AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್, ರಜನಿಕಾಂತ್​ಗೆ ಮೇಕಪ್ ಮಾಡಿದ್ದ ಕೇಶವಣ್ಣ ನಿಧನ; ಚಿತ್ರರಂಗದಲ್ಲಿ 53 ವರ್ಷ ಸೇವೆ

ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಕೊನೆಯುಸಿರೆಳೆದಿದ್ದಾರೆ.

ರಾಜ್​ಕುಮಾರ್, ರಜನಿಕಾಂತ್​ಗೆ ಮೇಕಪ್ ಮಾಡಿದ್ದ ಕೇಶವಣ್ಣ ನಿಧನ; ಚಿತ್ರರಂಗದಲ್ಲಿ 53 ವರ್ಷ ಸೇವೆ
ರಜನಿ, ರಾಜ್​ಕುಮಾರ್ ಜತೆ ಕೇಶವಣ್ಣ
TV9 Web
| Edited By: |

Updated on: Jul 15, 2022 | 10:33 PM

Share

ಬರೋಬ್ಬರಿ 53 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಮೇಕಪ್​​ಮ್ಯಾನ್‌ ಎಂ.ಎಸ್. ಕೇಶವಣ್ಣ (Keshavana) ಅವರು ಇಂದು (ಜುಲೈ 15) ನಿಧನ ಹೊಂದಿದ್ದಾರೆ. ರಾಜ್​ಕುಮಾರ್ (Rajkumar), ಅಂಬರೀಷ್, ರಜನಿಕಾಂತ್, ಪುನೀತ್ ರಾಜ್​ಕುಮಾರ್, ಅನಂತ್ ನಾಗ್, ಶಿವರಾಜ್​ಕುಮಾರ್ ಮೊದಲಾದ ಸ್ಟಾರ್​ಗಳಿಗೆ ಅವರು ಮೇಕಪ್ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕೇಶವಣ್ಣ ಅವರು 25-30 ವರ್ಷಗಳ ಕಾಲ ರಾಜ್​​ಕುಮಾರ್ ಅವರ ಕಂಪನಿಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿದ್ದರು. ಇವರ ಮೊದಲು ಮೇಕಪ್ ಮಾಡಿದ್ದು ಹಾಸ್ಯ ಕಲಾವಿದ ನರಸಿಂಹ ರಾಜು ಅವರಿಗೆ ಅನ್ನೋದು ವಿಶೇಷ. ಪೃಥ್ವಿ ರಾಜ್ ಕಪೂರ್, ಬಾಲಣ್ಣ, ಉದಯ ಕುಮಾರ್, ವಜ್ರಮುನಿ ಸೇರಿ ಇನ್ನೂ ಅನೇಕ ಕಲಾವಿದರಿಗೆ ಕೇಶವಣ್ಣ ಮೇಕಪ್ ಮಾಡಿದ್ದಾರೆ.

ಅನಂತ್​ ನಾಗ್ ಅವರು ‘ನಾನಿನ್ನ ಬಿಡಲಾರೆ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಅನಂತ್ ನಾಗ್ ಅವರಿಗೆ ದೆವ್ವದ ಮೇಕಪ್ ಹಾಕಿದ್ದು ಇದೇ ಕೇಶವಣ್ಣ. ಅನಂತ್ ನಾಗ್ ಅವರ ಲುಕ್ ನೋಡಿ ಅನೇಕರು ಭಯಬಿದ್ದಿದ್ದೂ ಇದೆ. ಅಷ್ಟು ನೈಜವಾಗಿ ಅವರು ಮೇಕಪ್ ಮಾಡುತ್ತಿದ್ದರು.

ಇದನ್ನೂ ಓದಿ: ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

‘ಸಾಕ್ಷಾತ್ಕಾರ’, ‘ಹುಲಿಯ ಹಾಲಿನ ಮೇವು’,‘ಮಯೂರ’, ‘ಶಾಂತಿ ಕ್ರಾಂತಿ’, ‘ಸಂಗೊಳ್ಳಿ ರಾಯಣ್ಣ’ ಮೊದಲಾದ ಚಿತ್ರಗಳಲ್ಲಿ ಕೇಶವಣ್ಣ ಕೆಲಸ ಮಾಡಿದ್ದಾರೆ. ಇವರು ಮೇಕಪ್​ ಆರ್ಟಿಸ್ಟ್ ಆಗಿ ಕೆಲಸ ಮಾಡಿದ ಕೊನೆಯ ಚಿತ್ರ ‘ಕುರುಕ್ಷೇತ್ರ’.

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್