AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ; ಕಂಬನಿ ಮಿಡಿದ ಚಿತ್ರರಂಗ

ವಿಷ್ಣುವರ್ಧನ್​, ಅಂಬರೀಷ್​, ಶಿವರಾಜ್​ಕುಮಾರ್​, ಉಪೇಂದ್ರ ಮುಂತಾದ ಹೆಸರಾಂತ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್​ ಅವರು ಬಂಡವಾಳ ಹೂಡಿದ್ದರು. ಅವರಿಗೆ 64 ವರ್ಷ ವಯಸ್ಸು ಆಗಿತ್ತು. ಹೃದಯಾಘಾತದಿಂದ ಕೆ. ಪ್ರಭಾಕರ್​ ಕೊನೆಯುಸಿರು ಎಳೆದಿದ್ದಾರೆ. ಹಲವು ವರ್ಷಗಳಿಂದ ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯವಾಗಿದ್ದ ಅವರ ಅಗಲಿಕೆಗೆ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

ಸ್ಯಾಂಡಲ್​ವುಡ್​ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ; ಕಂಬನಿ ಮಿಡಿದ ಚಿತ್ರರಂಗ
ಕೆ. ಪ್ರಭಾಕರ್​
ಮದನ್​ ಕುಮಾರ್​
|

Updated on: Aug 27, 2024 | 8:55 PM

Share

ಕನ್ನಡ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ಕೆ. ಪ್ರಭಾಕರ್​ ಅವರು ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಂದು (ಆಗಸ್ಟ್​ 27) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತ ಆದ ಬಳಿಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಕೆ. ಪ್ರಭಾಕರ್​ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ನಿರ್ಮಾಪಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಭ್ಯ ನಿರ್ಮಾಪಕ ಎಂದು ಕೆ. ಪ್ರಭಾಕರ್​ ಅವರು ಗುರುತಿಸಿಕೊಂಡಿದ್ದಾರೆ. ಅನೇಕ ಸ್ಟಾರ್​ ಕಲಾವಿದರ ಜೊತೆ ಅವರು ಸಿನಿಮಾ ಮಾಡಿದ್ದರು. ಕಾಶಿನಾಥ್​, ಶಿವರಾಜ್​ಕುಮಾರ್​, ವಿಷ್ಣುವರ್ಧನ್​, ಉಪೇಂದ್ರ, ರಾಧಿಕಾ ಕುಮಾರಸ್ವಾಮಿ ಮುಂತಾದ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್​ ಅವರು ಬಂಡವಾಳ ಹೂಡಿದ್ದರು. ಹಲವು ಸಿನಿಮಾಗಳ ಮೂಲಕ ಅವರು ಹೆಸರು ಗಳಿಸಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಪರಿಸ್ಥಿತಿ, ಹಿರಿಯ ನಟ ಜಗ್ಗೇಶ್ ಕಣ್ಣೀರು

ಕಾಶಿನಾಥ್​-ಭವ್ಯ ನಟನೆಯ ‘ಅವಳೇ ನನ್ನ ಹೆಂಡ್ತಿ’, ವಿಷ್ಣುವರ್ಧನ್​-ಪ್ರೇಮಾ ಅಭಿನಯದ ‘ಎಲ್ಲರಂಥಲ್ಲ ನನ್ನ ಗಂಡ’, ಶಿವರಾಜ್​ಕುಮಾರ್​-ರಾಧಿಕಾ ಕುಮಾರಸ್ವಾಮಿ ನಟಿಸಿದ ‘ಅಣ್ಣ-ತಂಗಿ’, ಉಪೇಂದ್ರ-ಶಿವರಾಜ್​ಕುಮಾರ್​ ಒಟ್ಟಾಗಿ ಅಭಿನಯಿಸಿದ ‘ಲವ-ಕುಶ’ ಮುಂತಾದ ಸಿನಿಮಾಗಳನ್ನು ಕೆ. ಪ್ರಭಾಕರ್​ ಅವರು ನಿರ್ಮಾಣ ಮಾಡಿದ್ದರು. ಪರಭಾಷೆಯ ಸಿನಿಮಾಗಳನ್ನು ಕೂಡ ಅವರು ನಿರ್ಮಿಸಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿರುವ ಮುಖ್ಯ ಸಮಸ್ಯೆ ಏನು? ಬೊಟ್ಟು ಮಾಡಿ ತೋರಿದ ದುನಿಯಾ ವಿಜಯ್

ಅಷ್ಟೇ ಅಲ್ಲದೇ, ವಿಷ್ಣುವರ್ಧನ್​ ನಟನೆಯ ‘ತುಂಬಿದ ಮನೆ’, ಅಂಬರೀಷ್​-ಮಾಲಾಶ್ರೀ ಅಭಿನಯದ ‘ಸೋಲಿಲ್ಲದ ಸರದಾರ’ ಮುಂತಾದ ಚಿತ್ರಗಳಿಗೂ ಕೆ. ಪ್ರಭಾಕರ್​ ಅವರು ಹಣ ಹೂಡಿದ್ದರು. ಕೌಟುಂಬಿಕ ಪ್ರೇಕ್ಷಕರನ್ನು ರಂಜಿಸುವಂತಹ ಸಿನಿಮಾಗಳನ್ನು ಮಾಡಿ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಸ್ಯಾಂಡಲ್​ವುಡ್​ನಲ್ಲಿ ಅನುಭವಿ ನಿರ್ಮಾಪಕನಾಗಿದ್ದ ಪ್ರಭಾಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!