AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ಬಂದಾಗ ಇಡೀ ‘ಟಾಕ್ಸಿಕ್’ ಸೆಟ್ ಸೈಲೆಂಟ್ ಆಗುತ್ತೆ’; ಬಾಲಿವುಡ್ ನಟ ಅಕ್ಷಯ್​ ಅಪರೂಪದ ಹೇಳಿಕೆ

ಬಾಲಿವುಡ್ ನಟ ಅಕ್ಷಯ್ ಒಬೆರಾಯ್ ಅವರು 'ಟಾಕ್ಸಿಕ್' ಚಿತ್ರದ ಸೆಟ್‌ನಲ್ಲಿ ಯಶ್ ಅವರೊಂದಿಗಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಯಶ್ ಅವರ ಲುಕ್, ಸೆಟ್‌ನಲ್ಲಿ ಅವರ ಉಪಸ್ಥಿತಿಯಿಂದ ಉಂಟಾಗುವ ಮೌನವನ್ನು ಅವರು ಪ್ರಶಂಸಿಸಿದ್ದಾರೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, 2026ರ ಮಾರ್ಚ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

‘ಯಶ್ ಬಂದಾಗ ಇಡೀ ‘ಟಾಕ್ಸಿಕ್’ ಸೆಟ್ ಸೈಲೆಂಟ್ ಆಗುತ್ತೆ’; ಬಾಲಿವುಡ್ ನಟ ಅಕ್ಷಯ್​ ಅಪರೂಪದ ಹೇಳಿಕೆ
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on:Aug 29, 2025 | 7:31 AM

Share

ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ಕನ್ನಡದಿಂದ ಜರ್ನಿ ಆರಂಭಿಸಿದ ಅವರು ಈಗ ಹಾಲಿವುಡ್​ವರೆಗೆ ತಮ್ಮ ಹೆಸರನ್ನು ಪಸರಿಸಿಕೊಂಡಿದ್ದಾರೆ. ಸದ್ಯ ಅವರು ‘ಟಾಕ್ಸಿಕ್’ ಸಿನಿಮಾ  (Toxic Movie) ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಿರುವಾಗಲೇ ಯಶ್ ಬಗ್ಗೆ ಬಾಲಿವುಡ್ ನಟ ಅಕ್ಷಯ್ ಒಬೆರಾಯ್ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಸೆಟ್​ನ ಅನುಭವಗಳನ್ನು ಅವರು ತೆರೆದಿಟ್ಟಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕ ಕೂಡ ಹೌದು. ಈ ಚಿತ್ರದಲ್ಲಿ ಬಾಲಿವುಡ್ ಯುವ ನಟ ಅಕ್ಷಯ್ ಒಬೆರಾಯ್ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್​​ನಲ್ಲಿ ಮೂಡಿ ಬರುತ್ತಿದೆ. ಎರಡೂ ಭಾಷೆಯಲ್ಲಿ ಡೈಲಾಗ್ ಹೇಳಬೇಕಿದೆ. ಅಕ್ಷಯ್ ಅವರು ಈ ಚಿತ್ರಕ್ಕಾಗಿ ಕನ್ನಡ ಕಲಿಯುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ
Image
ಇಂದು ಆ್ಯಂಕರ್ ಅನುಶ್ರೀ ಮದುವೆ; ಮುಹೂರ್ತ, ವಿವಾಹದ ಬಗ್ಗೆ ಇಲ್ಲಿದೆ ವಿವರ
Image
KGF ಚಾಚಾಗೆ ಕ್ಯಾನ್ಸರ್ ಎಂದಾಗ ಯಶ್ ಪ್ರತಿಕ್ರಿಯೆ ಏನು? ಊಹೆಗೂ ಮೀರಿದ್ದು
Image
ಹರೀಶ್ ರಾಯ್ ಪರಿಸ್ಥಿತಿ ನೋಡಿ; ಸಹಾಯಕ್ಕಾಗಿ ಅಂಗಲಾಚಿದ ‘ಕೆಜಿಎಫ್’ ಚಾಚಾ

ಅಕ್ಷಯ್ ಅವರು ಈಗ ಯಶ್ ಬಗ್ಗೆ ಮಾತನಾಡಿದ್ದಾರೆ. ಯಶ್ ಸಖತ್ ಹ್ಯಾಂಡ್ಸಮ್ ಆಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇಡೀ ಸೆಟ್ ಅವರು ಬಂದಾಗ ಸೈಲೆಂಟ್ ಆಗುತ್ತದೆ ಎಂಬುದನ್ನು ಕೂಡ ವಿವರಿಸಿದ್ದಾರೆ. ‘ಅಂದು ಯಶ್ ಜನ್ಮದಿನ. ಅವರು ಟಾಕ್ಸಿಕ್ ಸಿನಿಮಾ ಸೆಟ್​ನಿಂದ ಹೊರಕ್ಕೆ ಬರುತ್ತಿದ್ದರು. ಸೂಟ್ ಧರಿಸಿದ್ದು, ಬಿಳಿ ಬಣ್ಣ ಟೋಪಿ ಹಾಕಿದ್ದರು. ನಾನು ಅವರನ್ನು ಮೊದಲ ಬಾರಿಗೆ ನೋಡಿದ್ದು ಆಗಲೇ. ಅವರು ನಿಜಕ್ಕೂ ಗುಡ್ ಲುಕಿಂಗ್ ವ್ಯಕ್ತಿ’ ಎಂದಿದ್ದಾರೆ ಅಕ್ಷಯ್.

ಯಶ್ ಬಗ್ಗೆ ಅಕ್ಷಯ್ ಹೇಳಿದ ಮಾತು

‘ನನ್ನ ಶಾಟ್ ಪೂರ್ಣಗೊಂಡಿತು. ಆ ಬಳಿಕ ಯಶ್ ಬಂದರು. ಅವರು ಬರುತ್ತಿದ್ದಂತೆ ಇಡೀ ಸೆಟ್ ಸೈಲೆಂಟ್ ಆಗುತ್ತದೆ. ಇಂತಹ ಅದ್ಭುತ ನಟ ಬರುತ್ತಿದ್ದಾನೆ ಎಂದಾಗ ಸೆಟ್ ಸೈಲೆಂಟ್ ಆಗಲೇಬೇಕು. ಅವರು ನಿಜಕ್ಕೂ ಒಳ್ಳೆಯ ಲುಕ್ ಹೊಂದಿರೋ ವ್ಯಕ್ತಿ. ಅವರ ಆಲೋಚೆನಗಳು ನಿಜಕ್ಕೂ ಅದ್ಭುತವಾಗಿದೆ’ ಎಂದು ಅಕ್ಷಯ್ ಹೇಳಿದ್ದಾರೆ.

ಇದನ್ನೂ ಓದಿ: ಯಶ್ ಕೆಲಸದ ಶೈಲಿ, ಮಾನವೀಯತೆ ನೋಡಿ ದಂಗಾದ ಬಾಲಿವುಡ್ ನಟ ಅಕ್ಷಯ್

‘ಟಾಕ್ಸಿಕ್’ ಸಿನಿಮಾ ಶೂಟ್ ಭರದಿಂದ ಸಾಗುತ್ತಿದೆ. ಮುಂದಿನ ಮಾರ್ಚ್​​ಗೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Fri, 29 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ