AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಶಿವರಾಂ ಆರೋಗ್ಯ; ಶೀಘ್ರವೇ ಸ್ಪಷ್ಟ ಮಾಹಿತಿ ನೀಡಲಿರುವ ವೈದ್ಯರು

Shivaram Health Update: ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಶಿವರಾಂ ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಶಿವರಾಂ ಆರೋಗ್ಯ; ಶೀಘ್ರವೇ ಸ್ಪಷ್ಟ ಮಾಹಿತಿ ನೀಡಲಿರುವ ವೈದ್ಯರು
ಶಿವರಾಂ
TV9 Web
| Updated By: ಮದನ್​ ಕುಮಾರ್​|

Updated on: Dec 04, 2021 | 9:20 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (Senior actor Shivaram) ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಿನ ಸೀತಾ ಸರ್ಕಲ್​ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಸರ್ಜರಿ ನಡೆಸುವಷ್ಟು ಅವರು ಚೇತರಿಕೆ ಕಂಡಿಲ್ಲ. ಅವರಿಗೆ ಈಗ 84 ವರ್ಷ ವಯಸ್ಸು. ಸದ್ಯ ಅವರ ಮಿದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿ ತಲುಪಿದ್ದಾರೆ. ಶಿವರಾಂ ವಿಚಾರದಲ್ಲಿ ಯಾವುದೇ ಮಿರಾಕಲ್ ನಡೆಯೋ ಸಾಧ್ಯತೆ ಇಲ್ಲ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಶನಿವಾರ (ಡಿ.4) ಅವರ ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ. ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ. ಶೀಘ್ರದಲ್ಲೇ ವೈದ್ಯರು ಈ ಬಗ್ಗೆ ಸ್ಪಷ್ಟ ಮಾಹಿತಿ (Shivaram Health Update) ನೀಡಲಿದ್ದಾರೆ.

ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಶಿವರಾಂ ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಶಿವರಾಂ ಕೋಮಾ ಹಂತ ತಲುಪಿರುವುದರಿಂದ ಅವರ ಕುಟುಂಬದವರು, ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. ಬಣ್ಣದ ಲೋಕದಲ್ಲಿ ಅವರ ಅನುಭವ 6 ದಶಕಗಳಿಗೂ ಹೆಚ್ಚು.

ಶಿವರಾಂ ಬಗ್ಗೆ ಶಿವಣ್ಣ ಹೇಳಿದ್ದೇನು?

ಶಿವರಾಂ ಅವರನ್ನು ನೋಡಲು ಶುಕ್ರವಾರ (ಡಿ.3) ಆಸ್ಪತ್ರೆಗೆ ಶಿವರಾಜ್​ಕುಮಾರ್​ ಭೇಟಿ ನೀಡಿದ್ದರು. ಡಾ. ರಾಜ್​ಕುಮಾರ್ ಕುಟುಂಬ​ದ ಜತೆ ಶಿವರಾಂ ಅವರಿಗೆ ಆಪ್ತ ಒಡನಾಟ ಇದೆ. ಆ ಬಗ್ಗೆ ಶಿವಣ್ಣ ಮಾತನಾಡಿದ್ದರು. ‘ಅವರ ಫ್ಯಾಮಿಲಿಗೆ ಧೈರ್ಯ ಹೇಳುತ್ತೇನೆ. ನಾನು ಕೂಡ ಅವರ ಕುಟುಂಬದ ಸದಸ್ಯ ಆಗಿರುವುದರಿಂದ ನಮಗೂ ಎಲ್ಲರೂ ಧೈರ್ಯ ಹೇಳಬೇಕು. ಒಂದು ತಿಂಗಳ ಹಿಂದಷ್ಟೇ ತಮ್ಮನನ್ನು ಕಳೆದುಕೊಂಡಿದ್ದೇನೆ. ದೇವರು ಪದೇಪದೇ ಯಾಕೆ ಈ ರೀತಿ ನೋವು ಕೊಡುತ್ತಾನೆ ಅಂತ ನಮಗೂ ಅರ್ಥ ಆಗುವುದಿಲ್ಲ’ ಎಂದಿದ್ದರು ಶಿವಣ್ಣ.

‘ಒಂದು ವರ್ಷದಲ್ಲಿ ಮೂರು-ನಾಲ್ಕು ಬಾರಿ ಶಿವರಾಂ ಅವರು ಶಬರಿಮಲೆ ಅಪ್ಪಯ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮ ಜೊತೆಯೂ ಹೋಗಿ ಬರುತ್ತಿದ್ದರು. ಸ್ನೇಹಿತರು ಯಾರಾದರೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿದಾಗಲೂ ಹೋಗುತ್ತಾರೆ. ಅಯ್ಯಪ್ಪ ಸ್ವಾಮಿ ಎಂದರೆ ಶಿವರಾಂ ಅವರಿಗೆ ಏನೋ ವಿಶೇಷ ಪ್ರೀತಿ. ಮೂರು ವರ್ಷದ ಹಿಂದೆ ಶಬರಿಮಲೆಗೆ ಹೋಗಿದ್ವಿ. ಕೋವಿಡ್​ ಬಂದ ನಂತರ ಹೋಗಲು ಸಾಧ್ಯವಾಗಿರಲಿಲ್ಲ. ಆಗ ಅವರಿಗೆ 81 ವರ್ಷ. ಆ ವಯಸ್ಸಿನಲ್ಲೂ ಅವರು ಬೆಟ್ಟ ಹತ್ತುತ್ತಿದ್ದರು. ಅವರಲ್ಲಿ ಇರುವ ಆ ಮನೋಬಲವೇ ಅವರನ್ನು ಕಾಪಾಡುತ್ತದೆ ಎಂದುಕೊಂಡಿದ್ದೇನೆ. ಆ ದೇವರು ಅವರನ್ನು ಕಾಪಾಡಬೇಕು ಎಂಬುದೇ ನಮ್ಮ ಆಸೆ. ಕರ್ನಾಟಕದ ಜನತೆಯ ಪ್ರೀತಿ-ಅಭಿಮಾನದಿಂದ ಅವರು ಗುಣಮುಖರಾಗುತ್ತಾರೆ’ ಎಂದು ಶಿವಣ್ಣ ಹೇಳಿದ್ದರು.

ಇದನ್ನೂ ಓದಿ:

S.Shivaram: ನಟ ಶಿವರಾಂ ಚೇತರಿಸಿಕೊಳ್ಳುವಂತೆ ದೇವರಲ್ಲಿ ಮೊರೆಯಿಟ್ಟ ಚಿತ್ರರಂಗ; ಆಸ್ಪತ್ರೆಗೆ ಹಿರಿಯ ಕಲಾವಿದರ ಭೇಟಿ

ಪುನೀತ್​ ಕಂಠದಲ್ಲಿ ಮೂಡಿ ಬಂದಿದ್ದ ‘ಬಾಡಿ ಗಾಡ್’ ಹಾಡು ರಿಲೀಸ್​; ಅಪ್ಪು ಜೀವನಕ್ಕೆ ಹತ್ತಿರವಾಗಿದೆ ಸಾಹಿತ್ಯ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ