AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ಹಣ ವಾಪಸ್​ ನೀಡಲು ದ್ವಾರಕೀಶ್​ಗೆ ಕೋರ್ಟ್​ ಆದೇಶ​; ಅವರು ಪಡೆದಿರುವ ಸಾಲ ಎಷ್ಟು?

Dwarakish: 2013ರಲ್ಲಿ ಕೆಸಿಎನ್​ ಚಂದ್ರಶೇಖರ್‌ ಅವರಿಂದ ಸಾಲ ಪಡೆಯುವಾಗ ದ್ವಾರಕೀಶ್​ ಅವರು ಚೆಕ್​ ನೀಡಿದ್ದರು. ನಂತರ ‘ನಾನು ಚೆಕ್​ ನೀಡಿಲ್ಲ, ಚೆಕ್​ಗೆ ಸಹಿ ಮಾಡಿಲ್ಲ’ ಎಂದು ಅವರು ವಾದಿಸಿದ್ದರು.

ಸಾಲದ ಹಣ ವಾಪಸ್​ ನೀಡಲು ದ್ವಾರಕೀಶ್​ಗೆ ಕೋರ್ಟ್​ ಆದೇಶ​; ಅವರು ಪಡೆದಿರುವ ಸಾಲ ಎಷ್ಟು?
ದ್ವಾರಕೀಶ್
TV9 Web
| Edited By: |

Updated on: Dec 12, 2021 | 9:31 AM

Share

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್​ (Dwarakish) ಅವರಿಗೆ ಸಂಕಷ್ಟ ಎದುರಾಗಿದೆ. ಅವರೀಗ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಸಾಲದ ಹಣ ವಾಪಸ್ ನೀಡುವಂತೆ ದ್ವಾರಕೀಶ್‌ಗೆ ಕೋರ್ಟ್​ ಆದೇಶಿಸಿದೆ. 1 ತಿಂಗಳಲ್ಲಿ ಸಾಲದ ಹಣ ಹಿಂದಿರುಗಿಸಲು ಗಡುವು ನೀಡಲಾಗಿದೆ. 2013ರಲ್ಲಿ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್‌ (KCN Chandrashekar) ಅವರಿಂದ ದ್ವಾರಕೀಶ್​ ಸಾಲ ಪಡೆದುಕೊಂಡಿದ್ದರು. ‘ಚಾರುಲತಾ’ ಸಿನಿಮಾ ಬಿಡುಗಡೆಗಾಗಿ 50 ಲಕ್ಷ ರೂ. ಮೊತ್ತವನ್ನು ಅವರು ಪಡೆದಿದ್ದರು. ನಂತರ ಸಾಲದ ಹಣ ವಾಪಸ್​ ನೀಡದೇ ಸತಾಯಿಸಿದ್ದರು. ಈ ಪ್ರಕರಣ ಕೋರ್ಟ್​ ಮೆಟ್ಟಿಲೇರಿತ್ತು. ಇನ್ನು ಒಂದು ತಿಂಗಳ ಒಳಗೆ 52 ಲಕ್ಷ ರೂ.ಗಳನ್ನು ಹಿಂದಿರುಗಿಸುವಂತೆ ದ್ವಾರಕೀಶ್​ ಅವರಿಗೆ ಕೋರ್ಟ್​ ಆದೇಶ ನೀಡಿದೆ.

2013ರಲ್ಲಿ ಕೆಸಿಎನ್​ ಚಂದ್ರಶೇಖರ್‌ ಅವರಿಂದ ಸಾಲ ಪಡೆಯುವಾಗ ದ್ವಾರಕೀಶ್​ ಅವರು ಚೆಕ್​ ನೀಡಿದ್ದರು. ನಂತರ ‘ನಾನು ಚೆಕ್​ ನೀಡಿಲ್ಲ, ಚೆಕ್​ಗೆ ಸಹಿ ಮಾಡಿಲ್ಲ’ ಎಂದು ಅವರು ವಾದಿಸಿದ್ದರು. ಹೀಗಾಗಿ ಕೋರ್ಟ್​ ಮೊರೆ ಹೋಗುವುದು ಕೆಸಿಎನ್​ ಚಂದ್ರಶೇಖರ್‌ ಅವರಿಗೆ ಅನಿವಾರ್ಯ ಆಗಿತ್ತು. ಆ ಸಹಿ ದ್ವಾರಕೀಶ್ ಅವರದ್ದೇ ಎಂದು ಫೋರೆನ್ಸಿಕ್ ಲ್ಯಾಬ್​ನಲ್ಲಿ ಸಾಬೀತಾಗಿತ್ತು.

ಹಣ ಹಿಂದಿರುಗಿಸುವಂತೆ 2019ರಲ್ಲಿ ದ್ವಾರಕೀಶ್​ ಅವರಿಗೆ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್​ ಕೋರ್ಟ್​ ಎತ್ತಿ ಹಿಡಿದಿದೆ.

ಇದನ್ನೂ ಓದಿ:

ಆಯುಷ್ಮಾನ್ ಭವ ಚಿತ್ರದ ಹಣದ ವಿಚಾರಕ್ಕೆ ಕಿರಿಕ್, ದ್ವಾರಕೀಶ್​ ನಿವಾಸಕ್ಕೆ ನುಗ್ಗಿ ವಿತರಕರಿಂದ ಗಲಾಟೆ

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?