AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್, ರಜನಿಕಾಂತ್​ಗೆ ಮೇಕಪ್ ಮಾಡಿದ್ದ ಕೇಶವಣ್ಣ ನಿಧನ; ಚಿತ್ರರಂಗದಲ್ಲಿ 53 ವರ್ಷ ಸೇವೆ

ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಕೊನೆಯುಸಿರೆಳೆದಿದ್ದಾರೆ.

ರಾಜ್​ಕುಮಾರ್, ರಜನಿಕಾಂತ್​ಗೆ ಮೇಕಪ್ ಮಾಡಿದ್ದ ಕೇಶವಣ್ಣ ನಿಧನ; ಚಿತ್ರರಂಗದಲ್ಲಿ 53 ವರ್ಷ ಸೇವೆ
ರಜನಿ, ರಾಜ್​ಕುಮಾರ್ ಜತೆ ಕೇಶವಣ್ಣ
TV9 Web
| Edited By: |

Updated on: Jul 15, 2022 | 10:33 PM

Share

ಬರೋಬ್ಬರಿ 53 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಮೇಕಪ್​​ಮ್ಯಾನ್‌ ಎಂ.ಎಸ್. ಕೇಶವಣ್ಣ (Keshavana) ಅವರು ಇಂದು (ಜುಲೈ 15) ನಿಧನ ಹೊಂದಿದ್ದಾರೆ. ರಾಜ್​ಕುಮಾರ್ (Rajkumar), ಅಂಬರೀಷ್, ರಜನಿಕಾಂತ್, ಪುನೀತ್ ರಾಜ್​ಕುಮಾರ್, ಅನಂತ್ ನಾಗ್, ಶಿವರಾಜ್​ಕುಮಾರ್ ಮೊದಲಾದ ಸ್ಟಾರ್​ಗಳಿಗೆ ಅವರು ಮೇಕಪ್ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕೇಶವಣ್ಣ ಅವರು 25-30 ವರ್ಷಗಳ ಕಾಲ ರಾಜ್​​ಕುಮಾರ್ ಅವರ ಕಂಪನಿಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿದ್ದರು. ಇವರ ಮೊದಲು ಮೇಕಪ್ ಮಾಡಿದ್ದು ಹಾಸ್ಯ ಕಲಾವಿದ ನರಸಿಂಹ ರಾಜು ಅವರಿಗೆ ಅನ್ನೋದು ವಿಶೇಷ. ಪೃಥ್ವಿ ರಾಜ್ ಕಪೂರ್, ಬಾಲಣ್ಣ, ಉದಯ ಕುಮಾರ್, ವಜ್ರಮುನಿ ಸೇರಿ ಇನ್ನೂ ಅನೇಕ ಕಲಾವಿದರಿಗೆ ಕೇಶವಣ್ಣ ಮೇಕಪ್ ಮಾಡಿದ್ದಾರೆ.

ಅನಂತ್​ ನಾಗ್ ಅವರು ‘ನಾನಿನ್ನ ಬಿಡಲಾರೆ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಅನಂತ್ ನಾಗ್ ಅವರಿಗೆ ದೆವ್ವದ ಮೇಕಪ್ ಹಾಕಿದ್ದು ಇದೇ ಕೇಶವಣ್ಣ. ಅನಂತ್ ನಾಗ್ ಅವರ ಲುಕ್ ನೋಡಿ ಅನೇಕರು ಭಯಬಿದ್ದಿದ್ದೂ ಇದೆ. ಅಷ್ಟು ನೈಜವಾಗಿ ಅವರು ಮೇಕಪ್ ಮಾಡುತ್ತಿದ್ದರು.

ಇದನ್ನೂ ಓದಿ: ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

‘ಸಾಕ್ಷಾತ್ಕಾರ’, ‘ಹುಲಿಯ ಹಾಲಿನ ಮೇವು’,‘ಮಯೂರ’, ‘ಶಾಂತಿ ಕ್ರಾಂತಿ’, ‘ಸಂಗೊಳ್ಳಿ ರಾಯಣ್ಣ’ ಮೊದಲಾದ ಚಿತ್ರಗಳಲ್ಲಿ ಕೇಶವಣ್ಣ ಕೆಲಸ ಮಾಡಿದ್ದಾರೆ. ಇವರು ಮೇಕಪ್​ ಆರ್ಟಿಸ್ಟ್ ಆಗಿ ಕೆಲಸ ಮಾಡಿದ ಕೊನೆಯ ಚಿತ್ರ ‘ಕುರುಕ್ಷೇತ್ರ’.

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!