AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ನಿಧನ; ಪೊಲೀಸ್​ ಠಾಣೆಗೆ ದೂರು ನೀಡಿದ ಪುತ್ರ

Gopalakrishnan Death: ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪುತ್ರ ಮಹೇಂದ್ರ ಅವರು ವೈದ್ಯರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ನಿಧನ; ಪೊಲೀಸ್​ ಠಾಣೆಗೆ ದೂರು ನೀಡಿದ ಪುತ್ರ
ಗೋಪಾಲಕೃಷ್ಣನ್
TV9 Web
| Edited By: |

Updated on:Dec 16, 2021 | 12:42 PM

Share

ಅನೇಕ ಸಿನಿಮಾಗಳಿಗೆ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದ ಗೋಪಾಲಕೃಷ್ಣನ್​ (Cinematographer Gopalakrishnan) ಅವರು ಇಂದು (ಡಿ.16) ನಿಧನರಾದರು. ಅನಾರೋಗ್ಯದ ಕಾರಣ ಬೆಂಗಳೂರಿನ ಮಹಾವೀರ್​ ಜೈನ್​ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಹೃದಯಾಘಾತದಿಂದ (Heart Attack) ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ ಗೋಪಾಲಕೃಷ್ಣನ್​ ಸಾವಿನ ಬಗ್ಗೆ ಅವರ ಪುತ್ರ ಮಹೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ತಂದೆಯ ನಿಧನಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಯ ವೈದ್ಯರ ವಿರುದ್ಧ ಮಹೇಂದ್ರ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ (High Ground Police Station) ದೂರು ನೀಡಿದ್ದಾರೆ.

ಹಲವು ದಿನಗಳ ಹಿಂದೆ ಗೋಪಾಲಕೃಷ್ಣನ್​ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಕಿವಿಯ ಶಸ್ತ್ರ ಚಿಕಿತ್ಸೆ ಸಲುವಾಗಿ ಮಹಾವೀರ್ ಜೈನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಅ.23ರಂದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅ.28ರಂದು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಆ ಬಳಿಕ ಅವರ ಆರೋಗ್ಯ ಸಮಸ್ಯೆ ಉಲ್ಬಣ ಆಗಿತ್ತು.

ಶಸ್ತ್ರ ಚಿಕಿ‌ತ್ಸೆ ನೆರವೇರಿದ ನಂತರ ಗೋಪಾಲಕೃಷ್ಣನ್​ ಅವರು ಚಿಂತಾಜನಕ ಸ್ಥಿತಿ ತಲುಪಿದ್ದರು. ದೇಹದ ಬಲಭಾಗದ ಸ್ವಾದೀನ ಕಳೆದುಕೊಂಡು ಅವರು ಪ್ರಜ್ಞಾಹೀನ ಸ್ಥಿತಿಗೆ ಅವರು ಹೋಗಿದ್ದರು. ತಂದೆಯ ಸ್ಥಿತಿಗೆ‌ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಅವರ ಮಗ ಮಹೇಂದ್ರ ಆರೋಪಿಸಿದ್ದಾರೆ. ಹಾಗಾಗಿ ವೈದ್ಯರ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

ನಟ ಪುನೀತ್​ಗೆ ಹೃದಯಾಘಾತ ಬೆನ್ನಲ್ಲೇ ಬೆಚ್ಚಿಬಿದ್ದ ಸಿಟಿ ಜನ: ಜಿಮ್​ಗಳಿಂದ ದೂರವಾಗಿ, ಹಾರ್ಟ್​ ಚೆಕಪ್​ಗೆ ಜಯದೇವ ಆಸ್ಪತ್ರೆಗೆ ದೌಡು

Published On - 12:29 pm, Thu, 16 December 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ