ಖ್ಯಾತ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕಿಶೋರಿ ಬಲ್ಲಾಳ್ 70ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಕಹಿ’ ಅವರ ಕೊನೆಯ ಸಿನಿಮಾ. ಕಿಶೋರಿ ಬಲ್ಲಾಳ್ ‘ಸ್ವದೇಸ್’ ಹಿಂದಿ ಚಿತ್ರದಲ್ಲಿ ಶಾರುಖ್ ಖಾನ್​ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು. ಇತ್ತೀಚೆಗೆ ಇವರ ಪತಿ ಶ್ರೀಪತಿ ಬಲ್ಲಾಳ್ ತೀರಿಕೊಂಡಿದ್ರು. ಸ್ಪರ್ಶ, ನಮ್ಮಣ್ಣ, ಅಕ್ಕ-ತಂಗಿ, ಕೆಂಪೇಗೌಡ, ಗಲಾಟೆ ಚಿತ್ರಗಳ ಮೂಲಕ ಚಿರಪರಿಚಿತರಾಗಿದ್ದರು. ಕಿಶೋರಿ ಬಲ್ಲಾಳ್ ಇತ್ತೀಚೆಗೆ ಬಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. […]

ಖ್ಯಾತ ನಟಿ ಕಿಶೋರಿ ಬಲ್ಲಾಳ್  ಇನ್ನಿಲ್ಲ
ಸಾಧು ಶ್ರೀನಾಥ್​

Updated on: Feb 18, 2020 | 2:46 PM

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕಿಶೋರಿ ಬಲ್ಲಾಳ್
70ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡದಲ್ಲಿ ‘ಕಹಿ’ ಅವರ ಕೊನೆಯ ಸಿನಿಮಾ. ಕಿಶೋರಿ ಬಲ್ಲಾಳ್ ‘ಸ್ವದೇಸ್’ ಹಿಂದಿ ಚಿತ್ರದಲ್ಲಿ ಶಾರುಖ್ ಖಾನ್​ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು. ಇತ್ತೀಚೆಗೆ ಇವರ ಪತಿ ಶ್ರೀಪತಿ ಬಲ್ಲಾಳ್ ತೀರಿಕೊಂಡಿದ್ರು. ಸ್ಪರ್ಶ, ನಮ್ಮಣ್ಣ, ಅಕ್ಕ-ತಂಗಿ, ಕೆಂಪೇಗೌಡ, ಗಲಾಟೆ ಚಿತ್ರಗಳ ಮೂಲಕ ಚಿರಪರಿಚಿತರಾಗಿದ್ದರು.

ಕಿಶೋರಿ ಬಲ್ಲಾಳ್ ಇತ್ತೀಚೆಗೆ ಬಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಉಸಿರಾಟದ ತೊಂದರೆ ಅವರನ್ನು ಬಾಧಿಸುತ್ತಿತ್ತು.  ಇಂದು ಬೆಂಗಳೂರಿನ ಶೇಖರ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಪಾರ್ಥಿವ ಶರೀರವನ್ನ ಸೇವಾ ಕ್ಷೇತ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅವರ ಸೊಸೆ ತಿಳಿಸಿದ್ದಾರೆ.

Published On - 2:25 pm, Tue, 18 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us