AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 9ಕ್ಕೆ ‘ಹೊಸ ದಿನಚರಿ’; ಪೋಸ್ಟರ್​ ಬಿಡುಗಡೆ ಮಾಡಿ ಶುಭಕೋರಿದ ನಾಗಾಭರಣ

ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾ ಅವರು ಜೊತೆಯಾಗಿ ‘ಹೊಸ ದಿನಚರಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಡಿಸೆಂಬರ್​ 9ಕ್ಕೆ ‘ಹೊಸ ದಿನಚರಿ’; ಪೋಸ್ಟರ್​ ಬಿಡುಗಡೆ ಮಾಡಿ ಶುಭಕೋರಿದ ನಾಗಾಭರಣ
‘ಹೊಸ ದಿನಚರಿ’ ಸಿನಿಮಾ ಟೀಮ್​
TV9 Web
| Updated By: ಮದನ್​ ಕುಮಾರ್​|

Updated on: Oct 26, 2022 | 7:30 AM

Share

ಚಿತ್ರರಂಗಕ್ಕೆ ಹೊಸಬರು ಬಂದಾಗ ಸಾಕಷ್ಟು ಹೊಸತನವೂ ಬರುತ್ತದೆ. ಹಾಗಾಗಿ ಪ್ರತಿಬಾರಿ ಹೊಸ ತಂಡಗಳು ಚಂದನವನಕ್ಕೆ (Sandalwood) ಎಂಟ್ರಿ ನೀಡಿದಾಗ ಹಿರಿಯರು ಆತ್ಮೀಯವಾಗಿ ಸ್ವಾಗತ ಕೋರುತ್ತಾರೆ. ಈಗ ಹೊಸಬರೇ ಸೇರಿಕೊಂಡು ಮಾಡಿರುವ ‘ಹೊಸ ದಿನಚರಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಪೋಸ್ಟರ್​ ಅನಾವರಣ ಮಾಡುವ ಮೂಲಕ ಹಿರಿಯ ನಿರ್ದೇಶಕ ನಾಗಾಭರಣ (TS Nagabharana) ಅವರು ಈ ಚಿತ್ರತಂಡದ ಬೆನ್ನು ತಟ್ಟಿದ್ದಾರೆ. ವಿಶೇಷ ರೀತಿಯಲ್ಲಿ ವಿನ್ಯಾಸಗೊಂಡಿರುವ ಈ ಪೋಸ್ಟರ್​ ಗಮನ ಸೆಳೆಯುತ್ತಿದೆ. ಬಹುತೇಕ ಹೊಸಬರೇ ಈ ಟೀಮ್​ನಲ್ಲಿ ಕೆಲಸ ಮಾಡಿದ್ದಾರೆ. ಡಿಸೆಂಬರ್​ 9ರಂದು ಸಿನಿಮಾ ರಿಲೀಸ್​ ಮಾಡಲು ‘ಹೊಸ ದಿನಚರಿ’ (Hosa Dinachari) ತಂಡ ಸಜ್ಜಾಗುತ್ತಿದೆ.

ಈ ಸಿನಿಮಾದ ಶೀರ್ಷಿಕೆಯಲ್ಲೇ ಒಂದು ಪಾಸಿಟಿವ್​ ಗುಣ ಇದೆ. ಜೀವನದ ಯಾವುದೇ ತಿರುವಿನಲ್ಲೂ ಹೊಸ ದಿನಚರಿ ಆರಂಭಿಸಬಹುದು. ಆ ರೀತಿಯ ಒಂದು ಥೀಮ್​ ಈ ಸಿನಿಮಾದಲ್ಲಿ ಇರಬಹುದು ಎಂಬ ಸುಳಿವು ಶೀರ್ಷಿಕೆ ಮೂಲಕ ಸಿಕ್ಕಿದೆ. ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್, ದೀಪಕ್ ಸುಬ್ರಹ್ಮಣ್ಯ, ಮಂದಾರಾ, ವರ್ಷ, ಚೇತನ್ ವಿಕ್ಕಿ, ವಿವೇಕ್ ದೇವ್, ಶ್ರೀಪ್ರಿಯಾ, ಸುಪ್ರೀತಾ ಗೌಡ ಹಾಗೂ ಬೇಬಿ ಮಾನಿನಿ ಮುಂತಾದವರು ಈ ಚಿತ್ರದಲ್ಲಿ ನಟಿಸಿ​ದ್ದಾರೆ.

‘ಕನ್ನಡ ಚಿತ್ರರಂಗದಲ್ಲಿ ಪ್ರತಿ 2 ದಶಕಕ್ಕೆ ಒಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ. 1990ರಲ್ಲಿ, 2000ರಲ್ಲಿ ಮತ್ತು ಈಗ 2020ರ ದಶಕದಲ್ಲಿ ಬದಲಾವಣೆ ಆಗಿದೆ. ಈ ಸಿನಿಮಾದ ಟ್ರೇಲರ್ ನೋಡಿದರೆ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ನಿರೀಕ್ಷೆ ಮೂಡಿದೆ. ಇಂತಹ ಯುವ ಉತ್ಸಾಹಿ ಪ್ರತಿಭಾವಂತರ ತಂಡಗಳು ಹೆಚ್ಚು ಬರಲಿ. ಆ ಮೂಲಕ ಹೊಸ ಬದಲಾವಣೆ ಆಗುವಂತೆ ಆಗಲಿ’ ಎಂದರು ಟಿ.ಎಸ್. ನಾಗಾಭರಣ.

ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾ ಅವರು ಜೊತೆಯಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ‘ಎಲ್ಲರ ಜೀವನದಲ್ಲೂ ಪ್ರೀತಿ ಇದೇ ಇರುತ್ತದೆ. ಆದರೆ ಪ್ರೀತಿಸಿದ ವ್ಯಕ್ತಿ ಕೊನೆಯವರೆಗೂ ಇರುತ್ತಾರಾ? ಅವರಿಲ್ಲದೇ ಬೇರೊಬ್ಬರು ಜೀವನದಲ್ಲಿ ಬಂದಾಗ ಏನಾಗುತ್ತದೆ ಎಂಬುದೇ ಹೊಸ ದಿನಚರಿ ಚಿತ್ರದ ಕಥಾಸಾರಾಂಶ. ನಮ್ಮನ್ನೂ ಸೇರಿದಂತೆ ಈ ಚಿತ್ರತಂಡದ ಅನೇಕ ಸದಸ್ಯರು ಹೊಸಬರು. ಈ ಹಿಂದೆ ಕೆಲವು ಕಿರುಚಿತ್ರಗಳು ಮಾಡಿರುವ ಅನುಭವ ನಮಗಿದೆ. ನಮ್ಮ ಈ ಕನಸನ್ನು ನಿರ್ಮಾಪಕರಾದ ಮೃತ್ಯುಂಜಯ ಶುಕ್ಲಾ, ಅಲೋಕ್ ಚೌರಾಸಿಯಾ ಹಾಗೂ ಗಂಗಾಧರ ಸಾಲಿಮಠ ನನಸು ಮಾಡಿದ್ದಾರೆ’ ಎಂದಿದ್ದಾರೆ ನಿರ್ದೇಶಕರಾದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾ.

(‘ಹೊಸ ದಿನಚರಿ’ ಪೋಸ್ಟರ್​)

ರಾಕಿ ಅವರ ಛಾಯಾಗ್ರಹಣ, ವೈಶಾಖ್​ ವರ್ಮಾ ಅವರ ಸಂಗೀತ, ಸಾಹಿತ್ಯ, ಅಶ್ವಿನ್​ ಹೇಮಂತ್​ ಅವರ ಹಿನ್ನೆಲೆ ಸಂಗೀತ, ರಂಜಿತ್​ ಸೇತು ಸಂಕಲನ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ