AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಶಾರುಖ್​ ಫೋಟೋ ರಾರಾಜಿಸಿದ್ದು, ‘ವಿ ಲವ್​ ಯು’ ಎಂದು ಬರೆಯಲಾಗಿದೆ. ಈ ಫೋಟೋ ಈಗ ವೈರಲ್​ ಆಗಿದೆ.

ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ
ಶಾರುಖ್​ ಖಾನ್
TV9 Web
| Edited By: |

Updated on: Nov 03, 2021 | 5:43 PM

Share

ಶಾರುಖ್​ ಖಾನ್ ನವೆಂಬರ್​ 2ರಂದು ಹುಟ್ಟುಹಬ್ಬದ ಆಚರಿಸಿಕೊಂಡಿದ್ದಾರೆ. ಡ್ರಗ್​ ಕೇಸ್​ನಲ್ಲಿ ಜೈಲಿಗೆ ತೆರಳಿದ್ದ ಮಗ ಆರ್ಯನ್​ ಖಾನ್​ ರಿಲೀಸ್​ ಆಗಿದ್ದಾರೆ. ಇದು ಶಾರುಖ್​ ಬರ್ತ್​ಡೇ ಸಂಭ್ರಮವನ್ನು ಹೆಚ್ಚಿಸಿತ್ತು. ಆದಾಗ್ಯೂ, ಸಿಂಪಲ್​ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಕಿಂಗ್​ ಖಾನ್​. ಶಾರುಖ್​ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಬಂದಿದ್ದರು. ಈ ಮಧ್ಯೆ ಶಾರುಖ್​ ಖಾನ್​ ಫೋಟೋ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ರಾರಾಜಿಸಿದೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಶಾರುಖ್​ ಫೋಟೋ ರಾರಾಜಿಸಿದ್ದು, ‘ವಿ ಲವ್​ ಯು’ ಎಂದು ಬರೆಯಲಾಗಿದೆ. ಈ ಫೋಟೋ ಈಗ ವೈರಲ್​ ಆಗಿದೆ. ಈ ವಿಡಿಯೋಗಳನ್ನು ಅವರ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಶಾರುಖ್​ ಖಾನ್​ ಅವರಿಗೆ ಈ ತಿಂಗಳು ಬಹಳ ವಿಶೇಷವಾದದ್ದು. ಏಕೆಂದರೆ, ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ. ಜತೆಗೆ ಕತ್ತಲಿಂದ ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಾವಳಿ ಹಬ್ಬ ಇದೆ. ನವೆಂಬರ್​ 13ರಂದು ಆರ್ಯನ್​ ಖಾನ್​ ಜನ್ಮದಿನ. ಈ ಎಲ್ಲಾ ಕಾರಣಕ್ಕೆ ಶಾರುಖ್​ ಎಗ್ಸೈಟ್​ ಆಗಿದ್ದಾರೆ. ಮತ್ತೆ ಕುಟುಂಬದಲ್ಲಿ ಸಂತಸ ಮೂಡಿದೆ. ಇಂದು ಕುಟುಂಬದವರ ಜತೆ ಸಿಂಪಲ್​ ಆಗಿ ಶಾರುಖ್​ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಪ್ರತಿ ಬಾರಿ ಶಾರುಖ್​ ಜನ್ಮದಿನದಂದು ಅವರ ಮನೆಯ ಎದುರು ಸಾವಿರಾರು ಅಭಿಮಾನಿಗಳು ಬಂದು ನಿಲ್ಲುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

ಶಾರುಖ್​ ಪತ್ನಿ ಗೌರಿ ಖಾನ್​ ಹಿಂದು ಆಗಿದ್ದರು. ಈ ಕಾರಣಕ್ಕೆ ಶಾರುಖ್​ ತಮ್ಮ ಮನೆಯಲ್ಲಿ ಪ್ರತಿ ವರ್ಷ ದೀಪಾವಳಿ ಆಚರಿಸುತ್ತಾರೆ. ಈ ಬಾರಿಯೂ ಬೆಳಕಿನ ಹಬ್ಬವನ್ನು ಕುಟುಂಬ ಸಮೇತವಾಗಿ ಆಚರಿಸಲು ಯೋಚನೆ ಮಾಡಿದ್ದಾರೆ. ಆರ್ಯನ್​ ಖಾನ್​ ಬರ್ತ್​ಡೇ ಕೂಡ ಶಾರುಖ್​ ಮನೆಯಲ್ಲೇ ಸೆಲಬ್ರೇಟ್​ ಮಾಡಲಿದ್ದಾರೆ.

ಆರ್ಯನ್​ ಖಾನ್​ ಡ್ರಗ್​ ಪ್ರಕರಣದಿಂದ ಸಿನಿಮಾ ಕೆಲಸಗಳಿಗೆ ತೆರಳೋಕೆ ಶಾರುಖ್​ಗೆ ಸಾಧ್ಯವಾಗಿಲ್ಲ. ಮಗನ ಚಿಂತೆಯಲ್ಲಿ ಅವರು ಸರಿಯಾಗಿ ವರ್ಕೌಟ್​ ಕೂಡ ಮಾಡಿರಲಿಲ್ಲ. ಮಗನ ಬರ್ತ್​ಡೇ ನಂತರ ಅವರು ಮತ್ತೆ ಸಿನಿಮಾ ಕೆಲಸಗಳಿಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು, ಶಾರುಖ್​ ಬರ್ತ್​ಡೇ ಅಂಗವಾಗಿ ಅನೇಕ ಸೆಲೆಬ್ರಟಿಗಳು, ಅಭಿಮಾನಿಗಳು ವಿಶ್​ ಮಾಡಿದ್ದಾರೆ. ಶಾರುಖ್​ ನಟಿಸುತ್ತಿರುವ ಸಿನಿಮಾ ತಂಡದಿಂದ ಏನಾದರೂ ಅಪ್​ಡೇಟ್​ ಸಿಗಲಿದೆಯೇ ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿತ್ತು. ಆದರೆ, ಅದು ಈಡೇರಲಿಲ್ಲ.

ಇದನ್ನೂ ಓದಿ: Aryan Khan Jail: ಜೈಲಿನಿಂದ ಹೊರಬಂದ ಆರ್ಯನ್​ ಖಾನ್​; ಶಾರುಖ್​ ನಿವಾಸ ಮನ್ನತ್​ ಎದುರು ಫ್ಯಾನ್ಸ್​ ಸಂಭ್ರಮ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?