AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ವೀರಪುತ್ರ’ನಾಗಿ ಅಗ್ನಿಸಾಕ್ಷಿ ಸಿದ್ದಾರ್ಥ್: ಖಡಕ್ ಲುಕ್​ನಲ್ಲಿ ಚಾಕಲೇಟ್ ಹೀರೋ ವಿಜಯ್ ಸೂರ್ಯ

Vijay Surya: 'ಅಗ್ನಿಸಾಕ್ಷಿ' ಧಾರಾವಾಹಿ ಮೂಲಕ ಮನೆ ಮಾತಾಗಿದ್ದ ವಿಜಯ್ ಸೂರ್ಯ ಹೊಸ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. 'ವೀರಪುತ್ರ' ಹೆಸರಿನ ಸಿನಿಮಾದಲ್ಲಿ ವಿಜಯ್ ನಟಿಸಿದ್ದು, ರಗಡ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

’ವೀರಪುತ್ರ’ನಾಗಿ ಅಗ್ನಿಸಾಕ್ಷಿ ಸಿದ್ದಾರ್ಥ್: ಖಡಕ್ ಲುಕ್​ನಲ್ಲಿ ಚಾಕಲೇಟ್ ಹೀರೋ ವಿಜಯ್ ಸೂರ್ಯ
ವಿಜಯ್ ಸೂರ್ಯ
ಮಂಜುನಾಥ ಸಿ.
|

Updated on: Sep 08, 2023 | 10:20 PM

Share

ಕಿರುತೆರೆಯಲ್ಲಿ (Tv) ಮಿಂಚಿ ಬೆಳ್ಳಿತೆರೆ ಪ್ರವೇಶಿಸಿ ದೊಡ್ಡ ಯಶಸ್ಸು ಕಂಡ ದೊಡ್ಡ ಬಳಗವೇ ಕನ್ನಡ ಚಿತ್ರರಂಗದಲ್ಲಿದೆ. ಯಶ್, ಗೋಲ್ಡನ್ ಸ್ಟಾರ್ ಗಣೇಶ್, ರಾಧಿಕಾ ಪಂಡಿತ್, ಮಯೂರಿ ಇನ್ನೂ ಹಲವರ ಹೆಸರುಗಳನ್ನು ಹೇಳುತ್ತಾ ಹೋಗಬಹುದು. ಈಗಲೂ ಆಗಾಗ್ಗೆ ಕಿರುತೆರೆಯ ಸ್ಟಾರ್​ಗಳು ಹಿರಿತೆರೆಯಲ್ಲಿ ಅದೃಷ್ಟ ಪರೀಕ್ಷೆ ಮಾಡುತ್ತಲೇ ಇರುತ್ತಾರೆ. ಕೆಲವರು ಯಶಸ್ಸು ಗಳಿಸುತ್ತಾರೆ ಕೆಲವರು ಇಲ್ಲ. ಕಿರುತೆರೆಯ ಸ್ಟಾರ್ ಆಗಿರುವ ವಿಜಯ್ ಸೂರ್ಯ ಇದೀಗ ಹೊಸ ಸಿನಿಮಾದೊಟ್ಟಿಗೆ ಹಿರಿತೆರೆಗೆ ಎಂಟ್ರಿ ನೀಡಿದ್ದಾರೆ.

ಜನಪ್ರಿಯ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿರುವ ವಿಜಯ್ ಸೂರ್ಯ ಈಗ ‘ವೀರಪುತ್ರ’ ಆಗಿದ್ದಾರೆ. ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸುತ್ತಿರುವ ಹೊಸ ಸಿನಿಮಾ ‘ವೀರಪುತ್ರ’ದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಚಾಕಲೇಟ್ ಹೀರೋನಂಥಿದ್ದ ವಿಜಯ್ ಸೂರ್ಯ ಈ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಉದ್ದ ಕೂದಲು ಬಿಟ್ಟು, ರಡಗ್ ಆಗಿ ಕಾಣಿಸಿಕೊಂಡಿದ್ದಾರೆ.

ಡಾ.ದೇವರಾಜ್.ಎಸ್ ಅವರು ‘ವೀರಪುತ್ರ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ದೇವರಾಜ್ ಅವರಿಗೆ ಇದು ಎರಡನೇ ಸಿನಿಮಾ. ಈ ಹಿಂದೆ ‘ಸಪ್ಲಿಮೆಂಟರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು. ‘ವೀರಪುತ್ರ’ ಸಿನಿಮಾವು ಮೆಡಿಕಲ್ ಮಾಫಿಯಾ ಹಾಗೂ ಫ್ಯಾಮಿಲಿ ರಿವೇಂಜ್ ಕತೆಯನ್ನು ಒಳಗೊಂಡಿದೆ. ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವ ದೇವರಾಜ್ ಕಥೆ, ಚಿತ್ರಕಥೆ ಜವಾಬ್ದಾರಿ ಹೊತ್ತಿದ್ದಾರೆ. ‘ಸಂಪ್ಲಿಮೆಂಟರಿ’, ‘ಧೀರಸಾಮ್ರಾಟ್’ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಗುರು ಬಂಡಿ ಅವರೇ ಈ ಸಿನಿಮಾಖ್ಕೂ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ:‘ಜೈ ಭೀಮ್​’ಗೆ ರಾಷ್ಟ್ರ ಪ್ರಶಸ್ತಿ ಮಿಸ್​ ಆಗಿದ್ದಕ್ಕೆ ಪ್ರಕಾಶ್​ ರಾಜ್​ ಬೇಸರ; ವಿಜಯ್​ ರಾಜಕೀಯದ ಎಂಟ್ರಿ ಬಗ್ಗೆ ನಟನ ಅಭಿಪ್ರಾಯ ಏನು?

ವಿಜಯ್ ಸೂರ್ಯ ಅವರಿಗೆ ಎದುರಾಗಿ ನಾಯಕಿಯಾಗಿ ಲೇಖಚಂದ್ರ ನಟಿಸುತ್ತಿದ್ದಾರೆ. ಹಿರಿಯ ನಟಿಯಾದ ಉಮಾಶ್ರೀ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಚಂದ್ರಶೇಖರ್ ಬಂಡಿಯಪ್ಪ ಸಂಭಾಷಣೆ ಬರೆದಿದ್ದಾರೆ, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ, ಸಂಕಲನವನ್ನು ಸಿ. ರವಿಚಂದ್ರನ್ ಮಾಡಿದ್ದಾರೆ, ಉದಯ್ ಆದಿತ್ಯ ಸಿನಿಮಾಟೊಗ್ರಫಿ ಸಿನಿಮಾಕ್ಕಿದೆ. ಜನಪ್ರಿಯ ಗೀತ ಸಾಹಿತಿ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಹೈದ್ರಾಬಾದ್ ಹಾಗೂ ಬೆಂಗಳೂರಿನಲ್ಲಿ 60ರಷ್ಟು ಚಿತ್ರೀಕರಣವನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕೆಲವು ಭಾಗದ ಚಿತ್ರೀಕರಣ ಅಕ್ಟೋಬರ್​ ತಿಂಗಳಿನಿಂದ ಪ್ರಾರಂಭ ಆಗಲಿದೆ.

ಕಿರುತೆರೆಯಲ್ಲಿ ಸೂಪರ್ ಸ್ಟಾರ್ ಆಗಿರುವ ವಿಜಯ್ ಸೂರ್ಯಗೆ ಇದು ಮೊದಲ ಸಿನಿಮಾ ಏನಲ್ಲ. ಈ ಹಿಂದೆ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿರುವ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ನಟಿಸಿದ್ದರು. ವಿಜಯ್ ಸೂರ್ಯ ಪ್ರಸ್ತುತ ‘ಪ್ರೇಮಲೋಕ’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಧಾರಾವಾಹಿ ನಡುವೆಯೇ ‘ವೀರಪುತ್ರ’ ಸಿನಿಮಾದ ಚಿತ್ರೀಕರಣವನ್ನೂ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ