AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ಹಣ ವಾಪಸ್​ ನೀಡಲು ದ್ವಾರಕೀಶ್​ಗೆ ಕೋರ್ಟ್​ ಆದೇಶ​; ಅವರು ಪಡೆದಿರುವ ಸಾಲ ಎಷ್ಟು?

Dwarakish: 2013ರಲ್ಲಿ ಕೆಸಿಎನ್​ ಚಂದ್ರಶೇಖರ್‌ ಅವರಿಂದ ಸಾಲ ಪಡೆಯುವಾಗ ದ್ವಾರಕೀಶ್​ ಅವರು ಚೆಕ್​ ನೀಡಿದ್ದರು. ನಂತರ ‘ನಾನು ಚೆಕ್​ ನೀಡಿಲ್ಲ, ಚೆಕ್​ಗೆ ಸಹಿ ಮಾಡಿಲ್ಲ’ ಎಂದು ಅವರು ವಾದಿಸಿದ್ದರು.

ಸಾಲದ ಹಣ ವಾಪಸ್​ ನೀಡಲು ದ್ವಾರಕೀಶ್​ಗೆ ಕೋರ್ಟ್​ ಆದೇಶ​; ಅವರು ಪಡೆದಿರುವ ಸಾಲ ಎಷ್ಟು?
ದ್ವಾರಕೀಶ್
TV9 Web
| Edited By: |

Updated on: Dec 12, 2021 | 9:31 AM

Share

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್​ (Dwarakish) ಅವರಿಗೆ ಸಂಕಷ್ಟ ಎದುರಾಗಿದೆ. ಅವರೀಗ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಸಾಲದ ಹಣ ವಾಪಸ್ ನೀಡುವಂತೆ ದ್ವಾರಕೀಶ್‌ಗೆ ಕೋರ್ಟ್​ ಆದೇಶಿಸಿದೆ. 1 ತಿಂಗಳಲ್ಲಿ ಸಾಲದ ಹಣ ಹಿಂದಿರುಗಿಸಲು ಗಡುವು ನೀಡಲಾಗಿದೆ. 2013ರಲ್ಲಿ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್‌ (KCN Chandrashekar) ಅವರಿಂದ ದ್ವಾರಕೀಶ್​ ಸಾಲ ಪಡೆದುಕೊಂಡಿದ್ದರು. ‘ಚಾರುಲತಾ’ ಸಿನಿಮಾ ಬಿಡುಗಡೆಗಾಗಿ 50 ಲಕ್ಷ ರೂ. ಮೊತ್ತವನ್ನು ಅವರು ಪಡೆದಿದ್ದರು. ನಂತರ ಸಾಲದ ಹಣ ವಾಪಸ್​ ನೀಡದೇ ಸತಾಯಿಸಿದ್ದರು. ಈ ಪ್ರಕರಣ ಕೋರ್ಟ್​ ಮೆಟ್ಟಿಲೇರಿತ್ತು. ಇನ್ನು ಒಂದು ತಿಂಗಳ ಒಳಗೆ 52 ಲಕ್ಷ ರೂ.ಗಳನ್ನು ಹಿಂದಿರುಗಿಸುವಂತೆ ದ್ವಾರಕೀಶ್​ ಅವರಿಗೆ ಕೋರ್ಟ್​ ಆದೇಶ ನೀಡಿದೆ.

2013ರಲ್ಲಿ ಕೆಸಿಎನ್​ ಚಂದ್ರಶೇಖರ್‌ ಅವರಿಂದ ಸಾಲ ಪಡೆಯುವಾಗ ದ್ವಾರಕೀಶ್​ ಅವರು ಚೆಕ್​ ನೀಡಿದ್ದರು. ನಂತರ ‘ನಾನು ಚೆಕ್​ ನೀಡಿಲ್ಲ, ಚೆಕ್​ಗೆ ಸಹಿ ಮಾಡಿಲ್ಲ’ ಎಂದು ಅವರು ವಾದಿಸಿದ್ದರು. ಹೀಗಾಗಿ ಕೋರ್ಟ್​ ಮೊರೆ ಹೋಗುವುದು ಕೆಸಿಎನ್​ ಚಂದ್ರಶೇಖರ್‌ ಅವರಿಗೆ ಅನಿವಾರ್ಯ ಆಗಿತ್ತು. ಆ ಸಹಿ ದ್ವಾರಕೀಶ್ ಅವರದ್ದೇ ಎಂದು ಫೋರೆನ್ಸಿಕ್ ಲ್ಯಾಬ್​ನಲ್ಲಿ ಸಾಬೀತಾಗಿತ್ತು.

ಹಣ ಹಿಂದಿರುಗಿಸುವಂತೆ 2019ರಲ್ಲಿ ದ್ವಾರಕೀಶ್​ ಅವರಿಗೆ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್​ ಕೋರ್ಟ್​ ಎತ್ತಿ ಹಿಡಿದಿದೆ.

ಇದನ್ನೂ ಓದಿ:

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ