AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಶಾರುಖ್​ ಫೋಟೋ ರಾರಾಜಿಸಿದ್ದು, ‘ವಿ ಲವ್​ ಯು’ ಎಂದು ಬರೆಯಲಾಗಿದೆ. ಈ ಫೋಟೋ ಈಗ ವೈರಲ್​ ಆಗಿದೆ.

ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ
ಶಾರುಖ್​ ಖಾನ್
TV9 Web
| Edited By: |

Updated on: Nov 03, 2021 | 5:43 PM

Share

ಶಾರುಖ್​ ಖಾನ್ ನವೆಂಬರ್​ 2ರಂದು ಹುಟ್ಟುಹಬ್ಬದ ಆಚರಿಸಿಕೊಂಡಿದ್ದಾರೆ. ಡ್ರಗ್​ ಕೇಸ್​ನಲ್ಲಿ ಜೈಲಿಗೆ ತೆರಳಿದ್ದ ಮಗ ಆರ್ಯನ್​ ಖಾನ್​ ರಿಲೀಸ್​ ಆಗಿದ್ದಾರೆ. ಇದು ಶಾರುಖ್​ ಬರ್ತ್​ಡೇ ಸಂಭ್ರಮವನ್ನು ಹೆಚ್ಚಿಸಿತ್ತು. ಆದಾಗ್ಯೂ, ಸಿಂಪಲ್​ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಕಿಂಗ್​ ಖಾನ್​. ಶಾರುಖ್​ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಬಂದಿದ್ದರು. ಈ ಮಧ್ಯೆ ಶಾರುಖ್​ ಖಾನ್​ ಫೋಟೋ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ರಾರಾಜಿಸಿದೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಶಾರುಖ್​ ಫೋಟೋ ರಾರಾಜಿಸಿದ್ದು, ‘ವಿ ಲವ್​ ಯು’ ಎಂದು ಬರೆಯಲಾಗಿದೆ. ಈ ಫೋಟೋ ಈಗ ವೈರಲ್​ ಆಗಿದೆ. ಈ ವಿಡಿಯೋಗಳನ್ನು ಅವರ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಶಾರುಖ್​ ಖಾನ್​ ಅವರಿಗೆ ಈ ತಿಂಗಳು ಬಹಳ ವಿಶೇಷವಾದದ್ದು. ಏಕೆಂದರೆ, ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ. ಜತೆಗೆ ಕತ್ತಲಿಂದ ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಾವಳಿ ಹಬ್ಬ ಇದೆ. ನವೆಂಬರ್​ 13ರಂದು ಆರ್ಯನ್​ ಖಾನ್​ ಜನ್ಮದಿನ. ಈ ಎಲ್ಲಾ ಕಾರಣಕ್ಕೆ ಶಾರುಖ್​ ಎಗ್ಸೈಟ್​ ಆಗಿದ್ದಾರೆ. ಮತ್ತೆ ಕುಟುಂಬದಲ್ಲಿ ಸಂತಸ ಮೂಡಿದೆ. ಇಂದು ಕುಟುಂಬದವರ ಜತೆ ಸಿಂಪಲ್​ ಆಗಿ ಶಾರುಖ್​ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಪ್ರತಿ ಬಾರಿ ಶಾರುಖ್​ ಜನ್ಮದಿನದಂದು ಅವರ ಮನೆಯ ಎದುರು ಸಾವಿರಾರು ಅಭಿಮಾನಿಗಳು ಬಂದು ನಿಲ್ಲುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

ಶಾರುಖ್​ ಪತ್ನಿ ಗೌರಿ ಖಾನ್​ ಹಿಂದು ಆಗಿದ್ದರು. ಈ ಕಾರಣಕ್ಕೆ ಶಾರುಖ್​ ತಮ್ಮ ಮನೆಯಲ್ಲಿ ಪ್ರತಿ ವರ್ಷ ದೀಪಾವಳಿ ಆಚರಿಸುತ್ತಾರೆ. ಈ ಬಾರಿಯೂ ಬೆಳಕಿನ ಹಬ್ಬವನ್ನು ಕುಟುಂಬ ಸಮೇತವಾಗಿ ಆಚರಿಸಲು ಯೋಚನೆ ಮಾಡಿದ್ದಾರೆ. ಆರ್ಯನ್​ ಖಾನ್​ ಬರ್ತ್​ಡೇ ಕೂಡ ಶಾರುಖ್​ ಮನೆಯಲ್ಲೇ ಸೆಲಬ್ರೇಟ್​ ಮಾಡಲಿದ್ದಾರೆ.

ಆರ್ಯನ್​ ಖಾನ್​ ಡ್ರಗ್​ ಪ್ರಕರಣದಿಂದ ಸಿನಿಮಾ ಕೆಲಸಗಳಿಗೆ ತೆರಳೋಕೆ ಶಾರುಖ್​ಗೆ ಸಾಧ್ಯವಾಗಿಲ್ಲ. ಮಗನ ಚಿಂತೆಯಲ್ಲಿ ಅವರು ಸರಿಯಾಗಿ ವರ್ಕೌಟ್​ ಕೂಡ ಮಾಡಿರಲಿಲ್ಲ. ಮಗನ ಬರ್ತ್​ಡೇ ನಂತರ ಅವರು ಮತ್ತೆ ಸಿನಿಮಾ ಕೆಲಸಗಳಿಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು, ಶಾರುಖ್​ ಬರ್ತ್​ಡೇ ಅಂಗವಾಗಿ ಅನೇಕ ಸೆಲೆಬ್ರಟಿಗಳು, ಅಭಿಮಾನಿಗಳು ವಿಶ್​ ಮಾಡಿದ್ದಾರೆ. ಶಾರುಖ್​ ನಟಿಸುತ್ತಿರುವ ಸಿನಿಮಾ ತಂಡದಿಂದ ಏನಾದರೂ ಅಪ್​ಡೇಟ್​ ಸಿಗಲಿದೆಯೇ ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿತ್ತು. ಆದರೆ, ಅದು ಈಡೇರಲಿಲ್ಲ.

ಇದನ್ನೂ ಓದಿ: Aryan Khan Jail: ಜೈಲಿನಿಂದ ಹೊರಬಂದ ಆರ್ಯನ್​ ಖಾನ್​; ಶಾರುಖ್​ ನಿವಾಸ ಮನ್ನತ್​ ಎದುರು ಫ್ಯಾನ್ಸ್​ ಸಂಭ್ರಮ

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ