕೊಂಡಿದ್ದರು!

ಪೂಜೆ ಮಾಡುವಾಗ ಬಾಗಿಲು ಹಾಕಿಕೊಂಡಿದ್ದರಿಂದ ಅವರು ಕುಸಿದು ಬಿದ್ದಿದ್ದು ಯಾರಿಗೂ ತಕ್ಷಣಕ್ಕೆ ತಿಳಿಯಲಿಲ್ಲ. ತುಂಬ ಸಮಯದವರೆಗೆ ಅವರು ವಾಪಸ್​ ಬಾರದ ಕಾರಣ ಟೆರೆಸ್​ಗೆ ಹೋಗಿ ನೋಡಿದಾಗ ಪೂಜಾ ಕೊಠಡಿಯಲ್ಲಿ ಅವರು ಕುಸಿದು ಬಿದ್ದಿದ್ದು ತಿಳಿಯಿತು. ಒಂದು ಗಂಟೆಗೂ ಹೆಚ್ಚು ಸಮಯ ರಕ್ತಸ್ರಾವ ಆಗಿರುವ ಸಾಧ್ಯತೆ ಇದೆ. ಆ ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊನೆಗೂ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾದರು. ಪೂಜೆ ಮಾಡುವ ವೇಳೆಯಲ್ಲೇ ಹೀಗೆ ಆಗಿದ್ದು ಎಲ್ಲರ ಮನಸ್ಸಿಗೂ ನೋವುಂಟು ಮಾಡಿದೆ.

ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಪೂಜೆ ವೇಳೆ ಶಿವರಾಂ ಮಾಡಿದ ಆ ಒಂದು ಕೆಲಸವೇ ಅವರ ಪ್ರಾಣಕ್ಕೆ ಮುಳುವಾಯ್ತಾ?

ಪುನೀತ್ ಯುವರತ್ನ, ಶಿವರಾಂ ಭಕ್ತಿರತ್ನ; ತಿಂಗಳಲ್ಲಿ ಎರಡು ರತ್ನಗಳನ್ನು ಕಳೆದುಕೊಂಡಿದ್ದೇವೆ: ನಿರ್ದೇಶಕ ಭಗವಾನ್ ಕಂಬನಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ