AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ
ಸಿ. ಜಯರಾಮ್​
TV9 Web
| Edited By: |

Updated on: Sep 09, 2021 | 9:57 AM

Share

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಹಿರಿಯ ನಿರ್ಮಾಪಕ ಸಿ. ಜಯರಾಮ್​​ ಅವರು ಸೆ.8ರಂದು ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದು, ಗುರುವಾರ (ಸೆ.9) ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರಾಗಿ ಸಿ. ಜಯರಾಮ್​ ಗುರುತಿಸಿಕೊಂಡಿದ್ದರು. ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿದ್ದರು. ಶಂಕರ್​ ನಾಗ್​ ನಟನೆಯ ‘ಆಟೋ ರಾಜ’, ಅನಂತ್​ ನಾಗ್​ ಅಭಿನಯದ ‘ನಾ ನಿನ್ನ ಬಿಡಲಾರೆ’, ವಿಷ್ಣುವರ್ಧನ್​ ಹಾಗೂ ರಜನಿಕಾಂತ್​ ನಟಿಸಿದ್ದ ‘ಗಲಾಟೆ ಸಂಸಾರ’ ಶ್ರೀನಾಥ್​-ಆರತಿ ಜೋಡಿಯ ‘ಪಾವನ ಗಂಗಾ’ ಮುಂತಾದ ಸಿನಿಮಾಗಳನ್ನು ಸಿ. ಜಯರಾಮ್​ ನಿರ್ಮಾಣ ಮಾಡಿದ್ದರು.

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ. ಸಿ. ಜಯರಾಮ್​ ಅವರ ಪುತ್ರ ‘ಮಿಲನ’ ಪ್ರಕಾಶ್ ಕೂಡ​ ಚಂದನವನದಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಪುನೀತ್​ ನಟನೆಯ ‘ಮಿಲನ’, ದರ್ಶನ್​ ಅಭಿನಯದ ‘ತಾರಕ್​’ ಮುಂತಾದ ಸಿನಿಮಾಗಳಿಗೆ ಪ್ರಕಾಶ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್