AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್: 7 ಜನ ಖಾಕಿ ವಶಕ್ಕೆ

ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪಿಗಳನ್ನು ಪೊಲೀಸ್​ ವಶಕ್ಕೆ ಪಡೆದಿದ್ದಾರೆ. ರಾಬರ್ಟ್‌ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನರನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್: 7 ಜನ ಖಾಕಿ ವಶಕ್ಕೆ
ರಾಬರ್ಟ್‌ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್
KUSHAL V
|

Updated on:Dec 20, 2020 | 5:48 PM

Share

ಬೆಂಗಳೂರು: ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪಿಗಳನ್ನು ಪೊಲೀಸ್​ ವಶಕ್ಕೆ ಪಡೆದಿದ್ದಾರೆ. ರಾಬರ್ಟ್‌ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನರನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೀಪಕ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ ಆರೋಪಿ ಮಂಜುನಾಥ್ ಹಾಗೂ ಆತನ ಸಹಚರರು ಸ್ಕೆಚ್ ಹಾಕುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸುಳಿವು ಸಿಕ್ಕ ಕೂಡಲೇ ದಾಳಿ‌ ಮಾಡಿದ್ದ ಜಯನಗರ ಪೊಲೀಸರು ಸದ್ಯ ಏಳು ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ನಿರ್ಮಾಪಕ ಉಮಾಪತಿಯವರ ಅಣ್ಣನಿಗೆ ಘಟನೆಯ ಬಗ್ಗೆ ಮಾಹಿತಿ ಸಹ ನೀಡಿದ್ದಾರೆ.

ರೌಡಿಶೀಟರ್ ಪಳನಿ ಗ್ಯಾಂಗ್​ಗೆ ಸೇರಿರುವ ನೀಲಸಂದ್ರ ನಿವಾಸಿಯಾದ ಮಂಜುನಾಥ್​ನಿಂದ ಕೃತ್ಯಕ್ಕೆ ಪ್ಲಾನ್ ನಡೆದಿದೆ ಎಂದು ಹೇಳಲಾಗಿದೆ. ಯಾವ ಕಾರಣಕ್ಕೆ ಕೊಲೆಗೆ ಸ್ಕೆಚ್ ಹಾಕಲಾಗಿತ್ತು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಟಿವಿ 9ಗೆ ದಕ್ಷಿಣ ವಿಭಾಗ DCP ಹರೀಶ್ ಪಾಂಡೆ ಮಾಹಿತಿ ಕೊಟ್ಟಿದ್ದಾರೆ.

ಸೈಕಲ್ ರವಿ ಹತ್ಯೆಗೂ ಪ್ಲಾನ್​ ಮಾಡಿದ್ದ ಆರೋಪಿಗಳು ಅಂದ ಹಾಗೆ, ದೀಪಕ್​ರ ಕೊಲೆಗೆ ಸ್ಕೆಚ್​ ಹಾಕಿದ್ದ ಆರೋಪಿಗಳು ಕುಖ್ಯಾತ ರೌಡಿಶೀಟರ್​ ಸೈಕಲ್ ರವಿ ಹಾಗೂ ಆತನ ಸಹಚರ ಬೇಕರಿ ರಘು ಸೇರಿದಂತೆ ನಾಲ್ವರ ಹತ್ಯೆಗೆ ಸಂಚುರೂಪಿಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಮುಂಜಾನೆ 5ರ ಸುಮಾರಿಗೆ ಬಸವನಗುಡಿ ನ್ಯಾಷನಲ್ ಕಾಲೇಜು ಬಳಿ ಸೆರೆಹಿಡಿಯಲಾಗಿದೆ. ಆರೋಪಿಗಳು ರಜತಾದ್ರಿ ಹೋಟೆಲ್​ ಮುಂದೆ ಹೊಂಚುಹಾಕುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!

Published On - 4:46 pm, Sun, 20 December 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?