AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್

ಇಂದು (ಆಗಸ್ಟ್​ 1) ಸಂಜೆ ಸುದ್ದಿಗೋಷ್ಠಿ ಕರೆದು ಆ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲ ಈ ಸುದ್ದಿಗೋಷ್ಠಿಯಲ್ಲಿ ಅವರು ಧಾರಾವಾಹಿಯಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡಿದ್ದಾರೆ.  

‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 01, 2022 | 9:00 PM

Share

ತೆಲುಗಿನ ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಶೂಟಿಂಗ್ ವೇಳೆ ಕಿರಿಕ್ ನಡೆದಿತ್ತು. ‘ಚಂದನ್ ಕುಮಾರ್ (Chandan Kumar) ಅವರು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಧಾರಾವಾಹಿ ತಂತ್ರಜ್ಞರೊಬ್ಬರು ಹೇಳಿಕೊಂಡಿದ್ದರು. ಆದರೆ, ಇದನ್ನು ಚಂದನ್ ಕುಮಾರ್ ಅಲ್ಲಗಳೆದಿದ್ದಾರೆ. ಇಂದು (ಆಗಸ್ಟ್ 1) ಸಂಜೆ ಸುದ್ದಿಗೋಷ್ಠಿ ಕರೆದು ಆ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲ ಈ ಸುದ್ದಿಗೋಷ್ಠಿಯಲ್ಲಿ ಅವರು ಧಾರಾವಾಹಿಯಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಶೂಟಿಂಗ್ ಸೆಟ್​ನಲ್ಲಿ ನಡೆದಿದ್ದೇನು ಎಂಬುದನ್ನು ಚಂದನ್ ಕುಮಾರ್ ವಿವರಿಸಿದ್ದಾರೆ. ‘ರಂಜಿತ್ ಎಂಬಾತ ನನ್ನ ಪದೇಪದೇ ಕರೆಯುತಿದ್ದ. ನನಗೆ 30 ನಿಮಿಷ ರೆಸ್ಟ್ ಬೇಕು ಎಂದಿದ್ದೆ. ಕೆಲ ಸಮಯ ಬಿಟ್ಟು ಆತ ‘5 ನಿಮಿಷ ಎಂದು 30 ನಿಮಿಷ ಮಲಗಿದ್ದಾನಲ್ಲೋ ಅವನು’ ಎಂದು ಕೂಗಿದ. ನಾನು ಕರೆದು ಏನಾಯ್ತು ಎಂದು ಕೇಳಿದೆ. ಡೈರೆಕ್ಟರ್ ಕರೀತಾ ಇದಾರೆ ಬರಲೇಬೇಕಂತೆ ಎಂದು ಆತ ಹೇಳಿದ. ನಾನು ಸುಮ್ಮನೆ ಹೋಗಪ್ಪ ಎಂದು ತಳ್ಳಿದೆ. ಆದರೆ, ಇದನ್ನು ಆತ ಅಲ್ಲಿ ಹೋಗಿ ಬೇರೆ ರೀತಿಯಲ್ಲಿ ಹೇಳಿದ್ದಾನೆ. ಕಣ್ಣೀರು ಹಾಕಿದ್ದಾನೆ’ ಎಂಬುದು ಚಂದನ್ ಕುಮಾರ್ ಅವರ ಮಾತು.

‘ಎಲ್ಲರೂ ಬಂದು ಗಲಾಟೆ ಮಾಡಿದರು. ಈಗ ಶೂಟಿಂಗ್ ನಡೆಯಲ್ಲ ಎಂದರೆ ನಾನು ಹೊರಡ್ತೀನಿ ಎಂದೆ. ಆಗ ಎಲ್ಲರೂ ಬಂದು ಅಡ್ಡಗಟ್ಟಿದರು. 3 ಗಂಟೆ ಎಲ್ಲಿಗೂ ಹೋಗೋಕೆ ಬಿಡಲಿಲ್ಲ. ಆಮೇಲೆ ನಿರ್ದೇಶಕ ಸಂಘದವರು ಅಂತ ಕೆಲವರು ಬಂದರು. ನನ್ನ ಪರವಾಗಿ ಯಾರೂ ಮಾತನಾಡಲಿಲ್ಲ. ಬೆಂಗಳೂರಿಂದ ಬಂದಿದ್ದೇನೆ ಎಂದು ಈ ರೀತಿ ಮಾಡಿದ್ದಾರೆ. ಹೊಡೆದು ಅವಮಾನ ಮಾಡಬೇಕು ಎಂದು ಈ ರೀತಿ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ ಅವರು.

ಇದನ್ನೂ ಓದಿ
Image
‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
Image
Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​
Image
ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್

‘ತೆಲುಗು ಜನತೆ ಕೂಡ ಇದನ್ನು ಒಪ್ಪಲ್ಲ. ನನ್ನ ತಾಯಿ ಭಾಷೆ ಕನ್ನಡ. ತೆಲುಗು ದೊಡ್ಡಮ್ಮ, ತಮಿಳು ಚಿಕ್ಕಮ್ಮ ಅಂತ ಅಂದುಕೊಂಡವನು ನಾನು. ಎಲ್ಲರೂ ಅಮ್ಮಂದಿರೇ. ಅವರು ಮಾಡಿರೋದು ಅನ್ಯಾಯ. ಧಾರಾವಾಹಿ ನಿರ್ದೇಶಕರು ಈಗಲೂ ನನ್ನ ಜತೆ ಚೆನ್ನಾಗಿದ್ದಾರೆ. ನಾನು ಧಾರಾವಾಹಿಯಿಂದ ಹೊರಬರುತ್ತಿದ್ದೇನೆ’ ಎಂದಿದ್ದಾರೆ ಚಂದನ್.

ಇದನ್ನೂ ಓದಿ: ‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್

‘ಅವರೆಲ್ಲ ನಮ್ಮ ಜತೆಯಲ್ಲಿ ತುಂಬಾ ಸಲುಗೆಯಿಂದ ಇದ್ದವರು. ಒಟ್ಟಿಗೆ ಪಾರ್ಟಿ ಮಾಡಿದ್ದೀವಿ. ನಮ್ಮ ಮನೆಯ ಗೃಹ ಪ್ರವೇಶ ಆದಾಗ ಅವರಿಗೆ ಇಲ್ಲಿಗೆ ಬರೋಕೆ ಆಗಿಲ್ಲ. ಹೀಗಾಗಿ, ಅಲ್ಲಿಯೇ ಊಟ ಹಾಕಿಸಿದ್ದೀನಿ. ಈಗ ಅವರು ನಡೆದುಕೊಂಡಿದ್ದು ತುಂಬಾನೇ ಅಚ್ಚರಿ ಮೂಡಿಸಿದೆ’ ಎಂದಿದ್ದಾರೆ ಚಂದನ್.

Published On - 8:38 pm, Mon, 1 August 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ