ಸಾಲದ ಹಣ ವಾಪಸ್​ ನೀಡಲು ದ್ವಾರಕೀಶ್​ಗೆ ಕೋರ್ಟ್​ ಆದೇಶ​; ಅವರು ಪಡೆದಿರುವ ಸಾಲ ಎಷ್ಟು?

Dwarakish: 2013ರಲ್ಲಿ ಕೆಸಿಎನ್​ ಚಂದ್ರಶೇಖರ್‌ ಅವರಿಂದ ಸಾಲ ಪಡೆಯುವಾಗ ದ್ವಾರಕೀಶ್​ ಅವರು ಚೆಕ್​ ನೀಡಿದ್ದರು. ನಂತರ ‘ನಾನು ಚೆಕ್​ ನೀಡಿಲ್ಲ, ಚೆಕ್​ಗೆ ಸಹಿ ಮಾಡಿಲ್ಲ’ ಎಂದು ಅವರು ವಾದಿಸಿದ್ದರು.

ಸಾಲದ ಹಣ ವಾಪಸ್​ ನೀಡಲು ದ್ವಾರಕೀಶ್​ಗೆ ಕೋರ್ಟ್​ ಆದೇಶ​; ಅವರು ಪಡೆದಿರುವ ಸಾಲ ಎಷ್ಟು?
ದ್ವಾರಕೀಶ್
Follow us
| Updated By: ಮದನ್​ ಕುಮಾರ್​

Updated on: Dec 12, 2021 | 9:31 AM

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್​ (Dwarakish) ಅವರಿಗೆ ಸಂಕಷ್ಟ ಎದುರಾಗಿದೆ. ಅವರೀಗ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಸಾಲದ ಹಣ ವಾಪಸ್ ನೀಡುವಂತೆ ದ್ವಾರಕೀಶ್‌ಗೆ ಕೋರ್ಟ್​ ಆದೇಶಿಸಿದೆ. 1 ತಿಂಗಳಲ್ಲಿ ಸಾಲದ ಹಣ ಹಿಂದಿರುಗಿಸಲು ಗಡುವು ನೀಡಲಾಗಿದೆ. 2013ರಲ್ಲಿ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್‌ (KCN Chandrashekar) ಅವರಿಂದ ದ್ವಾರಕೀಶ್​ ಸಾಲ ಪಡೆದುಕೊಂಡಿದ್ದರು. ‘ಚಾರುಲತಾ’ ಸಿನಿಮಾ ಬಿಡುಗಡೆಗಾಗಿ 50 ಲಕ್ಷ ರೂ. ಮೊತ್ತವನ್ನು ಅವರು ಪಡೆದಿದ್ದರು. ನಂತರ ಸಾಲದ ಹಣ ವಾಪಸ್​ ನೀಡದೇ ಸತಾಯಿಸಿದ್ದರು. ಈ ಪ್ರಕರಣ ಕೋರ್ಟ್​ ಮೆಟ್ಟಿಲೇರಿತ್ತು. ಇನ್ನು ಒಂದು ತಿಂಗಳ ಒಳಗೆ 52 ಲಕ್ಷ ರೂ.ಗಳನ್ನು ಹಿಂದಿರುಗಿಸುವಂತೆ ದ್ವಾರಕೀಶ್​ ಅವರಿಗೆ ಕೋರ್ಟ್​ ಆದೇಶ ನೀಡಿದೆ.

2013ರಲ್ಲಿ ಕೆಸಿಎನ್​ ಚಂದ್ರಶೇಖರ್‌ ಅವರಿಂದ ಸಾಲ ಪಡೆಯುವಾಗ ದ್ವಾರಕೀಶ್​ ಅವರು ಚೆಕ್​ ನೀಡಿದ್ದರು. ನಂತರ ‘ನಾನು ಚೆಕ್​ ನೀಡಿಲ್ಲ, ಚೆಕ್​ಗೆ ಸಹಿ ಮಾಡಿಲ್ಲ’ ಎಂದು ಅವರು ವಾದಿಸಿದ್ದರು. ಹೀಗಾಗಿ ಕೋರ್ಟ್​ ಮೊರೆ ಹೋಗುವುದು ಕೆಸಿಎನ್​ ಚಂದ್ರಶೇಖರ್‌ ಅವರಿಗೆ ಅನಿವಾರ್ಯ ಆಗಿತ್ತು. ಆ ಸಹಿ ದ್ವಾರಕೀಶ್ ಅವರದ್ದೇ ಎಂದು ಫೋರೆನ್ಸಿಕ್ ಲ್ಯಾಬ್​ನಲ್ಲಿ ಸಾಬೀತಾಗಿತ್ತು.

ಹಣ ಹಿಂದಿರುಗಿಸುವಂತೆ 2019ರಲ್ಲಿ ದ್ವಾರಕೀಶ್​ ಅವರಿಗೆ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್​ ಕೋರ್ಟ್​ ಎತ್ತಿ ಹಿಡಿದಿದೆ.

ಇದನ್ನೂ ಓದಿ:

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!